Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ.ದಿಂದ ‘ಬಸವ ಜಯಂತಿ’ ಕಾರ್ಯಕ್ರಮ
    Literature

    ಕ.ಸಾ.ಪ.ದಿಂದ ‘ಬಸವ ಜಯಂತಿ’ ಕಾರ್ಯಕ್ರಮ

    May 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಬಸವ ಜಯಂತಿ’ ಕಾರ್ಯಕ್ರಮವು ದಿನಾಂಕ 10-05-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿಯವರು ಮಾತನಾಡಿ “ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ ಕಲ್ಯಾಣ ಕ್ರಾಂತಿಯ ಮೂಲಕ ಸಮಾನತೆಯ ಆಶಯವನ್ನು ಎತ್ತಿ ಹಿಡಿದ ಬಸವಣ್ಣನವರ ಕೊಡುಗೆ ಅಪಾರ. ಬಸವಣ್ಣನವರು ಸಾಹಿತ್ಯದಲ್ಲಿ ಸರಳತೆಯನ್ನು ತಂದು ಜನ ಸಾಮಾನ್ಯರನ್ನು ತಲುಪಿದವರು. ಗಹನ ವೇದಾಂತವನ್ನು ಸರಳವಾಗಿ ಜನರ ಬಳಿಗೆ ತಂದವರು. ಅನುಭವ ಮಂಟಪದ ಪರಿಕಲ್ಪನೆಯ ಮೂಲಕ ಸಮಾಜದ ಎಲ್ಲರನ್ನೂ ಒಂದುಗೂಡಿಸಿದವರು. ಅವರ ತಾತ್ವಿಕ ಮೌಲ್ಯಗಳನ್ನು ಭಾರತದ ಸಂವಿಧಾನ ಕೂಡ ಅಳವಡಿಸಿಕೊಂಡಿದೆ ಈ ಘೋಷಣೆಯ ಮೂಲಕ ಬಸವಣ್ಣನವರ ಚಿಂತನಗಳು ಎಲ್ಲೆಡೆ ಪಸರಿಸಲು ಅನುಕೂಲವಾಗುವುದು” ಎಂದು ಅಭಿಪ್ರಾಯಪಟ್ಟರು.

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್. ಶ್ರೀಧರ ಮೂರ್ತಿಯವರು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಬಸವಣ್ಣನವರ ಜೀವನ ಸಾಧನೆಯನ್ನು ಪ್ರಸಾರ ಮಾಡುವಲ್ಲಿ ಬಹಳ ಹಿಂದಿನಿಂದಲೂ ಶ್ರಮಿಸುತ್ತಾ ಬಂದಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿದ್ದ ಎಂ.ಆರ್. ಶ್ರೀನಿವಾಸ ಮೂರ್ತಿಯವರು ವಚನ ಸಾಹಿತ್ಯದ ಬಗ್ಗೆ ಪರಿಣಿತರಾಗಿದ್ದ ಅವರ ಅವಧಿಯಲ್ಲಿ ಬಸವಣ್ಣನವರ ಕುರಿತ ಇಡೀ ದಿನ ವಿಚಾರ ಸಂಕಿರಣ ನಡೆದಿದ್ದು ಇಂದಿಗೂ ಸ್ಮರಣೀಯವಾಗಿದೆ. ಅವರ ‘ವಚನ ಧರ್ಮ ಸಾರ’ ಇಂದಿಗೂ ಬಹು ಬೇಡಿಕೆಯ ಕೃತಿಯಾಗಿದೆ. ಇದಲ್ಲದೇ ಪೂಜ್ಯಶ್ರೀ ಬಸವಲಿಂಗ ಪಟ್ಟದೇವರ ‘ಬಸವಣ್ಣ ಮತ್ತು ಅಷ್ಟಾವರಣ’, ‘ಎಂ.ಜಿ. ಚಂದ್ರಶೇಖರಯ್ಯನವರ ‘ಬಸವಣ್ಣ ಜೀವನ ಸಾಧನೆ’ ಹಾಗೂ ಎಂ.ಎನ್. ಗಿರಿಜಾಪತಿಯವರ ‘ವಚನ ರತ್ನತ್ರಯರು’ ಮೊದಲಾದ ಬಸವಣ್ಣನವರ ಕುರಿತ ಅನೇಕ ಪ್ರಮುಖ ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ” ಎಂದು ಸ್ಮರಿಸಿಕೊಂಡರು.

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರೊ. ನಟರಾಜ್, ರಾಘವೇಂದ್ರ ಕುಲಕರ್ಣಿ, ಕೇಶವ ಮೂರ್ತಿ, ಶ್ರೀನಿವಾಸ ಮೂರ್ತಿ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಎ.ಪಿ. ಮಾಲತಿ ಅವರ ‘ದೇವ’ : ವ್ಯಕ್ತಿತ್ವದೊಳಗಿನ ವ್ಯಂಗ್ಯ ವೈರುಧ್ಯಗಳು
    Next Article ಉಡುಪಿಯ ರಾಗ ಧನ ಸಂಸ್ಥೆಯಿಂದ ‘ಸಂಗೀತ ಕಾರ್ಯಾಗಾರ’ ಮತ್ತು ಕರ್ನಾಟಕ ಸಂಗೀತ ಕಛೇರಿ | ಮೇ 21 ಮತ್ತು 22
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.