Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಪುರಸ್ಕಾರಗಳ ಪ್ರದಾನ ಸಮಾರಂಭ
    Awards

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಪುರಸ್ಕಾರಗಳ ಪ್ರದಾನ ಸಮಾರಂಭ

    February 26, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 25 ಫೆಬ್ರವರಿ 2025ರಂದು ಕನ್ನಡ ಪರಿಷತ್ತಿನ ಪ್ರತಿಷ್ಟಿತ ದತ್ತಿ ಪ್ರಶಸ್ತಿಗಳಾದ ಪ್ರೊ. ಸಿ.ಎಚ್. ಮರಿದೇವರು ಪ್ರತಿಷ್ಠಾನ ದತ್ತಿ ಹಾಗೂ ರಾಜಸಭಾ ಭೂಷಣ ಶ್ರೀ ಕರ್ಪೂರ ಶ್ರೀನಿವಾಸ ರಾವ್ ದತ್ತಿ ಹಾಗೂ ಕರ್ಪೂರ ರಾಮರಾವ್ ಜನ್ಮ ಶತಾಬ್ದಿ ದತ್ತಿ ಪುರಸ್ಕಾರಗಳ ಪ್ರದಾನ ಸಮಾರಂಭವು ನಡೆಯಿತು.

    ಕನ್ನಡ ಸಾಹಿತ್ಯ ಪರಿಷತ್ತಿಗೆ ಕಟ್ಟಡ ಮತ್ತು ಬುನಾದಿ ಎರಡೂ ಮುಖ್ಯವೆಂದು ರೂಪಕದ ಮೂಲಕ ಹೇಳಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಆಧುನಿಕತೆಗೆ ಸ್ಪಂದಿಸುವಂತೆಯೇ ತನ್ನ ನಿರ್ಮಾತೃಗಳನ್ನು ಪರಿಷತ್ತು ಸದಾ ಸ್ಮರಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿ ಇಟ್ಟಿಗೆಯೂ ಕರ್ಪೂರ ಶ್ರೀನಿವಾಸ ರಾಯರು ಪರಿಷತ್ತಿಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳುತ್ತದೆ. ಅವರ ಮೊಮ್ಮಗಳು ಮತ್ತು ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಅಪಾರ ಸಂತೋಷ ತಂದಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳಿಗೆ ವಿಶಿಷ್ಟ ಪರಂಪರೆ ಇದ್ದು, ಅದರ ದಾನಿಗಳು ಪರಿಷತ್ತಿನ ಮೇಲೆ ಅಪಾರ ವಿಶ್ವಾಸವನ್ನು ಇಟ್ಟು ಅದನ್ನು ಸ್ಥಾಪಿಸಿದ್ದಾರೆ. ಯಾವುದೇ ಅರ್ಜಿ-ಮರ್ಜಿಗಳಿಲ್ಲದೆ ಅರ್ಹರನ್ನು ಹುಡುಕಿ ಪುರಸ್ಕಾರ ನೀಡುವ ಮೂಲಕ ದತ್ತಿ ದಾನಿಗಳ ಆಶಯವನ್ನು ಸಾರ್ಥಕಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ ಕರ್ಪೂರ ಶ್ರೀನಿವಾಸ ರಾಯರ ಕೊಡುಗೆಗಳನ್ನು ಮತ್ತು ವಿದ್ವತ್ತನ್ನು ಸ್ಮರಿಸಿಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರೆಲ್ಲರನ್ನೂ ಕರೆದು ಸನ್ಮಾನಿಸುವ ಕಾರ್ಯವನ್ನು ಶ್ರದ್ಧೆಯಿಂದ ಮಾಡುತ್ತಿದ್ದು, ಈಗಾಗಲೇ ಕಿಟಲ್ ವಂಶಸ್ಥರನ್ನು ಗೌರವಿಸಲಾಗಿದೆ. ಮುಂಬರುವ ಬಳ್ಳಾರಿಯಲ್ಲಿ ಅಯೋಜಿತವಾದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಥಾಮಸ್ ಮನ್ರೂ ಅವರ ವಂಶದವರನ್ನು ಗೌರವಿಸಲಾಗುವುದು” ಎಂಬ ಮಾಹಿತಿಯನ್ನು ನೀಡಿದರು.

    ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಇವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾರಸ್ವತ ಲೋಕದ ಕಿರೀಟ ಎಂದು ಬಣ್ಣಿಸಿ, ಕನ್ನಡ ನಿತ್ಯ ಭಾಷೆಯಾಗಬೇಕು, ಕನ್ನಡಿಗರಿಗೆ ಉದ್ಯೋಗಗಳು ದೊರಕಬೇಕು. ಕನ್ನಡದಲ್ಲಿಯೇ ಕಾನೂನು ದೊರೆತರೆ ತೀರ್ಪಿನ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಲಿದೆ” ಎಂದು ಹೇಳಿ ಕನ್ನಡದ ಪರಂಪರೆಯನ್ನು ತಮ್ಮ ಮಕ್ಕಳಿಗೆ ಕಲಿಸುವಂತೆ ಸೂಚಿಸಿದರು.

