Subscribe to Updates

    Get the latest creative news from FooBar about art, design and business.

    What's Hot

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದೂರದರ್ಶನ ಕಲಾವಿದೆಯಾಗಿ ಅಯನಾ ವಿ. ರಮಣ್ ಆಯ್ಕೆ
    Bharathanatya

    ದೂರದರ್ಶನ ಕಲಾವಿದೆಯಾಗಿ ಅಯನಾ ವಿ. ರಮಣ್ ಆಯ್ಕೆ

    July 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ ವಿ. ರಮಣ್ ಮೂಡುಬಿದಿರೆ ಇವರು ದೂರದರ್ಶನ ಕಲಾವಿದೆಯಾಗಿ
    ಆಯ್ಕೆಯಾಗಿದ್ದಾರೆ. ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ‘ಬಿ’ ಗ್ರೇಡ್ ಮಾನ್ಯತೆ ಪಡೆದಿದ್ದಾರೆ.

    ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ಕಳೆದ 10 ವರ್ಷಗಳಿಂದ ಭರತನಾಟ್ಯದಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು, ಅಯನಾ ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ ‘ನಾಟ್ಯಾಯನ ಮೂಡುಬಿದಿರೆ’ ಮತ್ತು ನೃತ್ಯ ಗುರುವಾಗಿರುವ ‘ರಂಗಭಾರತಿ ಕಲಾಮಂದಿರಮ್’ ಕುಶಾಲನಗರ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಹೆತ್ತವರು ಅಭಿನಂದಿಸಿದ್ದಾರೆ.

    ಮನೆ-ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ-ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಇವರು ಮೈಸೂರು ವಿ.ವಿ.ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ. ಮುಕಾಂಬಿಕಾ ಜಿ.ಎಸ್. ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ ಕೆ.ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleತುಳು ನಾಟಕ ಕಲಾವಿದರ ಒಕ್ಕೂಟದ ‘21ನೇ ವಾರ್ಷಿಕ ಸಂಭ್ರಮ’ | ಆಗಸ್ಟ್ 2
    Next Article ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿ ಟಿ. ಪಿ. ಕೈಲಾಸಂ ಅವರ 140ನೆಯ ಜನ್ಮದಿನಾಚರಣೆ 
    roovari

    Comments are closed.

    Related Posts

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.