Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆಯಲ್ಲಿ ‘ಸ್ತ್ರೀ ಗೃಹಂ ರಕ್ಷತಿ’ ಏಕವ್ಯಕ್ತಿ ರಂಗ ಪ್ರಯೋಗ

    September 18, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಸಂಗೀತ ಕಾರ್ಯಕ್ರಮ’ | ಸೆಪ್ಟೆಂಬರ್ 21

    September 18, 2025

    ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಸೆಪ್ಟೆಂಬರ್ 21

    September 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ತುಳು ಕವಿಗೋಷ್ಠಿ ‘ಬರ್ಸದ ಪನಿ – ಕಬಿತೆ ಕೇನಿ’
    Literature

    ಪುತ್ತೂರಿನಲ್ಲಿ ತುಳು ಕವಿಗೋಷ್ಠಿ ‘ಬರ್ಸದ ಪನಿ – ಕಬಿತೆ ಕೇನಿ’

    August 3, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಮತ್ತು ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 29-07-2023ರಂದು ಜರಗಿದ ‘ಬರ್ಸದ ಪನಿ – ಕಬಿತೆ ಕೇನಿ’ ತುಳು ಕವಿಗೋಷ್ಠಿಯನ್ನು ಖ್ಯಾತ ಸಾಹಿತಿ ಕೆದಂಬಾಡಿ ಜತ್ತಪ್ಪ ರೈಯವರ ಕವಿತೆಯೊಂದನ್ನು ಓದುವ ಮೂಲಕ ಸಾಹಿತಿ, ಕೃಷಿಕ, ಸಹಕಾರಿ ರತ್ನ ದಂಬೆಕ್ಕಾನ ಸದಾಶಿವ ರೈ ಉದ್ಘಾಟಿಸಿ, ತುಳು ಭಾಷೆಯ ಕವಿಗೋಷ್ಠಿ ಮತ್ತು ಸಾಹಿತ್ಯಗೋಷ್ಟಿಗಳು ಹೆಚ್ಚು ಹೆಚ್ಚು ಜರಗಿ ತುಳು ಭಾಷೆ ಇನ್ನಷ್ಟು ಶ್ರೀಮಂತವಾಗಲಿ. ಎಂದು ಹಾರೈಸಿದರು.

    ಪಾಂಚಜನ್ಯ ರೇಡಿಯೋದ ಕಾರ್ಯದರ್ಶಿ ಪದ್ಮಾ ಕೆ.ಆರ್. ಆಚಾರ್ಯ, ತುಳುಕೂಟದ ಉಪಾಧ್ಯಕ್ಷರುಗಳಾದ ಸಂತೋಷ್ ಶೆಟ್ಟಿ ಎಸ್. ಹಾಗೂ ನ್ಯಾಯವಾದಿ ಹೀರಾ ಉದಯ್, ಮಾಜಿ ಅಧ್ಯಕ್ಷ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು, ಚಿಗುರೆಲೆ ಸಾಹಿತ್ಯ ಬಳಗದ ಅಧ್ಯಕ್ಷ ಚಂದ್ರಮೌಳಿ ಕಡಂದೇಲು ಮತ್ತು ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ನವೀನ್ ಕುಲಾಲ್ ಚಿಪ್ಪಾರ್ ಮತ್ತು ಚಂದ್ರಶೇಖರ ಮಾಲೆತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು.

    ನಂತರ ಜರಗಿದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ, ಸಂಘಟಕ, ಅಧ್ಯಾಪಕ ಶ್ರೀ ರಮೇಶ್ ಉಳಯ ವಹಿಸಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ, ಸಾಹಿತಿ ಹಾಗೂ ಅಧ್ಯಾಪಕಿ ವಿಜಯಾ ಶೆಟ್ಟಿ ಸಾಲೆತ್ತೂರು ಕವಿತೆಗಳ ವಿಮರ್ಶಕರಾಗಿದ್ದರು. ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಿಂದ ಬಂದ 42 ಮಂದಿ ಕವಿಗಳು ಸ್ವರಚಿತ ಕವಿತೆಗಳನ್ನು ವಾಚಿಸಿದರು. ತುಳುಕೂಟದ ಜತೆ ಕಾರ್ಯದರ್ಶಿಗಳಾದ ನಯನಾ ರೈ ನೆಲ್ಲಿಕಟ್ಟೆ ಮತ್ತು ಉಲ್ಲಾಸ್ ಪೈ, ನಿರ್ದೇಶಕರಾದ ಮಹಾಬಲ ಗೌಡ, ನರೇಶ್ ಜೈನ್, ಕಲಾವಿದ ಕೃಷ್ಣಪ್ಪ, ಅಬುಬಕ್ಕರ್ ಮುಲಾರ್, ಉಮಾಪ್ರಸಾದ್ ರೈ ನಡುಬೈಲು, ಸದಸ್ಯರಾದ ಅಶ್ರಫ್ ಮುಕ್ವೆ, ಶ್ರೇಯಾಂಸ್ ಜೈನ್, ಮೌನೇಶ್ ವಿಶ್ವಕರ್ಮ, ಕಲಾವಿದ ನಾಗಪ್ಪ ಗೌಡ, ಗಾಯಕ ಚಂದ್ರಶೇಖರ ಹೆಗ್ಡೆ, ಬಾಲಕೃಷ್ಣ ಶೆಟ್ಟಿ ಸಾಲೆತ್ತೂರು, ಚಿಗುರೆಲೆ ಸಾಹಿತ್ಯ ಬಳಗದ ಅಪೂರ್ವ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು. ಬೆಟ್ಟಂಪಾಡಿ ಸರಕಾರಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಪ್ರೊ. ಹರಿಪ್ರಸಾದ್ ನೇತೃತ್ವದಲ್ಲಿ ಸಿಂಧೂ, ಕೃತಿಕಾ, ದೀಪ್ತಿ, ಶ್ರಾವ್ಯ ಮತ್ತು ಹರ್ಷಿತಾ ಸ್ವಯಂಸೇವಕರಾಗಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಸಿರಿ ಸಾಂಸ್ಕೃತಿಕ ವೇದಿಕೆಯಿಂದ ‘ಕನ್ನಡ ಭಾಷಾ ಪ್ರಜ್ಞೆ ಬೆಳೆಸುವುದು ಹೇಗೆ ?’ – ಮಾಹಿತಿ
    Next Article ಕರಕುಶಲ ವಸ್ತು ತಯಾರಿಕೆಯ ಉಚಿತ ತರಬೇತಿ
    roovari

    Add Comment Cancel Reply


    Related Posts

    ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಸೆಪ್ಟೆಂಬರ್ 21

    September 18, 2025

    ‘ಗೆಳೆಯರ ಬಳಗ ಕಾರಂತ ಪುರಸ್ಕಾರ – 2025 ಪ್ರಶಸ್ತಿ’ಗೆ ಎಚ್. ಶಕುಂತಳಾ ಭಟ್ ಆಯ್ಕೆ

    September 17, 2025

    ಎ.ಆರ್. ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ಪುದವಟ್ಟು ದತ್ತಿ ಪುರಸ್ಕಾರಕ್ಕೆ ಡಾ. ಎಚ್.ಎಸ್. ಸುರೇಶ್ ಆಯ್ಕೆ

    September 17, 2025

    ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕ.ಸಾ.ಪ. ವತಿಯಿಂದ ಪುಸ್ತಕಗಳ ಕೊಡುಗೆ

    September 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.