    ಕರ್ಪೂರ ಶ್ರೀನಿವಾಸ ರಾವ್ ಅವರ ಮರಿಮೊಮ್ಮಗಳು ನಿರ್ಮಲ ಕರ್ಪೂರ ರಾವ್ ಕನ್ನಡ ಸಾಹಿತ್ಯ ಪರಿಷತ್ತನ್ನು ತಮ್ಮ ತವರು ಮನೆ ಎಂದು ಬಣ್ಣಿಸಿ ದೂರದ ಅಮೆರಿಕೆಯಲ್ಲಿ ಕನ್ನಡ ನುಡಿಯನ್ನು ಉಳಿಸಿಕೊಳ್ಳಲು ತಾವು ಮಾಡಿದ ಪ್ರಯತ್ನಗಳನ್ನು ವಿವರಿಸಿದರು. ಐ.ಎಸ್.ಐ.ನ ನಿವೃತ್ತ ಪ್ರಾಧ್ಯಾಪಕರಾದ ಡಾ. ಟಿ.ಕೃಷ್ಣಕುಮಾರ್ ಇನ್ನೋರ್ವ ಮುಖ್ಯ ಅತಿಥಿಗಳಾಗಿದ್ದರು. ದತ್ತಿದಾನಿಗಳ ಪ್ರತಿನಿಧಿಯಾಗಿ ಎಸ್. ರಾಜಶೇಖರ ಅವರು ಮಾತನಾಡಿದರು.

    ತುಮಕೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ, ಹಿರಿಯ ಲೇಖಕರು, ಶಿಕ್ಷಣ ತಜ್ಞರೂ ಆಗಿದ್ದ ಪ್ರೊ. ಸಿ.ಎಸ್. ಮರಿದೇವರು ಸ್ಥಾಪಿಸಿರುವ ಪುರಸ್ಕಾರಕವನ್ನು 2024ನೆಯ ಸಾಲಿನಲ್ಲಿ ಡಾ. ಬಿ.ವಿ. ವಸಂತ ಕುಮಾರ್ (ಶಿಕ್ಷಣ), ಡಾ. ಮ. ನಂಜುಂಡ ಸ್ವಾಮಿ (ಕನ್ನಡ ಸೇವೆ), ಶ್ರೀಮತಿ ಸುಧಾ ನರಸಿಂಹ ರಾಜು (ಕಲಾ ಸೇವೆ) ಮತ್ತು ಸಿದ್ಧಗಂಗಯ್ಯ ಹೊಲತಾಳು (ಕೃಷಿ ಸೇವೆ) ಇವರು ಭಾಜನರಾಗಿದ್ದಾರೆ. ರಾಜಸಭಾ ಭೂಷಣ ಕರ್ಪೂರ ಶ್ರೀನಿವಾಸ ರಾಯರ ಪುರಸ್ಕಾರವನ್ನು 2023ನೆಯ ಸಾಲಿನಲ್ಲಿ ಸುಪ್ರಿಯ ಎಸ್.ಆರ್. ಕರ್ಪೂರ ರಾಮರಾಯರ ಜನ್ಮ ಶತಾಬ್ಧಿ ಮಮತಾ ಎಸ್.ಟಿ. ಮತ್ತು ಬಾಲಗೌರಮ್ಮ ಸ್ವೀಕರಿಸಿ ತಮ್ಮ ಮನದ ಮಾತುಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ್ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ನಿರೂಪಿಸಿದರೆ, ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿಯವರು ಸ್ವಾಗತಿಸಿ, ಡಾ. ಪದ್ಮಿನಿ ನಾಗರಾಜು ವಂದನಾರ್ಪಣೆಗಳನ್ನು ಸಲ್ಲಿಸಿದರು. ಅಪಾರ ಕನ್ನಡಾಭಿಮಾನಿಗಳು, ಪರಿಷತ್ತಿನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleದೇಲಂಪಾಡಿಯಲ್ಲಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಇವರ ‘ಸ್ಮರಣಾಂಜಲಿ’ ಕಾರ್ಯಕ್ರಮ | ಮಾರ್ಚ್ 02
    Next Article ಮಂಜನಾಡಿಯಲ್ಲಿ ಬ್ಯಾರಿ ಸಾಹಿತ್ಯ ಕಾರ್ಯಾಗಾರ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.