Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅನ್ವಿತ ತಂತ್ರಿ ಮತ್ತು ಅರ್ಪಿತ ತಂತ್ರಿಯವರಿಂದ ಯಶಸ್ವಿಯಾಗಿ ಸಂಪನ್ನಗೊಂಡ ‘ನೃತ್ಯ ಶಂಕರ’ ಸರಣಿ
    Bharathanatya

    ಅನ್ವಿತ ತಂತ್ರಿ ಮತ್ತು ಅರ್ಪಿತ ತಂತ್ರಿಯವರಿಂದ ಯಶಸ್ವಿಯಾಗಿ ಸಂಪನ್ನಗೊಂಡ ‘ನೃತ್ಯ ಶಂಕರ’ ಸರಣಿ

    June 18, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಇದರ ಸಂಯೋಜನೆಯ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯ ಸರಣಿ 50ರಲ್ಲಿ ಕುಮಾರಿಯರಾದ ಅನ್ವಿತ ತಂತ್ರಿ ಮತ್ತು ಅರ್ಪಿತ ತಂತ್ರಿ ಸಹೋದರಿಯರಿಂದ ಕಿಕ್ಕಿರಿದು ತುಂಬಿದ್ದ ಕೊಡವೂರು ದೇವಳದ ವಸಂತ ಮಂಟಪದಲ್ಲಿ ನೃತ್ಯಾರ್ಪಣೆ ಕಾರ್ಯಕ್ರಮವು ದಿನಾಂಕ 17-06-2024ರಂದು ಅಮೋಘ ಅಭಿನಯದ ಮೂಲಕ ಸಂಪನ್ನಗೊಂಡಿತು.

    ಭರತನಾಟ್ಯದಲ್ಲಿ ಸಮಕಾಲೀನ ನೃತ್ಯದೊಂದಿಗೆ ಸೈ ಎನಿಸಿಕೊಂಡ ಪ್ರಸ್ತುತಿಯು ಪೇಕ್ಷಕರನ್ನು ಕೊನೆಯವರೆಗೂ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಯಿತು. ನೃತ್ಯಶಂಕರ ಸರಣಿ ಮೂಲಕ ಹಲವಾರು ಪ್ರತಿಭೆಗಳಿಗೆ ಶ್ರೀದೇವಳದಲ್ಲಿ ವೇದಿಕೆ ಅವಕಾಶ ಮಾಡಿಕೊಟ್ಟ ಸಂಯೋಜಕರ ಕೆಲಸ ಶ್ಲಾಘನೀಯ. ಕೊಡವೂರು ನೃತ್ಯನಿಕೇತನದ ವಿದ್ವಾನ್ ಸುಧೀರ್ ರಾವ್ ಕೊಡವೂರು ಹಾಗು ವಿದುಷಿ ಮಾನಸಿ ಸುಧೀರ್ ಶಿಷ್ಯೆಯರಾದ ಈ ಸಹೋದರಿಯರು ವೇದಮೂರ್ತಿ ತೊಟ್ಟಂ ಮಧುಸೂದನ ತಂತ್ರಿ ಹಾಗು ಅಕ್ಷತಾ ತಂತ್ರಿಯವರ ಮುದ್ದಿನ ಕುವರಿಯರು.

    ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿಯೂ, ಪದವಿ ಪೂರ್ವ ಶಿಕ್ಷಣವನ್ನು ಎಂ.ಜಿ.ಎಂ. ಕಾಲೇಜಿನಲ್ಲಿ ಪೂರೈಸಿ ಪ್ರಸ್ತುತ ಅನ್ವಿತ ದ್ವಿತೀಯ ಬಿ.ಎಸ್ಸಿ. ಪದವಿಯನ್ನು ಎಂ.ಜಿ.ಎಂ. ಕಾಲೇಜಿನಲ್ಲಿ ಮುಂದುವರೆಸುತ್ತಿದ್ದಾಳೆ ಹಾಗೂ ಅರ್ಪಿತ ದ್ವಿತೀಯ ಪಿ.ಯು.ಸಿ.ಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಮುಗಿಸಿರುತ್ತಾಳೆ. ತಂತ್ರಿ ಸಹೋದರಿಯರು ನೃತ್ಯನಿಕೇತನ ಕೊಡವೂರು ಸಂಸ್ಥೆಯಲ್ಲಿ ಕಳೆದ 15 ವರುಷಗಳಿಂದ ಭರತನಾಟ್ಯ ಅಭ್ಯಾಸವನ್ನು ಮಾಡಿ ವಿದ್ವತ್ ಅಂತಿಮ ಮತ್ತು ಪೂರ್ವ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಇವರು ಸಂಸ್ಥೆಯ ಮಳೆ ಬಂತು ಮಳೆ, ಚಿತ್ರಾ, ಶ್ರೀನಿವಾಸ ಕಲ್ಯಾಣ, ನರಸಿಂಹ ಮುಂತಾದ ನೃತ್ಯ ರೂಪಕ, ನೃತ್ಯ ನಾಟಕಗಳಲ್ಲಿ ಭಾಗವಹಿಸಿ ಅನೇಕ ನೃತ್ಯ ಪ್ರದರ್ಶನಗಳನ್ನು ನೀಡಿರುತ್ತಾರೆ.

    ವಿದ್ವಾನ್ ಭವಾನಿಶಂಕರ್ ನಿರ್ದೇಶನದ ‘ಮೈಮೆದ ಬಬ್ಬು’ ಎಂಬ ತುಳು ನೃತ್ಯ ರೂಪಕದಲ್ಲಿಯೂ ಅಭಿನಯಿಸಿರುತ್ತಾರೆ. ಕರಾವಳಿಯ ಗಂಡು ಕಲೆ ಯಕ್ಷಗಾನದ ಬಡಗು ಹಾಗೂ ತೆಂಕುತಿಟ್ಟಿನ ಯಕ್ಷಗಾನ ಕಲಿಕೆಯಲ್ಲಿಯೂ ತಮ್ಮ ಛಾಪನ್ನು ಮೂಡಿಸಿ, ಬಡಾನಿಡಿಯೂರು ಕೇಶವ ರಾವ್ ಅವರ ಸನ್ಯಾಸಿ ಮಠ ಮಕ್ಕಳ ಮೇಳ ಹಾಗೂ ಯಕ್ಷಗಾನ ಕೇಂದ್ರದ ಗುರುಗಳಾದ ಸುಬ್ರಹ್ಮಣ್ಯ ಭಟ್, ಶೈಲೇಶ್ ತೀರ್ಥಹಳ್ಳಿ ಮತ್ತು ಕೃಷ್ಣಮೂರ್ತಿ ಭಟ್ ಇವರ ಬಳಿಯೂ ಬಡಗುತಿಟ್ಟು ಯಕ್ಷಗಾನ ಕಲಿತು ರುಕ್ಮಿಣಿ, ಮದನಾಕ್ಷಿ, ರಂಭೆ, ಈಶ್ವರ, ಕಂಸ, ರುಚಿಮತಿ, ಮಾಲಿನಿ, ಅರ್ಜುನ, ಅಭಿಮನ್ಯು, ಮೈಂದ, ಗರುಡ, ಹನುಮಂತ, ರಾವಣ, ಧರ್ಮರಾಯ ಹೀಗೆ ಹತ್ತು ಹಲವಾರು ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಹಾಗೆಯೇ ತೆಂಕುತಿಟ್ಟಿನ ಯಕ್ಷಗಾನದಲ್ಲೂ ಪ್ರದ್ಯುಮ್ನ, ಯವನಾಶ್ವ, ಲಕ್ಷ್ಮಣ ಪಾತ್ರಗಳೂ ಕೂಡ ಗುರುಗಳಾದ ರಾಕೇಶ್ ರೈ ಅಡ್ಕರವರ ನೇತೃತ್ವದಲ್ಲಿ ಅಭಿನಯಿಸುತ್ತಾರೆ.

