ಮಂಗಳೂರು : ತುಳುಕೂಟ (ರಿ) ಕುಡ್ಲ ಇದರ ಬಂಗಾರ್ ಪರ್ಬೊ ಸರಣಿ ವೈಭವೊ -09 ಕಾರ್ಯಕ್ರಮವು ದಿನಾಂಕ 18-11- 2023ನೇ ಶನಿವಾರದಂದು ಅಪರಾಹ್ನ 1:30 ಗಂಟೆಗೆ ಸುರತ್ಕಲ್ಲಿನ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ತುಳುವೆರೆ ತುಡರ ಪರ್ಬೊ …. ಎಂಬ ಶಿರೋನಾಮೆಯೊಂದಿಗೆ ನಡೆಯಲಿದೆ.
ಹೆಸರಾಂತ ಉದ್ಯಮಿ, ಅಗರಿ ಎಂಟರ್ ಪ್ರೈಸಸಿನ ಮಾಲಕ ಅಗರಿ ಶ್ರೀ ರಾಘವೇಂದ್ರರಾವ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸನ್ನಿಧೀಸ್ ಹೋಟೆಲ್ಸ್ (ಪ್ರೈ) ಲಿ. ಇದರ ಜನರಲ್ ಮ್ಯಾನೇಜರ್ ಆದ ಲ. ಭಾಸ್ಕರ ಸಾಲ್ಯಾನ್, ವಿದ್ಯಾದಾಯಿನೀ ಪ್ರೌಢ ಶಾಲೆಯ ಸಂಚಾಲಕರು ಹಾಗೂ ನಿವೃತ್ತ ಶಿಕ್ಷಕರೂ ಆದ ಶ್ರೀ ಸುಧಾಕರ ರಾವ್ ಪೇಜಾವರ, ವಿದ್ಯಾದಾಯಿನೀ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕೆ.ಬಾಲಚಂದ್ರ ಇವರುಗಳು ಭಾಗವಹಿಸಲಿದ್ದಾರೆ.
ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀ ವೆಂಕಟ್ರಮಣ ಭಟ್ ತುಳುವೆರೆ ತುಡರ ಪರ್ಬ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ತುಳು ಭಾವಗೀತೆ, ವರ್ಕಾಡಿ ರವಿ ಅಲೆವೂರಾಯ ಬಳಗದಿಂದ ಬಲಿ – ವಾಮನ ರೂಪಕ ನಡೆಯಲಿದೆ. ಎಂದು ತುಳು ಕೂಟದ ಅಧ್ಯಕ್ಷ ಮರೋಳಿ ಬಿ.ದಾಮೋದರ ನಿಸರ್ಗ ತಿಳಿಸಿದ್ದಾರೆ.

