Subscribe to Updates

    Get the latest creative news from FooBar about art, design and business.

    What's Hot

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    ಡಾ. ಗಣನಾಥ ಎಕ್ಕಾರು ಇವರಿಗೆ ‘ಜೀಶಂಪ ರಾಜ್ಯ ಪ್ರಶಸ್ತಿ’

    June 25, 2025

    ‘ರಕ್ತದಾನದ ಮಹತ್ವ’ ಕಥಾ ಸ್ಪರ್ಧೆ | ಜುಲೈ30

    June 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಬಿ. ಕೃಷ್ಣ ಪೈಯವರ ‘ಸ್ಮರಣಾಂಜಲಿ’
    Felicitation

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಬಿ. ಕೃಷ್ಣ ಪೈಯವರ ‘ಸ್ಮರಣಾಂಜಲಿ’

    February 11, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬದಿಯಡ್ಕ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 09 ಫೆಬ್ರವರಿ 2025ರಂದು ಬದಿಯಡ್ಕದ ಗಣೇಶ ಪೈಗಳ ಮನೆಯಲ್ಲಿ ದಿ. ಬಿ. ಕೃಷ್ಣ ಪೈಯವರ ‘ಸ್ಮರಣಾಂಜಲಿ’ ಕಾರ್ಯಕ್ರಮವು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಂಸ್ಮರಣಾ ಭಾಷಣ ಮಾಡಿದ ನಿವೃತ್ತ ಪ್ರಾಂಶುಪಾಲ ಡಾ. ಬೇ. ಸೀ ಗೋಪಾಲಕೃಷ್ಣ ಭಟ್ “ಕಾಸರಗೋಡು ಜಿಲ್ಲೆಯ ಬದಿಯಡ್ಕವನ್ನು ಸಾಂಸ್ಕೃತಿಕ ನಗರಿಯಾಗಿ ರೂಪಿಸಿದವರಲ್ಲಿ ಬಿ. ಕೃಷ್ಣ ಪೈಗಳೂ ಪ್ರಮುಖರು. ಇವರು ವಿನೂತನ ಶೈಲಿಯಲ್ಲಿ ಕಾರ್ಯಕ್ರಮ ಸಂಯೋಜಿಸುವಲ್ಲಿ ನಿಸ್ಸೀಮರು. ಸ್ನೇಹಮಯ ಹಾಸ್ಯಭರಿತ ಸ್ವಭಾವ, ಸರ್ವಜನ ಸಮಭಾವ, ಅಶುಕವಿತ್ವವು ಯುವ ಸಾಹಿತಿಗಳಿಗೆ ಆದರ್ಶ” ಎಂದು ಹೇಳಿದರು.

    ಸಭೆಯ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ಶ್ರೀನಾಥ್ ಕಾಸರಗೋಡು ಮಾತನಾಡಿ, “ಕೃಷ್ಣ ಪೈಗಳು ಅನೇಕ ಪ್ರತಿಭೆಗಳನ್ನು ಶೋಧಿಸಿ ಗೆದ್ದಿದ್ದಾರೆ. ಎಲ್ಲಾ ಕಡೆಗಳಲ್ಲಿ ಎಳೆಯ ಮಕ್ಕಳ ಕವಿ ಮನಸ್ಸುಗಳನ್ನು ಅರಳಿಸುವ ಯತ್ನಗಳು ನಡೆಯಬೇಕು. ಇದರಿಂದ ಮಕ್ಕಳ ಮಾನಸಿಕ ದೃಢತೆ ಹೆಚ್ಚುತ್ತದೆ” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ನಿವೃತ್ತ ಉಪಜಿಲ್ಲಾಧಿಕಾರಿ ಶಶಿಧರ ಶೆಟ್ಟಿ ಮಾತನಾಡಿ, “ಚುಟುಕು ಸಾಹಿತ್ಯದಿಂದ ಸಾಮಾಜಿಕ ಪರಿವರ್ತನೆ ಸಾಧ್ಯ. ಮಕ್ಕಳು ಹಿರಿಯ ಸಾಹಿತಿಗಳ ಕೃತಿಗಳನ್ನು ಓದಿ, ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಹೇಳಿದರು.