    ಯಕ್ಷಗಾನ ಮುಮ್ಮೇಳ ಮಾತ್ರವಲ್ಲದೆ ಹಿಮ್ಮೇಳಗಳ ರುಚಿಯನ್ನು ಸವಿಯಲು ಮದ್ದಳೆ ಮತ್ತು ಚೆಂಡೆಯನ್ನು ನೆಕ್ಕರೆಮೂಲೆ ಗಣೇಶ್ ಭಟ್ ಇವರ ಬಳಿ, ಭಾಗವತಿಕೆಯನ್ನು ಪುಂಡಿಕೈ ಗೋಪಾಲಕೃಷ್ಣ ಭಟ್ ಇವರ ಬಳಿ ಅಭ್ಯಾಸ ಮಾಡಿರುತ್ತಾರೆ. ಜಾನಪದ ಕ್ಷೇತ್ರದಲ್ಲಿ ಗುರು ಹೇಮಂತ್ ಇವರ ‘ಕಲಾಮಯಂ’ ಸಂಸ್ಥೆಯಲ್ಲಿಯೂ ತರಬೇತಿ ಪಡೆದಿರುತ್ತಾರೆ. ಹೆಣ್ಣು ಮಕ್ಕಳು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳುವಲ್ಲಿ ಗಟ್ಟಿಗರಾಗಲು ಗುರುಗಳಾದ ದಿ. ನಿತ್ಯಾನಂದ ಕೆಮ್ಮಣ್ಣು ಇವರ ಬಳಿ ತರಬೇತಿ ಪಡೆದು ರಾಜ್ಯಮಟ್ಟದ ಬುಡೊಕಾನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಅನ್ವಿತ ಪಡೆದಿರುತ್ತಾಳೆ. ಪಾಶ್ಚಾತ್ಯ ನೃತ್ಯದ ಒಲವೂ ಕೂಡ ಗುರುಗಳಾದ ಪ್ರವೀಣ್, ಅಶೋಕ್, ಶ್ರೀನಿವಾಸ್ ಇವರಿಂದ ಚಿಗುರೊಡೆದು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ.

    ಚಿತ್ರಕಲೆ, ಆಟೋಟ ಸ್ಪರ್ಧೆಗಳಲ್ಲೂ ಮುಂದಿದ್ದಾರೆ. ಗೈಡ್ಸ್ ತರಬೇತಿಯನ್ನು ಪಡೆದು ರಾಜ್ಯಪುರಸ್ಕಾರವನ್ನು ಪಡೆದಿರುತ್ತಾರೆ. ಸಂಗೀತ ಅಭ್ಯಾಸವನ್ನು ಗುರುಗಳಾದ ಉಷಾ ಹೆಬ್ಬಾರ್ ಇವರ ಬಳಿ ಅಭ್ಯಾಸ ಮಾಡಿರುತ್ತಾರೆ. ಅರ್ಪಿತಾ ಈಜು ತರಬೇತಿಯನ್ನು ಪಡೆದಿರುತ್ತಾಳೆ. ಎನ್.ಸಿ.ಸಿ. ಸ್ವಯಂ ಸೇವಕಿಯರಾಗಿ ಬಿ ಮತ್ತು ಸಿ ಸರ್ಟಿಫಿಕೇಟ್ ನಲ್ಲಿ ಎ ಗ್ರೇಡ್ ಪಡೆದಿರುತ್ತಾರೆ. ಅನ್ವಿತ ಥಲ್ ಸೇನಾ ಶಿಬಿರದಲ್ಲಿ ಭಾಗವಹಿಸಿ ದೆಹಲಿಯಲ್ಲಿ ಕರ್ನಾಟಕ ಮತ್ತು ಗೋವಾವನ್ನು ಪ್ರತಿನಿಧಿಸಿರುತ್ತಾಳೆ. ರಾಷ್ಟ್ರೀಯ ಸೇವಾಯೋಜನೆಯ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿರುತ್ತಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಯುವ ನೃತ್ಯೋತ್ಸವ 2024’ | ಜೂನ್ 23 
    Next Article ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ | ಜೂನ್ 22
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.