ಮಂಗಳೂರು: ಗಾನ ಗಂಧರ್ವ ಡಾ.ಎಸ್.ಪಿ. ಬಾಲ ಸುಬ್ರಹ್ಮಣ್ಯಂ ಅವರ ಜನ್ಮದಿನೋತ್ಸವದ ಅಂಗವಾಗಿ ಗಾಯಕ ಯಶವಂತ ಎಂ. ಜಿ. ಇವರಿಂದ 24 ಗಂಟೆಗಳ ಕಾಲ ನಿರರ್ಗಳವಾಗಿ ಗಾಯನ ಕಾರ್ಯಕ್ರಮ ‘ಬಾಲಗಾನ ಯಶೋಯಾನ’ ದಿನಾಂಕ 03 ಜೂನ್ 2025ರ ಮಧ್ಯಾಹ್ನ ಘಂಟೆ 3.00 ರಿಂದ 04 ಜೂನ್ 2025 ಮಧ್ಯಾಹ್ನ ಘಂಟೆ 3.00 ರವರೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ದಿನಾಂಕ 03 ಜೂನ್ 2025ರ ಮಧ್ಯಾಹ್ನ ಘಂಟೆ 1.30ಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ವಿರಾಜಪೇಟೆಯ ಡಿವೈಎಸ್ಪಿ ಎಸ್. ಮಹೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಹಾಗೂ ನಾನಾ ಗಣ್ಯರು ಭಾಗವಹಿಸಲಿದ್ದಾರೆ. 04 ಜೂನ್ 2025ರಂದು ಮಧ್ಯಾಹ್ನ ಘಂಟೆ 3.00ಕ್ಕೆ ನಡೆಯಲಿರುವ ಸಮಾರೋಪದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ನಾನಾ ಗಣ್ಯರು ಉಪಸ್ಥಿತರಿರುವರು ಎಂದು ಮನಪಾ ಮಾಜಿ ಸದಸ್ಯ ಹಾಗೂ ಗಾಯಕರಾದ ಜಗದೀಶ ಶೆಟ್ಟಿ ತಿಳಿಸಿದ್ದಾರೆ.
ನಿರಂತರ ಗಾಯನದಲ್ಲಿ ಒಂದೊಂದು ಗಂಟೆಗೆ 5 ನಿಮಿಷಗಳ ವಿರಾಮ ಇರುತ್ತದೆ. ಬರೀ ಜ್ಯೂಸ್ ಕುಡಿದು ಕೊಂಡೇ ಹಾಡುವ ಕೆಲಸ ಮಾಡುತ್ತೇನೆ. ನನ್ನ ಜತೆಯಲ್ಲಿ ಗಿಟಾರ್ನಲ್ಲಿ ರಾಜ್ ಗೋಪಾಲ್, ಕೀಬೋರ್ಡ್ನಲ್ಲಿ ದೀಪಕ್ ಜಯಶೀಲನ್, ಡ್ರಮ್ಸ್ ಮತ್ತು ರಿದಂನಲ್ಲಿ ವಾಮನ್ ಕೆ., ತಬಲದಲ್ಲಿ ಪ್ರಜ್ವಲ್ ಆಚಾರ್ಯ, ಕೊಳಲಿನಲ್ಲಿ ವರ್ಷ ಬಸ್ರೂರ್ ಹಾಗೂ ಸಿತಾರ್ನಲ್ಲಿ ಸುಮುಖ್ ಆಚಾರ್ಯ ಭಾಗ ವಹಿಸಲಿದ್ದಾರೆ. ಈ ವಿಶ್ವದಾಖಲೆಯಲ್ಲಿ ಅವರು ಕೂಡ ಭಾಜನರಾಗುತ್ತಾರೆ. ಒಂದೊಂದು ಗಂಟೆ ಕೂತು ಒಂದೊಂದು ಗಂಟೆ ನಿಂತು ಹಾಡುವ ಯೋಜನೆ ಇಟ್ಟುಕೊಂಡಿದ್ದೇನೆ. ಈ ಸೋಲೋ ಹಾಡುಗಳ ಮೂಲಕ ಖ್ಯಾತ ಗಾಯಕ ಎಸ್. ಪಿ. ಬಿ. ಗೆ ಕೃತಜ್ಞತೆ ಸಲ್ಲಿಸುವ ಕೆಲಸ ಮಾಡಬೇಕು ಎಂದು ಕೊಂಡಿದ್ದೇನೆ. ಇದೊಂದು ಅಪೂರ್ವ ಕಾರ್ಯಕ್ರಮವಾಗಿದ್ದು, 24 ಗಂಟೆಗಳ ಕಾಲ ನಿರಂತರವಾಗಿ ಗಾಯಕ ಎಸ್. ಪಿ. ಬಿ. ಹಾಡಿದ ಶೇ.90ರಷ್ಟು ಕನ್ನಡ ಚಿತ್ರಗೀತೆಗಳು, ಶೇ.5ರಷ್ಟು ಭಕ್ತಿ ಗೀತೆಗಳು ಹಾಗೂ ಶೇ.5ರಷ್ಟು ಭಾವಗೀತೆಗಳನ್ನು ಹಾಡಲಿದ್ದೇನೆ. ಇದಕ್ಕಾಗಿ ಅವರ 240ಕ್ಕಿಂತ ಹೆಚ್ಚಿನ ಹಾಡುಗಳನ್ನು ಸಿದ್ಧಮಾಡಿಕೊಂಡಿದ್ದೇನೆ. ಇದೊಂದು ವಿಶ್ವದಾಖಲೆಯಾಗುವ ಕಾರ್ಯಕ್ರಮ ಎಂದು ಗಾಯಕ ಯಶವಂತ ಎಂ. ಜಿ. ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.