Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿಯಲ್ಲಿ ಬೆಂಗಳೂರಿನ ಅರ್ಚನ ಹೆಚ್.ಆರ್. ಇವರ ನೃತ್ಯ ಪ್ರದರ್ಶನ | ಜುಲೈ 8
    Bharathanatya

    ‘ನೃತ್ಯ ಶಂಕರ’ ಸರಣಿಯಲ್ಲಿ ಬೆಂಗಳೂರಿನ ಅರ್ಚನ ಹೆಚ್.ಆರ್. ಇವರ ನೃತ್ಯ ಪ್ರದರ್ಶನ | ಜುಲೈ 8

    July 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 08-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅರ್ಚನ ಹೆಚ್.ಆರ್. ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ವಿದುಷಿ ಶ್ರೀಮತಿ ಅರ್ಚನಾರವರು ತಮ್ಮ 6ನೇ ವಯಸ್ಸಿನಲ್ಲೇ ಗುರುಗಳಾದ ಶ್ರೀರಂಜಿತಾ ನಾಗೇಶ್ ಹಾಗೂ ಜಿ.ಎಸ್. ನಾಗೇಶ್ ಇವರ ಮಾರ್ಗದರ್ಶನದಲ್ಲಿ ಭರತನಾಟ್ಯದ ಕಲಿಕೆ ಆರಂಭಿಸಿದ್ದು, ನಂತರ ವಿವಿಧ ಕಾರ್ಯಾಗಾರಗಳ ಮೂಲಕ ತಮ್ಮ ಕಲಿಕೆ ಹಾಗೂ ಆಸಕ್ತಿಯನ್ನು ಮುಂದುವರಿಸುತ್ತಿದ್ದಾರೆ. 2016ರಲ್ಲಿ ತಮಿಳ್ ಯೂನಿವರ್ಸಿಟಿಯಿಂದ ಡಿಸ್ಟೆನ್ಸ್ ಎಜುಕೇಶನ್ ಮೂಲಕ ಭರತನಾಟ್ಯದಲ್ಲಿ ಮಾಸ್ಟರ್ಸ್ ಪದವಿಯನ್ನು ಹೊಂದಿದ್ದಾರೆ. ಇದರಲ್ಲಿ “ದೇವದಾಸಿ ವ್ಯವಸ್ಥೆ ಮತ್ತು ಅದು ಕಲಾರೂಪಕ್ಕೆ ಹೇಗೆ ಸಹಾಯ ಮಾಡಿತು” ಎಂಬ ಸಂಶೋಧನಾ ಕೆಲಸವನ್ನು ಸಲ್ಲಿಸಿದ್ದಾರೆ. 2014ರಲ್ಲಿ ರಂಗಪ್ರವೇಶವನ್ನು ಮುಗಿಸಿ, 2018ರಲ್ಲಿ ಗುರುಗಳಾದ ಕಿರಣ್ ಸುಬ್ರಮಣ್ಯಮ್ ಮತ್ತು ಸಂದ್ಯಾ ಕಿರಣ್ ಇವರ ಮಾರ್ಗದರ್ಶನದಲ್ಲಿ ಪೂರ್ಣ ಪ್ರಮಾಣದ ‘ಮಾರ್ಗಂ’ ಎಂಬ ಸೋಲೋ ಪ್ರದರ್ಶನವನ್ನು ಪೂರ್ಣಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿದ್ದು, ಐ.ಐ ಸಿ.ಆರ್.ನ ಎಂಪಾನೆಲ್ಡ್ ಕಲಾವಿದೆಯಾಗಿಯೂ ಸಹ ಆಯ್ಕೆಯಾಗಿದ್ದಾರೆ. ಕಳೆದ 7 ವರ್ಷಗಳಿಂದ ರಸಿಕ ಸಂಸ್ಥೆಯ ಮುಖ್ಯ ನೃತ್ಯ ಸಮೂಹದ ಭಾಗವಾಗಿ ಗುರುಗಳ ಎಲ್ಲಾ ಪ್ರಮುಖ ನೃತ್ಯರೂಪಕದಲ್ಲಿ ಭಾಗವಹಿಸಿದ್ದು, ಭಾರತದ ಹಲವಾರು ಕಡೆ ವಿವಿಧ ನೃತ್ಯ ಪ್ರದರ್ಶನಗಳನ್ನು ನೀಡಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಇವರು ಟಿ.ಸಿ.ಎಸ್. ಹಾಗೂ ಐ.ಬಿ.ಎಂ.ನ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ನೃತ್ಯ ಸಂಯೋಜನೆ ಮಾಡಿರುವ ಕೀರ್ತಿ ಇವರದ್ದಾಗಿದೆ. ಪ್ರಸ್ತುತ ಐ.ಬಿ.ಎಂ. ಸಂಸ್ಥೆಯಲ್ಲಿ ಸೀನಿಯರ್ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಹಂದಾಡಿ ಬಾಲಕೃಷ್ಣ ನಾಯಕ್ ನಿಧನ
    Next Article ‘ವೀಣಾ ಸಂಧ್ಯಾ’ ಸರಣಿ ಕಾರ್ಯಕ್ರಮಕ್ಕೆ ಚಾಲನೆ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.