Subscribe to Updates

    Get the latest creative news from FooBar about art, design and business.

    What's Hot

    ಸಂದೇಶ ಸಂಸ್ಥೆಯ ಆವರಣದಲ್ಲಿ 35ನೇ ವರ್ಷದ ‘ಸಂದೇಶ ಪ್ರಶಸ್ತಿ’ ಪ್ರದಾನ

    January 23, 2026

    ಬಾಗಲಕೋಟೆಯಲ್ಲಿ ‘ಅಖಿಲ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ’ | ಜನವರಿ 25

    January 23, 2026

    ನಂತೂರು ಶ್ರೀ ಭಾರತಿ ಕಾಲೇಜಿನಲ್ಲಿ ‘ವಿಚಾರಗೋಷ್ಠಿ’ | ಜನವರಿ 25

    January 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ
    Awards

    ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

    November 1, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯುವವಾಹಿನಿ ಸಂಸ್ಥೆ ನೀಡುವ ಪ್ರಸಕ್ತ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಗೆ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ ಶ್ರೀ ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ನಾಡು ಕಂಡ ಅಪ್ರತಿಮ ಪ್ರತಿಭಾಶಾಲಿ ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಪಾದಕ, ಸಂಘಟಕ ವಿಶುಕುಮಾರ್ ಇವರ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ ‘ವಿಶುಕುಮಾರ್ ಪ್ರಶಸ್ತಿ’ ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ. ಪ್ರಭಾಕರ ನೀರುಮಾರ್ಗ, ಡಾ. ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಇವರನ್ನೊಳಗೊಂಡ ಆಯ್ಕೆ ಸಮಿತಿ ಈ ಆಯ್ಕೆಯನ್ನು ನಡೆಸಿದೆ.

    ದಿನಾಂಕ 10 ನವೆಂಬರ್ 2024ರಂದು ಉರ್ವಸ್ಟೋರ್ ನ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ದತ್ತಿ ನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಹಾಗೂ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ತಿಳಿಸಿದ್ದಾರೆ.

    ಹೊಟೇಲ್ ಉದ್ಯಮಿ ಶ್ರೀ ಬಾಬು ಶಿವ ಪೂಜಾರಿ ಇವರು ವೇದ, ಆಧುನಿಕ ಸಾಹಿತ್ಯ, ಬೌದ್ಧ, ಜೈನ, ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಗ್ರಂಥಗಳನ್ನು ಆಳವಾಗಿ ಅಭ್ಯಸಿಸಿದ್ದಾರೆ. ನಾರಾಯಣ ಗುರುಗಳ ಆದರ್ಶ, ನಾರಾಯಣ ಗುರು ವಿಜಯ ದರ್ಶನ, ಅನುಸಂಧಾನ, ಹಗ್ಗಿನ ಹನಿ ಮುಂತಾದವು ಇವರ ಕೃತಿಗಳು. ಶ್ರೀಕೃಷ್ಣ ದೇವರಾಯ, ಕೋಟಿ ಚೆನ್ನಯ್ಯ, ತುಳು ಸಂಸ್ಕೃತಿ, ಕಾಂತಬಾರೆ ಬೂದಬಾರೆ, ಸಿರಿ, ನಾಗಾರಾಧನೆ, ಭೂತಾರಾಧನೆ ಮತ್ತು ತುಳುನಾಡಿನ ಗರಡಿಗಳ ಬಗ್ಗೆ ಸಂಶೋಧನಾತ್ಮಕ ಫ್ರೌಡ ಲೇಖನಗಳನ್ನು ಪ್ರಕಟಿಸಿದ್ದು, ‘ನಾರಾಯಣ ಗುರು ವಿಜಯ ದರ್ಶನ’ವು ಆಧ್ಯಾತ್ಮ ಮತ್ತು ಸಾಮಾಜಿಕ ನೆಲೆಯಲ್ಲಿ ನೆಲದ ಸಂಕಟ ಮತ್ತು ಆಶೋತ್ತರಗಳನ್ನು ತೆರೆದಿಟ್ಟ ಕೃತಿಯಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬಿ. ತಮ್ಮಯ್ಯ ನೆನಪಿನ ಲಲಿತ ಪ್ರಬಂಧ ಹಾಗೂ ಅತೀ ಸಣ್ಣ ಕಥೆ ಸ್ಪರ್ಧೆ 
    Next Article ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ -2024 | ಕೊನೆಯ ದಿನಾಂಕ ನವೆಂಬರ್ 07
    roovari

    Add Comment Cancel Reply


    Related Posts

    ಸಂದೇಶ ಸಂಸ್ಥೆಯ ಆವರಣದಲ್ಲಿ 35ನೇ ವರ್ಷದ ‘ಸಂದೇಶ ಪ್ರಶಸ್ತಿ’ ಪ್ರದಾನ

    January 23, 2026

    ಬಾಗಲಕೋಟೆಯಲ್ಲಿ ‘ಅಖಿಲ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ’ | ಜನವರಿ 25

    January 23, 2026

    ನಂತೂರು ಶ್ರೀ ಭಾರತಿ ಕಾಲೇಜಿನಲ್ಲಿ ‘ವಿಚಾರಗೋಷ್ಠಿ’ | ಜನವರಿ 25

    January 23, 2026

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.