Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭರತನಾಟ್ಯ ರಂಗಪ್ರವೇಶ ಸಮಾರಂಭ
    Bharathanatya

    ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭರತನಾಟ್ಯ ರಂಗಪ್ರವೇಶ ಸಮಾರಂಭ

    June 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ವಿದುಷಿ ಚೈತ್ರಾ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭವು ದಿನಾಂಕ 22-06-2024ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

    ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಇವರು ಮಾತನಾಡಿ “ಭಾರತದ ಅಪೂರ್ವ ಕಲೆಗಳು ಮತ್ತು ಮಾನವಸಂಪನ್ಮೂಲ ಇವು ದೇಶದ ಅಮೂಲ್ಯ ಸಂಪತ್ತು ಹಾಗೂ ವರದಾನವಾಗಿದೆ. ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಕಲೆಗಳನ್ನೂ ಹವ್ಯಾಸವಾಗಿ ಕರಗತ ಮಾಡಿಕೊಳ್ಳಬೇಕು. ಎಂಟು ವಿಧದ ಶಾಸ್ತ್ರೀಯ ನೃತ್ಯಗಳಲ್ಲಿ ಭರತನಾಟ್ಯ ಸರ್ವಶ್ರೇಷ್ಠ ಕಲೆಯಾಗಿದೆ. ಹಿಂದೆ ಕೇವಲ ಬೆರಳಣಿಕೆಯಷ್ಟು ನೃತ್ಯ ಶಿಕ್ಷಕರಿದ್ದರೆ ಇಂದು ಕರ್ನಾಟಕದಲ್ಲಿ ಸುಮಾರು ಮೂರು ಸಾವಿರ ನೃತ್ಯ ಶಿಕ್ಷಕರಿದ್ದಾರೆ. ನೃತ್ಯ ಅಭ್ಯಾಸ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ” ಎಂದರು.

    ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, “ಭಾವ ಪ್ರಧಾನವಾದ ನಾಟ್ಯಕ್ಕೆ ಭಾಷೆಯ ಹಂಗಿಲ್ಲ” ಎಂದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ “ಯುವ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು” ಎಂದು ಹೇಳಿದರು. ರಾಜಶ್ರೀ ಉಳ್ಳಾಲ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದುಷಿ ಚೈತ್ರಾ ಭಟ್ ಇವರು ಗುರುಗಳಾದ ಗೀತಾ ಸರಳಾಯ, ರಶ್ಮಿ ಚಿದಾನಂದ ಇವರನ್ನು ಗೌರವಿಸಿದರು. ಸುಧಾಕರರಾವ್ ಪೇಜಾವರ ಸ್ವಾಗತಿಸಿ, ಮಂಜುಳಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    ಭರತನಾಟ್ಯ ರಂಗಪ್ರವೇಶಕ್ಕೆ ಹಿಮ್ಮೇಳದಲ್ಲಿ ನೃತ್ಯ ಭಾರತಿಯ ಗುರು ಗೀತಾ ಸರಳಾಯ ಇವರ ನೃತ್ಯ ನಿರ್ದೇಶನ, ನೃತ್ಯ ಭಾರತಿಯ ವಿದುಷಿ ರಶ್ಮಿ ಚಿದಾನಂದ ನಟುವಾಂಗ, ಮಾಹೆಯ ಸ್ವರಾಗ್ ಹಾಡುಗಾರಿಕೆ, ಉಡುಪಿಯ ವಿದ್ವಾನ್ ಶ್ರೀ ಬಾಲಚಂದ್ರ ಭಾಗವತ್ ಮೃದಂಗ ಮತ್ತು ಖಂಜೀರ, ಬೆಂಗಳೂರಿನ ದೂರದರ್ಶನ ಕಲಾವಿದರಾದ ವಿದ್ವಾನ್ ಗಣೇಶ್ ಕೆ.ಎಸ್. ಕೊಳಲು ವಾದನದಲ್ಲಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ಡಾ. ಪ್ರೀತಿ ಶುಭಚಂದ್ರ ಇವರಿಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’ ಪ್ರದಾನ
    Next Article ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡ
    roovari

    Add Comment Cancel Reply


    Related Posts

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಆಲಾಪ್’ ಶಾಸ್ತ್ರೀಯ ಸಂಗೀತ ಕಛೇರಿ | ಮೇ 10

    May 7, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.