Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯಲ್ಲಿ ‘ಮಂಜಣ್ಣನ ನೆನಪು’ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 31

    August 28, 2025

    ಅತ್ತಾವರದ ಸರೋಜಿನೀ ಮಧುಸೂದನ ಕುಶೆ ವಿದ್ಯಾಲಯದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

    August 28, 2025

    ಮಂಗಳೂರಿನ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ | ಆಗಸ್ಟ್ 31

    August 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ಕನ್ನಡ ಭವನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
    Awards

    ಕಾಸರಗೋಡಿನ ಕನ್ನಡ ಭವನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

    August 28, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ದಿನಾಂಕ 27 ಆಗಸ್ಟ್ 2025ರಂದು ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025’ ಪ್ರಶಸ್ತಿ ಪ್ರದಾನ ನಡೆಯಿತು.

    ಪ್ರಶಸ್ತಿ ಸ್ವೀಕರಿಸಿದ ಚಲನಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಇವರು ಮಾತನಾಡಿ “ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ. ರಾಷ್ಟ್ರಕವಿಗಳ ಜೀವನ ಸಾಧನೆಯ ಕುರಿತು ಚಲನಚಿತ್ರವೊಂದು ನಿರ್ಮಾಣವಾಗಲಿದ್ದು, ಅದರ ಸಿದ್ಧತೆಯ ನಡುವೆ ಮಹಾಕವಿಗಳ ಹೆಸರಿನ ಪ್ರಶಸ್ತಿಯನ್ನು ಸಂತೋಷದಿಂದ ಹಾಗೂ ಹೆಮ್ಮೆಯಿಂದ ಸ್ವೀಕರಿಸಿದ್ದೇನೆ” ಎಂದು ಹೇಳಿದರು.

    ಕ.ಸಾ.ಪ. ಕೇರಳ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ನಿರ್ದೇಶಕ ಡಾ. ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಭವನ ಮತ್ತು ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರಾದ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಉದ್ಘಾಟಿಸಿದರು. ಪ್ರಶಸ್ತಿ ಪ್ರದಾನ ಬಳಿಕ ಗಣೇಶ್ ಕಾಸರಗೋಡು ದಂಪತಿಗಳನ್ನು ಗೌರವಿಸಲಾಯಿತು. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ರಾಧಾಕೃಷ್ಣ ಕೆ. ಉಳಿಯತಡ್ಕ ಅಭಿನಂದನಾ ಭಾಷಣ ಮಾಡಿದರು. ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಪು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪತ್ರಕರ್ತ ಜಗನ್ನಾಥ್ ಶೆಟ್ಟಿ, ಜನಪ್ರಿಯೆ ವೈದ್ಯೆ ಡಾ. ಸುಜಯಾ ಪಾಂಡ್ಯ ಶುಭ ಹಾರೈಸಿದರು. ಕನ್ನಡ ಭವನದ ನಿರ್ದೇಶಕ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.

    ಜಾನಪದ ಕಲಾವಿದೆ ಸುಭಾಷಿನಿ ಚಂದ್ರ ಕಣ್ಣೆಟಿಪಾರೆ ತಂಡದಿಂದ ಜಾನಪದ ನೃತ್ಯ, ಭಕ್ತಿ ಭಾವಗೀತೆ, ಪಾಡ್ದನ ಗಾಯನ ಜರಗಿತು. ಸುಭಾಷಿನಿ ಜತೆ ಸರಸ್ವತಿ, ಪ್ರೇಮ, ಸೌಮ್ಯ ಕೆ.ಎನ್., ಸನ್ವಿತ ಬಿ., ಸೌಮ್ಯ ಬಿ.ಎಸ್., ಸುಕನ್ಯ ಬಿ.ಎಸ್. ಪಾಲ್ಗೊಂಡಿದ್ದರು. ಎಲ್ಲಾ ಕಲಾವಿದರಿಗೆ ಸ್ಮರಣಿಕೆ, ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು. ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ ಸ್ವಾಗತಿಸಿ, ಕಾರ್ಯದರ್ಶಿ ವಸಂತ್ ಕೆರೆಮನೆ ವಂದಿಸಿದರು. ಗಣೇಶ್ ಹಬ್ಬದ ವಿಶೇಷ ಉಪಚಾರ ಸಂದ್ಯಾರಾಣಿ ಟೀಚರ್ ನಿರ್ವಹಿಸಿದರು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ
    Next Article ಮಂಗಳೂರಿನ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ | ಆಗಸ್ಟ್ 31
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಮಂಜಣ್ಣನ ನೆನಪು’ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 31

    August 28, 2025

    ಅತ್ತಾವರದ ಸರೋಜಿನೀ ಮಧುಸೂದನ ಕುಶೆ ವಿದ್ಯಾಲಯದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

    August 28, 2025

    ಮಂಗಳೂರಿನ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ | ಆಗಸ್ಟ್ 31

    August 28, 2025

    ಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ

    August 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.