Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ

    December 4, 2025

    ಉಡುಪಿಯಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ

    December 4, 2025

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಡಿಸೆಂಬರ್ 04

    December 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ
    Awards

    ಉಡುಪಿಯಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ

    December 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜ್ಯುಕೇಶನ್ ಸಹಯೋಗದಲ್ಲಿ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ದಿನಾಂಕ 29 ನವೆಂಬರ್ 2025ರಂದು ಹಮ್ಮಿಕೊಂಡಿದ್ದ ಡಾ. ಯು.ಪಿ. ಉಪಾಧ್ಯಾಯ ಹಾಗೂ ಡಾ. ಸುಶೀಲಾ ಪಿ. ಉಪಾಧ್ಯಾಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

    ಈ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಮಕ ವ್ಯಾಖ್ಯಾನಕಾರ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ “ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಸರಿಯಾದ ದಾರಿಯಲ್ಲಿ ಭಾಷಾ ಸಂವಹನ ಕಲಿಸಬೇಕು, ಇಲ್ಲದಿದ್ದರೆ ಮುಂದೆ ಕಷ್ಟವಿದೆ. ಸಂಶೋಧಕರಿಗೆ ಎಲ್ಲಾ ಕಡೆ ವಿಪುಲ ಸಾಮಗ್ರಿಗಳು ದೊರಕುತ್ತವೆ. ಆದರೆ, ಯುವ ಮನಸ್ಸುಗಳು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಹಳೆಯ ಶಬ್ದಗಳನ್ನು ಕಲಿಯುವುದರ ಜೊತೆಗೆ ಹೊಸ ಶಬ್ದ ಸೃಷ್ಟಿಗೂ ಸಾಧ್ಯತೆಗಳಿವೆ. ಆದರೆ, ಇಂದು ಭಾಷಾತಜ್ಞರ ನಾಡಿನಲ್ಲಿ ಭಾಷಾಗತಿ, ಸರಸ್ವತಿಯ ಚರಣ ಚಿಹ್ನೆ ಹೆಜ್ಜೆ ತಪ್ಪುತ್ತಿದೆ. ಸಾಹಿತ್ಯದಲ್ಲಿ ಹೊಳವು ಮುಖ್ಯ. ಕಲೆ ಮತ್ತು ಸಂಸ್ಕೃತಿಯ ಸಂಶೋಧನೆ ತಪಸ್ಸಿನ ರೀತಿಯಲ್ಲಿ ನಡೆಯುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತುಳು ನಿಘಂಟು ತಜ್ಞ ಪದ್ಮನಾಭ ಕೇಕುಣ್ಣಾಯ ಅಭಿನಂದನಾ ಭಾಷಣ ಮಾಡಿದರು. ಎನ್.ಟಿ. ಭಟ್ ಉಪಸ್ಥಿತರಿದ್ದರು. ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿ, ಡಾ. ಅರುಣ್ ಕುಮಾರ್ ಎಸ್.ಆರ್. ನಿರೂಪಿಸಿ, ನಾಗರಾಜ ಶಂಕರನಾರಾಯಣ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಬ್ಬಿನಾಲೆ ಡಾ. ವಸಂತ ಭಾರದ್ವಾಜ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಡಿಸೆಂಬರ್ 04
    Next Article ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ
    roovari

    Add Comment Cancel Reply


    Related Posts

    ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ನಾಟಕ ರಂಗ ಪ್ರದರ್ಶನ

    December 4, 2025

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಡಿಸೆಂಬರ್ 04

    December 3, 2025

    ಕುಂಜತ್ತೂರಿನಲ್ಲಿ ‘ಅಮ್ಮನೆಂಬ ವಿಸ್ಮಯ’ ಪರಿಕಲ್ಪನೆಯ ಕಾರ್ಯಕ್ರಮ

    December 3, 2025

    ಫರಂಗಿಪೇಟೆಯಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 07

    December 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.