Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ
    Competition

    ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ

    November 28, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ಸಂಸ್ಕೃತ ಸಂಘ ಮತ್ತು ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಸೋಂದಾ ಸ್ವರ್ಣವಲ್ಲಿ ಮಠ ಶಿರಸಿ ಹಾಗೂ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧಾ ಕಾರ್ಯಕ್ರಮ ದಿನಾಂಕ 23 ನವೆಂಬರ್ 2024 ರಂದು ನಡೆಯಿತು.


    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಬಿ. ಪುರಾಣಿಕರು ಮಾತನಾಡಿ “ಕರ್ತವ್ಯ ಪ್ರಜ್ಞೆಯನ್ನು ಜಾಗೃತಗೊಳಿಸಿದ ಶ್ರೀಕೃಷ್ಣ ಸಂದೇಶ ಸಾರ್ವಕಾಲಿಕವಾದುದು. ಜೀವನವನ್ನು ಸಂತೋಷವಾಗಿ ನೋಡಬಲ್ಲ ಅಂತರಂಗ ದೃಷ್ಟಿಯನ್ನು ಜಗತ್ತಿಗೆ ತೋರಿಸಿದ ಭಗವದ್ಗೀತಾ ಸಂದೇಶ ವಿಶ್ವಮಾನ್ಯವಾದುದು. ಹಾಗಾಗಿ ನಾವು ನಮ್ಮ ಸನಾತನ ಧರ್ಮದ ರಕ್ಷಣೆಯ ಕರ್ತವ್ಯವನ್ನು ಅರಿತು ಗೀತೆಯ ಸಾರವನ್ನು ಜನಸಾಮಾನ್ಯರಿಗೂ ತಲುಪುವಂತೆ ಮಾಡುವ ಶ್ರೀ ಸೋಂದಾ ಸ್ವರ್ಣವಲ್ಲೀ ಶ್ರೀಗಳ ಕಾರ್ಯ ಸ್ತುತ್ಯರ್ಹವಾದುದು.” ಎಂದರು.
    ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಪ್ರದೀಪ ಕುಮಾರ ಕಲ್ಕೂರ ಮಾತನಾಡಿ “ಆಧುನಿಕ ಜಗತ್ತಿಗೆ ಭಗವದ್ಗೀತಾ ಸಂದೇಶದ ಮಹತ್ವವನ್ನು ತಿಳಿಯಪಡಿಸುತ್ತಿರುವ ಮಂಗಳೂರು ಸಂಸ್ಕೃತ ಸಂಘದ ಕಾರ್ಯ ಅಭಿನಂದನೀಯವಾದು.” ಎಂದು ತಿಳಿಸಿದರು.


    ಶಾರದಾ ಪ. ಪೂ. ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಕಾಶ ನಾಯಕ್ ಹಾಗೂ ಮಂಗಳೂರು ಸಂಸ್ಕೃತ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ. ಪಿ. ವಾಸುದೇವ ರಾವ್ ಹಾಗೂ ಶ್ರೀ ಭಗವದ್ಗೀತಾ ಅಭಿಯಾನದ ದ. ಕ. ಜಿಲ್ಲೆ ಇದರ ಸಂಚಾಲಕರಾದ ಡಾ. ಮಧುಕೇಶ್ವರ ಶಾಸ್ತ್ರಿ ಉಪಸ್ಥಿತರಿದ್ದರು. ಶ್ರೀಭಗವದ್ಗೀತಾ ಅಭಿಯಾನದ ಬಗ್ಗೆ ಶಾರದಾ ಪ. ಪೂ. ಕಾಲೇಜಿನ ಉಪನ್ಯಾಸಕ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿ ದ. ಕ. ಇದರ ತಾಲೂಕು ಸಂಚಾಲಕರಾದ ಶ್ರೀ ರಮೇಶ ಆಚಾರ್ಯ ನಾರಳ ಪ್ರಾಸ್ತವಿಕವಾಗಿ ಮಾತನಾಡಿದರು. ಮಂಗಳೂರು ಸಂಸ್ಕೃತ ಸಂಘದ ಅಧ್ಯಕ್ಷರಾದ ವಿದ್ವಾನ್ ಪೈಕ ವೆಂಕಟ್ರಮಣ ಭಟ್ ಸ್ವಾಗತಿಸಿ, ಶ್ರೀಮತಿ ದೀಕ್ಷಾ ಪ್ರಭು ಮತ್ತು ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಶ್ರೀ ಶ್ರೀನಿವಾಸ ಮಧ್ಯಸ್ಥ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಭವನದಲ್ಲಿ “ಕನ್ನಡ ರಾಜ್ಯೋತ್ಸವದ ಸವಿ ಸಂಭ್ರಮ “
    Next Article ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಗೆ ಆಗಮಿಸಿದ ಕನ್ನಡ ರಥ
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.