Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಬಂಟ ಕುಲ ರತ್ನ’ ಬಿರುದು ಪ್ರದಾನ ಹಾಗೂ ಸನ್ಮಾನ
    Awards

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಬಂಟ ಕುಲ ರತ್ನ’ ಬಿರುದು ಪ್ರದಾನ ಹಾಗೂ ಸನ್ಮಾನ

    September 4, 2024Updated:September 3, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಉಡುಪಿ ತಾಲೂಕು ಸಮಿತಿ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ಹಾಗೂ ಸನ್ಮಾನ ಸಮಾರಂಭವು 01 ಸೆಪ್ಟೆಂಬರ್ 2024ರ ಭಾನುವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಿತು.
    ಸಮಿತಿಯ ವತಿಯಿಂದ ಆಯೋಜಿಸಲಾದ ‘ಕಲಾಧರ ಯಕ್ಷರಂಗ ಬಳಗ ಜಲವಳ್ಳಿ’ ಇವರಿಂದ ಬಡಗುತಿಟ್ಟು ಯಕ್ಷಗಾನ ‘ಜ್ವಾಲಾ ಪ್ರತಾಪ’ ಪ್ರಸಂಗದ ಪ್ರದರ್ಶನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿಯ ಸಂಚಾಲಕರಾದ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟ ಪೂರ್ವ ಸಂಚಾಲಕ ಜಯರಾಜ್ ಹೆಗ್ಡೆ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಭುಜಂಗ ಶೆಟ್ಟಿ, ಮಿಥುನ್  ಹೆಗ್ಡೆ, ಸುಭಾಸ್ ಬಲ್ಲಾಳ್, ಶ್ರೀಧರ ಶೆಟ್ಟಿ, ಇಂದಿರಾ ಸುಬ್ಬಯ್ಯ ಹೆಗ್ಡೆ, ನಿತೀಶ್ ಕುಮಾರ್ ಶೆಟ್ಟಿ, ಹರೀಶ್ ಚೇರ್ಕಾಡಿ, ಕಿಶೋರ್ ಶೆಟ್ಟಿ, ಪ್ರಸಾದ್ ಮಾರಾಳ್ಳಿ, ನಿರುಪಮಾ ಹೆಗ್ಡೆ ಹಾಗೂ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
    ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಉದ್ಯಮ ಕ್ಷೇತ್ರದಲ್ಲಿ ಅಪಾರ ಯಶಸ್ಸು ಪಡೆದು ‘ಉದ್ಯಮ ರತ್ನರಾಗಿ’, ಲಯನ್ಸ್ 317ಸಿ ಜಿಲ್ಲಾ ಗವರ್ನರ್ ಸೇರಿದಂತೆ  ಹತ್ತು ಹಲವಾರು ಉನ್ನತ ಸ್ಥಾನಗಳಲ್ಲಿ ಅಲಂಕರಿಸಿ ‘ಲಯನ್ ರತ್ನ’ ರಾಗಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ, ಸ್ವತ: ಕಲಾವಿದರಾಗಿ ನೂರಾರು ಪಾತ್ರಗಳನ್ನು ಮಾಡಿದ್ದಾರೆ. ಯಕ್ಷಗಾನ ಕಲೆ ಹಾಗೂ ಕಲಾವಿದರ ಶ್ರೇಯೋಭಿವೃದ್ಧಿಗೆ ಶ್ರಮಿಸಿ ‘ಯಕ್ಷರತ್ನ’ರಾಗಿ, ಚಿಂತನೆಗೆ ಹಚ್ಚುವಂತಹ ಅನೇಕ ಕೃತಿಗಳನ್ನು ಬರೆದು ಪ್ರಕಟಿಸಿದಲ್ಲದೆ, ಶಾಲಾ ಕಾಲೇಜುಗಳಿಗೆ ತೆರಳಿ 40,000 ಕ್ಕೂ ಅಧಿಕ ಪ್ರತಿಗಳನ್ನು ಉಚಿತವಾಗಿ ಹಂಚಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಸಾಹಿತ್ಯ ರತ್ನ’ರಾಗಿ, ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರಾಗಿ ನೂರಾರು ಕಾರ್ಯಕ್ರಮಗಳನ್ನು ಸಂಘಟಿಸಿದಲ್ಲದೆ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಜಾನಪದ ಕಲಾವಿದರಿಗೆ ಸಹಾಯಹಸ್ತ ಚಾಚಿದ ನೈಜ ‘ಸಂಸ್ಕೃತಿ ರತ್ನ’ ರಾಗಿದ್ದಾರೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾವೇರಿ ಹಾಗೂ ಇಂಡಿಯನ್  ವರ್ಚುವಲ್ ಯೂನಿವರ್ಸಿಟಿ ಫಾರ್ ಪೀಸ್ ಆ್ಯಂಡ್ ಎಜುಕೇಶನ್ ವತಿಯಿಂದ ಗೌರವ ಡಾಕ್ಟರೇಟ್ ಪಡೆದು ‘ಸಾಧನಾ ರತ್ನ’ರಾಗಿಯೂ ಮಿಂಚಿರುವರು. ಇವರ ಈ ಸಾಧನೆಯನ್ನು ಗುರುತಿಸಿ ‘ಬಂಟ ಕುಲ ರತ್ನ’ ಬಿರುದನ್ನು ನೀಡಿ ಗೌರವಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಗುರುವಾಯೂರಿನಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರಿಂದ ಭರತನಾಟ್ಯ
    Next Article ಕಾಸರಗೋಡಿನ ಶ್ರೀ ಎಡನೀರು ಮಠದಲ್ಲಿ ಸಂಪನ್ನಗೊಂಡ ‘ನಾಟ್ಯದಾಸೋಹಂ’
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.