Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಸುಪ್ರಭಾ ಕಲ್ಕೂರ್ ಇವರ ನೃತ್ಯ ಪ್ರದರ್ಶನ | ಆಗಸ್ಟ್ 19
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಸುಪ್ರಭಾ ಕಲ್ಕೂರ್ ಇವರ ನೃತ್ಯ ಪ್ರದರ್ಶನ | ಆಗಸ್ಟ್ 19

    August 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 19-08-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಸುಪ್ರಭಾ ಕಲ್ಕೂರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ಶ್ರೀಮತಿ ಸುರೇಖಾ ಕಲ್ಕೂರ ಮತ್ತು ಶ್ರೀ ಪ್ರಸನ್ನ ಕಲ್ಕೂರ ದಂಪತಿಗಳ ಸುಪುತ್ರಿಯಾದ ವಿದುಷಿ ಸುಪ್ರಭಾ ಕಲ್ಕೂರ ಇವರು ನೃತ್ಯನಿಕೇತನ ಕೊಡವೂರು ಸಂಸ್ಥೆಯ ವಿದ್ವಾನ್ ಸುಧೀರ್ ರಾವ್ ಕೊಡವೂರು ಮತ್ತು ವಿದುಷಿ ಮಾನಸಿ ಸುಧೀರ್ ಇವರ ಶಿಷ್ಯೆಯಾಗಿ ಕಳೆದ 18 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ವಿದ್ವತ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ಶ್ರೀಮತಿ ವಸಂತಿ ಆಚಾರ್ಯ ಹಾಗೂ ವಿದುಷಿ ವಿನುತ ಆಚಾರ್ಯ ಇವರಲ್ಲಿ ಕರ್ನಾಟಕ ಸಂಗೀತ ಅಭ್ಯಾಸ ಮಾಡಿದ್ದು, ಜೂನಿಯರ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ವಿದ್ವಾನ್ ರವಿಕುಮಾರ್ ಮೈಸೂರು ಅವರಲ್ಲಿ ಪಿಟೀಲುವಾದನ ಕಲಿತಿದ್ದು ಜೂನಿಯರ್ ಶಾಸ್ತ್ರೀಯ ಸಂಗೀತ ವಾದ್ಯ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾಳೆ. ನೃತ್ಯನಿಕೇತನ ಕೊಡವೂರಿನ ನಾರಸಿಂಹ, ಚಿತ್ರಾ, ಶ್ರೀನಿವಾಸ ಕಲ್ಯಾಣ ಮುಂತಾದ ನೃತ್ಯರೂಪಕ, ನೃತ್ಯನಾಟಕಗಳಲ್ಲಿ ಅಭಿನಯಿಸಿ ಸಂಸ್ಥೆಯ ಭಾಗವಾಗಿ ದೇಶಾದ್ಯಂತ 500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದಾಳೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಶ್ರೀರಾಮ ಕಾರುಣ್ಯ ಕಲಾಸಂಘ’ದ ದಶಮಾನೋತ್ಸವ 
    Next Article ಪುತ್ತೂರಿನಲ್ಲಿ ‘ವಿವೇಕ ಜಾಗೃತಿ’ – ‘ನನ್ನ ಏಳಿಗೆಗೆ ನಾನೇ ಶಿಲ್ಪಿ’ ಉಪನ್ಯಾಸ ಕಾರ್ಯಕ್ರಮ
    roovari

    Comments are closed.

    Related Posts

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.