Subscribe to Updates

    Get the latest creative news from FooBar about art, design and business.

    What's Hot

    ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ

    December 8, 2025

    ‘ಕನ್ನಡ ಗಡಿತಿಲಕ’ ಮತ್ತು ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ ಪ್ರಕಟ

    December 8, 2025

    ಕಂಕನಾಡಿಯಲ್ಲಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ ಮತ್ತು ತುಳು ತಾಳಮದ್ದಲೆ ಸಪ್ತಾಹ

    December 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಂಕನಾಡಿಯಲ್ಲಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ ಮತ್ತು ತುಳು ತಾಳಮದ್ದಲೆ ಸಪ್ತಾಹ
    Commemoration

    ಕಂಕನಾಡಿಯಲ್ಲಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ ಮತ್ತು ತುಳು ತಾಳಮದ್ದಲೆ ಸಪ್ತಾಹ

    December 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳುಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ತಂಡ ಜಂಟಿಯಾಗಿ ಆಯೋಜಿಸಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹವು ದಿನಾಂಕ 07 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಉದ್ಘಾಟನೆಗೊಂಡಿತು.

    ಈ ಸಪ್ತಾಹವನ್ನು ಉದ್ಘಾಟಿಸಿದ ಕಂಕನಾಡಿಯ ಶ್ರೀ ಬ್ರಹ್ಮ ಬೈದ್ಯರ್ಕಳ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ಕೆ. “ಐವತ್ತೈದು ವರ್ಷಗಳಿಂದ ಈ ತುಳು ಕೂಟವು ತುಳು ಭಾಷೆ, ಸಾಹಿತ್ಯ, ನಾಟಕ ಕೃತಿಗಳಿಗೆ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ಸರಿ ಸುಮಾರು ಮೂವತ್ತು ವರ್ಷಗಳ ಕಾಲ ತುಳುಕೂಟವನ್ನು ಮುನ್ನಡೆಸಿ ಕೂಟಕ್ಕೆ ಮೆರುಗನ್ನು ತಂದುಕೊಟ್ಟವರು ಮರೋಳಿ ಬಿ. ದಾಮೋದರ ನಿಸರ್ಗ. ಗರೋಡಿಯಲ್ಲೂ ಉಪಾಧ್ಯಕ್ಷರಾಗಿ ಧಾರ್ಮಿಕ ಕಾರ್ಯಕ್ರಮಗಳಲೆಲ್ಲಾ ಸಕ್ರಿಯವಾಗಿ ಭಾಗವಹಿಸಿ ಮುನ್ನಡೆದವರು. ಅವರ ನೆನಪಲ್ಲಿ ಇಲ್ಲಿ ತುಳು ತಾಳಮದ್ದಳೆ ನಡೆಸುತ್ತಿರುವುದು ಸಂತಸದ ವಿಷಯ” ಎಂದು ಶುಭ ಹಾರೈಸಿದರು.

    ಖಚಾಂಚಿ ನಾರಾಯಣ ಬಿ.ಡಿ.ಯವರು ಅಗಲಿದ ದಿವ್ಯ ಚೇತನವಾದ ಮರೋಳಿ ಬಿ. ದಾಮೋದರ ನಿಸರ್ಗರ ಸಂಸ್ಮರಣೆ ಮಾಡಿದರು. ತುಳು ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗರು ಸಭಾಧ್ಯಕ್ಷತೆ ವಹಿಸಿದ್ದರು. ಕಲಾವಿದ, ಸಂಘಟಕ ಭಾಸ್ಕರ ಬಾರ್ಯ, ಸರಯೂ ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ, ಸಂದೀಪ್ ಗರೋಡಿ, ರೋಹಿಣಿ ಟೀಚರ್, ಪೆಲತ್ತಡಿ ಪದ್ಮನಾಭ ಕೋಟ್ಯಾನ್, ಕದ್ರಿ ನಾಗೇಶ್ ದೇವಾಡಿಗ, ಮಧುಸೂದನ ಎ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಆಂಜನೇಯ ಯಕ್ಷಗಾನ ಮಂಡಳಿ, ಪುತ್ತೂರು ಇವರಿಂದ ‘ಪಗರಿದ ಸಂಕ’ ಎಂಬ ತುಳು ತಾಳಮದ್ದಲೆ ಜರಗಿತು.

    baikady commemoration roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ ಪ್ರದಾನ, ಯಕ್ಷ ನಾದೋತ್ಸವ ಮತ್ತು ಪುಣ್ಯಸ್ಮರಣೆ | ಡಿಸೆಂಬರ್ 09
    Next Article ‘ಕನ್ನಡ ಗಡಿತಿಲಕ’ ಮತ್ತು ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ ಪ್ರಕಟ
    roovari

    Add Comment Cancel Reply


    Related Posts

    ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ

    December 8, 2025

    ‘ಕನ್ನಡ ಗಡಿತಿಲಕ’ ಮತ್ತು ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ ಪ್ರಕಟ

    December 8, 2025

    ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ ಪ್ರದಾನ, ಯಕ್ಷ ನಾದೋತ್ಸವ ಮತ್ತು ಪುಣ್ಯಸ್ಮರಣೆ | ಡಿಸೆಂಬರ್ 09

    December 8, 2025

    ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ‘ರಾಗ ಸುಧಾರಸ -2025’ | ಡಿಸೆಂಬರ್ 07   

    December 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.