Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಕುಮಟಾ ಹವ್ಯಕ ಸಭಾಭವನದಲ್ಲಿ ‘ಯಕ್ಷ ಸಂಭ್ರಮ’ | ಜೂನ್ 22

    June 20, 2025

    ಸ್ವಿಟ್ಜರ್ಲ್ಯಾಂಡ್ ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೈಂದೂರಿನಲ್ಲಿ ಡಾ. ಎಚ್.ಎಸ್.ವೆಂಕಟೇಶ್ ಮೂರ್ತಿ ಇವರಿಗೆ “ಭಾವ ನಮನ”
    Literature

    ಬೈಂದೂರಿನಲ್ಲಿ ಡಾ. ಎಚ್.ಎಸ್.ವೆಂಕಟೇಶ್ ಮೂರ್ತಿ ಇವರಿಗೆ “ಭಾವ ನಮನ”

    June 19, 2025Updated:June 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು: ಸುರಭಿ ರಿ. ಬೈಂದೂರು, ರಂಗಸ್ಥಳ ಉಪ್ಪಂದ ಹಾಗೂ ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಯೋಗದಲ್ಲಿ ಭಾವ ಕವಿ ಪ್ರಸಿದ್ಧ ಸಾಹಿತಿ ಡಾ. ಎಚ್.ಎಸ್.ವೆಂಕಟೇಶ್ ಮೂರ್ತಿ ಇವರಿಗೆ “ಭಾವ ನಮನ” ಕಾರ್ಯಕ್ರಮ ದಿನಾಂಕ 14 ಜೂನ್ 2025ರಂದು ಉಪ್ಪುಂದದ ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು “ರಂಗಸ್ಥಳ” ಉಪ್ಪಂದ ಇದರ ಅಧ್ಯಕ್ಷರಾದ ಯು. ಎಚ್. ರಾಜಾರಾಮ ಭಟ್ ವಹಿಸಿದ್ದು, ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಪ್ರಕಾಶ್ ಚಂದ್ರ ಶೆಟ್ಟಿ ಶುಭಶಂಸನೆಗೈದು, ಡಾ. ವೆಂಕಟೇಶ್ ಮೂರ್ತಿ ಇವರ ಸಾಹಿತ್ಯ ಸಾಧನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
    ಕಾರ್ಯಕ್ರಮದಲ್ಲಿ ಎಚ್. ಎಸ್. ವಿ. ಯವರ ಕುರಿತು “ನುಡಿ ನಮನ” ಸಲ್ಲಿಸಿದ ಅಧ್ಯಾಪಕ ಸಂದೀಪ ದೇವಾಡಿಗ ಎಚ್.ಎಸ್‌.ವಿ ಅವರ ಬಗ್ಗೆ ನುಡಿ ನಮನದಲ್ಲಿ ಮಾತನಾಡುತ್ತಾ ಎಚ್.ಎಸ್‌.ವಿ ಯವರು “ಅಜರಾಮರ” ಎನ್ನುವ ಮಾತನ್ನು ಹೇಳಿದರು. ಆಶಯ ನುಡಿಗಳನ್ನಾಡಿದ ಬೈಂದೂರು ‘ಸುರಭಿ’ ಇದರ ಅಧ್ಯಕ್ಷರಾದ ಆನಂದ ಮದ್ದೋಡಿ ಕಾರ್ಯಕ್ರಮದ ಕುರಿತು ತಿಳಿಸಿದರು. ಶ್ರೀ ಸಂದೀಪ ದೇವಾಡಿಗ ಸ್ವಾಗತಿಸಿ, ಧನ್ಯವಾದವನ್ನು ‘ರಂಗಸ್ಥಳ ಉಪ್ಪಂದ’ ಇದರ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಉಪ್ಪುಂದ ನೆರವೇರಿಸಿದರು.
    ಕಾರ್ಯಕ್ರಮದ ಮಧ್ಯದಲ್ಲಿ ಹಾಗೂ ಕೊನೆಯಲ್ಲಿ “ರಾರಾ ಮೆಲೋಡಿಸ್” ಉಪ್ಪುಂದ ಇದರ ಕಲಾವಿದರಾದ ಶ್ರೀ ರವಿ ಹೊಸ್ಕೋಟೆ, ಶ್ರೀಮತಿ ರಮ್ಯರವಿ ಹೊಸ್ಕೋಟೆ, ಶ್ರೀ ಚಂದ್ರ ಬಂಕೇಶ್ವರ ಇವರಿಂದ ಎಚ್.ಎಸ್‌.ವಿ ಅವರ ವಿವಿಧ ಆಯ್ದ ಭಾವಗೀತೆಗಳ ಗುಚ್ಛವನ್ನು ಪ್ರಸ್ತುತಪಡಿಸಿದ್ದರು.\

    baikady condolence meeting Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಲಿಂಗಪ್ಪ ಹಾಗೂ ದಿಲೀಪ್ ಗೆ ಸಾಹಿತ್ಯ ಅಕಾಡಮಿ ಪುರಸ್ಕಾರ
    Next Article ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮೂಡಲಪಾಯ ಯಕ್ಷೋತ್ಸವ’ | ಜೂನ್ 24 ಮತ್ತು 25
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಸ್ವಿಟ್ಜರ್ಲ್ಯಾಂಡ್ ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 20, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಶರ್ಮಿಷ್ಠೆ’ ಏಕವ್ಯಕ್ತಿ ನಾಟಕ ಪ್ರದರ್ಶನ | ಜೂನ್ 22

    June 20, 2025

    ಲೇಖನ | ಹೊಸ ಕಾದಂಬರಿ ‘ಮಾರ್ಕೋಲು’

    June 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.