Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ ಐನ್‌ಕೈ ಅಜ್ಜಿಕತೆ ಕೃತಿ ಲೋಕಾರ್ಪಣೆ | ಸೆಪ್ಟೆಂಬರ್ 20

    September 18, 2025

    ದಸರಾ ಬಹುಭಾಷಾ ಕವಿಗೋಷ್ಠಿ | ಸೆಪ್ಟೆಂಬರ್ 20

    September 18, 2025

    ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ -6 | ಸೆಪ್ಟೆಂಬರ್ 20

    September 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭರತಾಂಜಲಿಯಲ್ಲಿ ‘ಭರತನ ಭಕ್ತಿ’ ಗಮಕ ವಾಚನ-ಪ್ರವಚನ
    Literature

    ಭರತಾಂಜಲಿಯಲ್ಲಿ ‘ಭರತನ ಭಕ್ತಿ’ ಗಮಕ ವಾಚನ-ಪ್ರವಚನ

    August 8, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಟ್ಟಾರದ ಭರತಾಂಜಲಿ ನೃತ್ಯ ಸಂಸ್ಥೆಯು ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಗಮಕ ಕಲಾ ಪರಿಷತ್ ಮಂಗಳೂರು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ಭರತಾಂಜಲಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಗಮಕ ವಾಚನ ಕಾರ್ಯಕ್ರಮವು ದಿನಾಂಕ 04-08-2023ರಂದು ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ವಸ್ತಿಕ್ ನ್ಯಾಷನಲ್ ಶಾಲೆ ಉರ್ವ ಸ್ಟೋರ್ ಇದರ ಅಧ್ಯಕ್ಷ ರಾಘವೇಂದ್ರ ಹೊಳ್ಳ “ಭಾರತೀಯ ಸನಾತನ ಸಂಸ್ಕೃತಿಯು ತನ್ನದೇ ಆದ ಮೂಲ ಆದರ್ಶಗಳನ್ನು ಮತ್ತು ತತ್ವಗಳನ್ನು ಯಶಸ್ವಿಯಾಗಿ ರಕ್ಷಿಸುವ ಏಕೈಕ ಸಂಸ್ಕೃತಿಯಾಗಿದೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ಸನಾತನ ಧರ್ಮದ ಅರಿವು ಮುಖ್ಯ. ನಮ್ಮ ಮಹಾ ಕಾವ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಈ ಗಮಕ ಕಲೆ ವಹಿಸುತ್ತಿರುವ ಪಾತ್ರ ಬಹು ಮಹತ್ವದ್ದಾಗಿದೆ” ಎಂದರು.
    ಯಕ್ಷಗಾನ ಅರ್ಥದಾರಿ ಮತ್ತು ಪ್ರವಚನಕಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿಯವರು ಮಾತನಾಡಿ “ಭಾರತೀಯರ ಪ್ರಸ್ಥಾನ ತ್ರಯಗಳಲ್ಲೊಂದಾದ ಶ್ರೀ ಮದ್ರಾಮಾಯಣ ಮಹಾಕಾವ್ಯದಲ್ಲಿ ಮನುಷ್ಯ ಸಂಬಂಧದ ಬೇರೆ ಬೇರೆ ಮುಖಗಳನ್ನು ಪರಿಚಯಿಸಲಾಗಿದೆ. ಸಾಮಾಜಿಕ ಮತ್ತು ಕೌಟುಂಬಿಕ ಮೌಲ್ಯಗಳನ್ನು ವಿವಿಧ ಪಾತ್ರಗಳು ಮತ್ತು ಸನ್ನಿವೇಶಗಳ ಮೂಲಕ ಕಟ್ಟಿಕೊಡುವ ಈ ಕಾವ್ಯದಲ್ಲಿ ಬೇಕಾದಷ್ಟು ಜೀವನ ಪಾಠವಿದೆ” ಎಂದು ಹೇಳಿದರು.
    ಕವಿ ಹೊಸೂರಿ ರಾಮಸ್ವಾಮಿ ಅಯ್ಯಂಗಾರ್ ವಿರಚಿತ ‘ಗಮಕ ಸುರಭಿ’ ಕೃತಿಯ ‘ಭರತ ಭಕ್ತಿ’ ಕಾವ್ಯದಿಂದ ಆಯ್ದ ‘ಪಾದುಕಾ ಪ್ರದಾನ’ ಭಾಗವನ್ನು ಗಮಕಿ ಶ್ರೀ ಸುರೇಶ್ ರಾವ್ ಅತ್ತೂರು ವಾಚಿಸಿದರು. ವಿದ್ವಾಂಸರಾದ ಭಾಸ್ಕರ ರೈ ಕುಕ್ಕುವಳ್ಳಿಯವರು ಅತ್ಯಂತ ಮನೋಜ್ಞವಾಗಿ ವ್ಯಾಖ್ಯಾನಿಸಿದರು.
    ಭರತಾಂಜಲಿಯ ನಿರ್ದೇಶಕ ವಿದ್ವಾನ್ ಶ್ರೀಧರ್ ಹೊಳ್ಳ ಸ್ವಾಗತಿಸಿ ಪ್ರಸ್ತಾವನೆಗೈದು, ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಂಗಳೂರಿನಲ್ಲಿ ದತ್ತಿ ಪ್ರಶಸ್ತಿಗಳ ಪ್ರದಾನ
    Next Article ಚಿರನಿದ್ರೆಗೆ ಜಾರಿದ ಕ್ರಾಂತಿಕಾರಿ ಕವಿ ಗದ್ದರ್
    roovari

    Add Comment Cancel Reply


    Related Posts

    ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ -6 | ಸೆಪ್ಟೆಂಬರ್ 20

    September 18, 2025

    ಕಥೆ | 3 ಜಿ 3 ಬಿ

    September 18, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ವಿವಿಧ ದತ್ತಿ ಪುರಸ್ಕಾರಗಳ ಪ್ರದಾನ

    September 18, 2025

    ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಸೆಪ್ಟೆಂಬರ್ 21

    September 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.