ಉಪ್ಪಿನಕುದ್ರು : “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 108ನೇ ತಿಂಗಳ ಕಾರ್ಯಕ್ರಮ ದಿನಾಂಕ 15 ಜೂನ್ 2025ರಂದು ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಉಪ್ಪಿನಕುದ್ರು ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ಉಪನ್ಯಾಸಕಿ ಮಾಲತಿ ಜಿ. ಪೂಜಾರಿ, ಶ್ರೀರಕ್ಷಾ ಎಸ್. ಪೈ, ವಸಂತಿ ಆರ್. ಪಂಡಿತ್ ಹಾಗೂ ಅಕಾಡೆಮಿ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ವಸಂತಿ ಆರ್. ಪಂಡಿತ್ ಇವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ವರದರಾಯ ಕಾಮತ್ ಮತ್ತು ವೀಣಾ ಕಾಮತ್ ಇವರನ್ನು ಗೌರವಿಸಲಾಯಿತು. ವಸಂತಿ ಆರ್. ಪಂಡಿತ್ ಕುಂದಾಪುರ ಇವರು ನಡೆಸಿಕೊಟ್ಟ ಭಜನ್ ಸಂಧ್ಯಾ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂತು. ಶಾಮ್ ಜಿ. ಎನ್. ಪೂಜಾರಿ ಗಂಗೊಳ್ಳಿ ಇವರ ಕೊಳಲು ವಾದನ ಹಾಗೂ ಆಕಾಂಕ್ಷಾ ಎಸ್. ಪೈ ಇವರ ಭಾವಗೀತೆ ಪ್ರೇಕ್ಷಕರ ಗಮನ ಸೆಳೆಯಿತು. ಭಾಸ್ಕರ್ ಕೊಗ್ಗ ಕಾಮತ್ ನಿರೂಪಿಸಿದರು.