ಕಾಸರಗೋಡು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ‘ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ (ರಿ.) ಮಂಗಳೂರು’ ಇವರು ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ‘ಭರತಮುನಿ ಜಯಂತಿ’ ಕಾರ್ಯಕ್ರಮವನ್ನು ದಿನಾಂಕ 15 ಮಾರ್ಚ್ 2026ರಂದು ಕಾಸರಗೋಡು ಶ್ರೀ ಎಡನೀರು ಮಠದ ಭಾರತೀ ಕಲಾ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪೂರ್ವಾಹ್ನ 10-00 ಗಂಟೆಗೆ ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ ಇದರ ಅಧ್ಯಕ್ಷರಾದ ವಿದುಷಿ ರಾಜಶ್ರೀ ಶೆಣೈ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. 11-00 ಗಂಟೆಗೆ ವೈಷ್ಣವಿ ನಾಟ್ಯಾಲಯ (ರಿ.), ನಾಟ್ಯರಂಗ, ಶಿವಾಂಜಲಿ ಕಲಾಕೇಂದ್ರ (ರಿ.) ಮತ್ತು ಸವಿಜೀವನಂ ನೃತ್ಯಕಲಾ ಕ್ಷೇತ್ರ ಇವರಿಂದ ಸಮೂಹ ನೃತ್ಯ, ಅಪರಾಹ್ನ 2-00 ಗಂಟೆಗೆ ಬೆಂಗಳೂರಿನ ವಿದುಷಿ ಗೌರಿ ಸಾಗರ್ ಇವರಿಂದ ‘ಶ್ರೀ ವಿನೋದ’ ಭರತನಾಟ್ಯ ಪ್ರಸ್ತುತಿ, ಗಂಟೆ 3-15ಕ್ಕೆ ‘ಕುಚೇಲ ವೃತಂ’ ಪ್ರಸಂಗದ ಕಥಕ್ಕಳಿ ಪ್ರದರ್ಶನಗೊಳ್ಳಲಿದೆ.

