Subscribe to Updates

    Get the latest creative news from FooBar about art, design and business.

    What's Hot

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದ್ಯಾಧರ ರಾವ್ ಜಲವಳ್ಳಿ ಇವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ ಸಮಾರಂಭ
    Awards

    ವಿದ್ಯಾಧರ ರಾವ್ ಜಲವಳ್ಳಿ ಇವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ ಸಮಾರಂಭ

    March 11, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬಳ್ಕೂರು ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮವು ದಿನಾಂಕ 09 ಮಾರ್ಚ್ 2025ರಂದು ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದ ಆವರಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಸ್ವೀಕರಿಸಿದ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಮಾತನಾಡಿ “ಯಕ್ಷರಂಗವು ನನ್ನ ಬದುಕಿಗೆ ಅಭಿಮಾನಿಗಳ ಪ್ರೀತಿ ಮತ್ತು ಹೊಸತನದ ಸ್ಪೂರ್ತಿಯನ್ನು ನೀಡಿದೆ ಅದು ಮರೆಯಲಾದ ಅವಿಸ್ಮರಣೀ ಕ್ಷಣಗಳು. ನನ್ನ ತಂದೆವರು ಜಲವಳ್ಳಿ ವೆಂಕಟೇಶ್ ರಾವ್ ಯಕ್ಷಗಾನ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ. ಪ್ರತಿಯೊಬ್ಬ ಕಲಾವಿದರು ಕೂಡ ಹಿರಿಯವರು ಹಾಕಿಕೊಟ್ಟ ಯಕ್ಷಪರಂಪರೆಯನ್ನು ಮುಂದುವರಿಸುವ ಮೂಲಕ ತನ್ನ ತನವನ್ನು ಕಾಯ್ದುಕೊಳ್ಳಬೇಕೇ ಹೊರತು ನಕಲಿಸಬಾರದು. ಯಕ್ಷಗಾನದಲ್ಲಿ ಅಪಾರವಾದು ಓದು, ಕಲಿಕೆ ಅಭ್ಯಾಸದ ಮೂಲಕ ಇಲ್ಲಿ ಕಲಾವಿದ ಬೆಳೆಯಬಹುದು. ಬದುಕಿಗಾಗಿ ಯಕ್ಷಗಾನವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಆದರೆ ಬಹಳಷ್ಟು ಪ್ರೇಕ್ಷಕರನ್ನು ನಾವು ಗಳಿಸಿದ್ದೇವೆ ಅಂದರೆ ಅದು ಯಕ್ಷಗಾನದ ಶಕ್ತಿ ಅನ್ನುವುದು ನನ್ನ ನಂಬಿಕೆ. ಕಲಾಮಾತೆಯ ಅನುಗ್ರಹಕ್ಕೆ ನಾವು ಒಳಗಾಗಿದ್ದೇವೆ ಅನ್ನುವುದಕ್ಕೆ ಈ ಪುರಸ್ಕಾರವೇ ಸಾಕ್ಷಿ. ಜಲವಳ್ಳಿ ವೆಂಕಟೇಶ್ ರಾವ್ ಅವರ ಮಗನಾಗಿ ಒಂದ ಮಟ್ಟಿನ ಕಲಾವಿದನಾಗಿದ್ದೇನೆ ಎನ್ನುವ ಬಗ್ಗೆ ನನಗೆ ಹೆಮ್ಮೆ ಇದೆ. ಕಲಾಮಾಧ್ಯಮದ ಮೂಲಕ ನನ್ನ ತಂದೆಯವರು ಗಳಿಸಿದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡುಹೋಗುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾವು ಸಾಧಿಸಬೇಕಾದ್ದು ಸಾಕಷ್ಟಿದೆ. ಯಕ್ಷಗಾನದ ಹಿರಿಯ ಚೇತನಗಳು ಶ್ರಮಸಿದ ಫಲವನ್ನು ನಾವು ಇಂದು ಅನುಭವಿಸುತ್ತಿದ್ದೇವೆ. ‘ಯಕ್ಷ ಕುಸುಮ ಪುರಸ್ಕಾರ’ವು ನನ್ನ ಮುಂದಿನ ಯಕ್ಷಬದುಕಿನಲ್ಲಿ ಇನ್ನಷ್ಟು ಸಾಧಿಸುವುದು ಇದೆ ಎನ್ನುವ ಎಚ್ಚರಿಕೆಯನ್ನು ಕೊಟ್ಟಿದ್ದೀರಿ ಎನ್ನುವ ಭರವಸೆಯೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ” ಎಂದು ಹೇಳಿದರು.
    ವೇದಿಕೆಯಲ್ಲಿ ಮಂಗಳೂರಿನ ಹಿರಿಯ ಲೆಕ್ಕ ಪರಿಶೋಧಕರಾದ ಶ್ರೀ ಎಸ್‌. ಎಸ್. ನಾಯಕ್, ರಂಗಸ್ಥಳ ಮಂಗಳೂರು (ರಿ.) ಇದರ ಶ್ರೀ ಎಸ್‌. ಎಲ್. ನಾಯಕ್ ಮತ್ತು ಶ್ರೀ ದಿನೇಶ್ ಪೈ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಅಣ್ಣಯ್ಯ ಕುಲಾಲ್, ಶ್ರೀ ದಿನಕರ ಎಸ್. ಬಳ್ಕೂರು, ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತ ಶ್ರೀ ಕೃಷ್ಣರಾಜ ಬಳ್ಕೂರು, ನಾಗೇಶ್ ಎಸ್. ಬಳ್ಕೂರು, ಮೇಳದ ಯಜಮಾನರಾದ ಶ್ರೀ ರಂಜಿತ್ ಕುಮಾರ್ ವಕ್ವಾಡಿ, ಶ್ರೀಪತಿ ಆಚಾರ್ಯ ಉಪಸ್ಥಿತರಿದ್ಧರು.
    ಯಕ್ಷ ಕುಸುಮ ಟ್ರಸ್ಟ್ ಇದರ ಅಧ್ಯಕ್ಷರಾದ ಕರುಣಾಕರ ಬಳ್ಕೂರು ಪ್ರಾಸ್ತಾವಿಕ ಮಾತುಗಳೊಂದಿಗೆ ಜಲವಳ್ಳಿ ವಿದ್ಯಾಧರ ರಾವ್ ಅವರ ಅಭಿನಂದನಾ ನುಡಿಗಳನ್ನಾಡಿದರು.

    award baikady kannada roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ಪುರಾತತ್ವ, ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿ
    Next Article ವಿಶೇಷ ಲೇಖನ – ಕನ್ನಡದ ವೀರ ಸೇನಾನಿ ಮ. ರಾಮಮೂರ್ತಿ
    roovari

    Add Comment Cancel Reply


    Related Posts

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಬೆಂಗಳೂರಿನ ಮಲ್ಲತ್ತಳ್ಳಿ ಕಲಾಗ್ರಾಮದಲ್ಲಿ ನಾಟಕ ಪ್ರದರ್ಶನ | ಮೇ 30

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.