    ಖ್ಯಾತ ವೈದ್ಯ ಡಾ. ಶ್ರೀನಿಧಿ ಸರಳಾಯರು ಮಾತನಾಡಿ, “ಆತಿಥ್ಯವೇ ಕೃಷ್ಣ ಪೈಗಳ ಮನೆಯ ವಿಶೇಷತೆ. ಈಗಲೂ ಅದು ಮುಂದುವರಿದಿದೆ. ಉತ್ತಮ ಹಾಡುಗಾರ, ಸಂಘಟಕ, ಬಹುಭಾಷಾ ಕವಿಯಾಗಿ ಕೃಷ್ಣ ಪೈಗಳು ಜನಾನುರಾಗಿಯಾಗಿದ್ದರು” ಎಂದು ಹೇಳಿದರು.

    ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ. ಕೆ. ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿ, “ಹಿರಿಯರ ಸಾರ್ಥಕ ಬದುಕಿನ ಹಾದಿ ಕಿರಿಯರಿಗೆ ಸಾಧನೆ ಮೆರೆಯಲು ಪ್ರೇರಣೆಯಾಗುತ್ತದೆ. ಕಾಸರಗೋಡು ಜಿಲ್ಲೆಯಲ್ಲಿ ಮಕ್ಕಳನ್ನು ಸೇರಿಸಿಕೊಂಡು, ನಿರಂತರವಾಗಿ ಕನ್ನಡ ಸಾಹಿತ್ಯ ಜಾಗೃತಿ ಮಾಡಲಾಗುವುದು. ಇದಕ್ಕೆ ಕನ್ನಡಿಗರ ಸಹಕಾರದ ಅಗತ್ಯ ಇದೆ” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿ. ಕೃಷ್ಣ ಪೈಗಳ ಭಾವಚಿತ್ರಕ್ಕೆ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಂದ ಪುಷ್ಪಾರ್ಚನೆ ಸಲ್ಲಿಸಲಾಯಿತು. ಕೃಷ್ಣ ಪೈಗಳ ಪುತ್ರ ಗಣೇಶ ಪೈ ದಂಪತಿಯನ್ನು ಅಭಿನಂದಿಸಲಾಯಿತು. ಬಳಿಕ ಪತ್ರಕರ್ತ, ಸಾಹಿತಿ ವಿರಾಜ್ ಅಡೂರು ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು. ಸುಮಾರು 13 ಮಂದಿ ಕವಿಗಳು ಚುಟುಕು ವಾಚನ ಮಾಡಿದರು. ಬಳಿಕ ಲಕ್ಷ್ಮಿ ಜಿ. ಪೈ, ಬಿ. ಉನ್ನತಿ ಪೈ ಹಾಗೂ ತೇಜಸ್ ಪೈ ಇವರಿಂದ ಗೀತ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ ಇದ್ದರು. ಬಿ. ಉನ್ನತಿ ಪೈ ಪ್ರಾರ್ಥನೆ ಹಾಡಿ, ಬದಿಯಡ್ಕ ಗಣೇಶ ಪೈ ಸ್ವಾಗತಿಸಿ, ಶಾರದಾ ಮೊಳೆಯಾರ್ ಎಡನೀರು ವಂದಿಸಿ, ಪ್ರೊ. ಲತಾ ಪ್ರಕಾಶ ರಾವ್ ನಿರೂಪಿಸಿದರು.

    felicitation Literature Music
    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ. ನಡೆ ಸಮುದಾಯದಿಂದ ಸಮುದಾಯಕ್ಕೆ
    Next Article ಯಕ್ಷಗಾನ ಕಲಾವಿದ ಪ್ರದೀಪ್ ರೈ ನಿಧನ
    roovari

    Add Comment Cancel Reply


    Related Posts

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ‘ವಾಚನ ವಾರಾಚರಣೆ ಸಮಾರಂಭ’ | ಜೂನ್ 27

    June 25, 2025

    ಧಾರವಾಡದ ಮನೋಹರ ಗ್ರಂಥ ಮಾಲಾದಲ್ಲಿ ದತ್ತಿ ಉಪನ್ಯಾಸ | ಜೂನ್ 26

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.