Subscribe to Updates

    Get the latest creative news from FooBar about art, design and business.

    What's Hot

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಕವನ ಪಿ. ಕುಮಾರ್ ಇವರ ನೃತ್ಯ ಪ್ರದರ್ಶನ | ಫೆಬ್ರವರಿ 19
    Bharathanatya

     ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಕವನ ಪಿ. ಕುಮಾರ್ ಇವರ ನೃತ್ಯ ಪ್ರದರ್ಶನ | ಫೆಬ್ರವರಿ 19

    February 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶ್ರೀ ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯ ನಿಕೇತನ ಕೊಡವೂರು ಇದರ ಜಂಟಿ ಆಶ್ರಯದಲ್ಲಿ ಆರಂಭಗೊಂಡ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 19-02-2024ರ ಸೋಮವಾರ ಸಂಜೆ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಶಿವಮೊಗ್ಗದ ವಿದುಷಿ ಕವನ ಪಿ. ಕುಮಾರ್ ಪ್ರದರ್ಶನ ನೀಡಲಿದ್ದು, ಈ ಕಾರ್ಯಕ್ರಮವು ಸಂಜೆ ಗಂಟೆ 6.25 ರಿಂದ ನಡೆಯಲಿದೆ.

    ಕವನ ಪಿ. ಶಿವಮೊಗ್ಗ :
    ಪ್ರೇಮ್ ಕುಮಾರ್ ಮತ್ತು ಶ್ರೀಮತಿ ಗೀತಾ ದಂಪತಿಗಳ ಸುಪುತ್ರಿಯಾಗಿರುವ ವಿದುಷಿ ಕುಮಾರಿ ಕವನ ಪಿ. ಕುಮಾರ್ ತನ್ನ ಆರನೇ ವಯಸ್ಸಿನಿಂದ ಭರತನಾಟ್ಯದ ಅಭ್ಯಾಸವನ್ನು ಶಿವಮೊಗ್ಗದ ಖ್ಯಾತ ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶ್ರೀಮತಿ ಪುಷ್ಪ ಕೃಷ್ಣಮೂರ್ತಿ ಇವರ ಮಾರ್ಗದರ್ಶನದಲ್ಲಿ ನಡೆಸಿದ್ದು, ತನ್ನ ವಿದ್ವತ್ತನ್ನೂ ಪೂರ್ಣಗೊಳಿಸಿದ್ದಾರೆ. ಗುರುಗಳ ತಂಡದೊಂದಿಗೆ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವ ಇವರು ಅನೇಕ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ತನ್ನದಾಗಿಸಿಕೊಂಡಿದ್ದಾರೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2019-20ನೇ ಸಾಲಿನ ಶಿಷ್ಯವೇತನ ಪಡೆದಿರುವ ಇವರು ‘ವಿಶ್ವಚೇತನ’ , ‘ವಿಶ್ವ ಕಲಾರತ್ನ’ , ‘ಶ್ರೀ ಕೃಷ್ಣoಮೂರ್ತ ನೇಷನಲ್ ಅವಾರ್ಡ್’ , ‘ಕಲ್ಪತರು ಕಲಾ ಸನ್ಮಾನ’, ‘ನೃತ್ಯಸಿರಿ’ ಹೀಗೆ ಇನ್ನೂ ಹಲವಾರು ಬಿರುದುಗಳನ್ನು ತನ್ನದಾಗಿಸಿಕೊಂಡಿದ್ದಾರೆ.
    ದೂರದರ್ಶನದ ಬೆಂಗಳೂರಿನ ‘ಬಿ’ ಶ್ರೇಣಿಯ ಕಲಾವಿದೆಯಾಗಿರುವ ಇವರು ತಮ್ಮ ರಂಗಪ್ರವೇಶವನ್ನು 06-11-2022ರಂದು ಮಾಡಿರುತ್ತಾರೆ , ‘ಸಂಸ್ಕೃತಿ ಸೊಬಗು’, ‘ಚಿಗುರು ಚಿತ್ತಾರ’, ‘ಭರತ ಮುನಿ ಆರಾಧನಾ ಮಹೋತ್ಸವ’, ‘ಇಂಟರ್ನ್ಯಾಷನಲ್ ಕಲ್ಚರಲ್ ಫೆಸ್ಟಿವಲ್ ಮಲೇಷ್ಯಾ’, ‘ಪರಿಣಿತಿ ಡಾನ್ಸ್ ಫೆಸ್ಟಿವಲ್’, ‘ವರ್ಣೋತ್ಸವ’, ‘ನಿರಂತರ ಕಲೆ ಮನೆ ಉತ್ಸವ ಮೈಸೂರ್’ ಅಲ್ಲದೆ ಸುಮಾರು 200ಕ್ಕೂ ಹೆಚ್ಚಿನ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾಳೆ. ಇದಲ್ಲದೆ ರಂಗೋಲಿ, ಚಿತ್ರಕಲೆ, ಗೊಂಬೆ ಜೋಡಿಸುವುದು, ನಿರೂಪಣೆ ಹಾಗೂ ಸಮಾಜ ಸೇವೆ ಮಾಡುವುದು ಇವರ ಹವ್ಯಾಸಗಳು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ – ರಂಗಕ್ಕೆ ʻಶಿವಾಜಿʼ
    Next Article ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ‘ರಂಗತರಬೇತಿ ಕಾರ್ಯಾಗಾರ ಮತ್ತು ನಾಟಕ ನಿರ್ಮಾಣ ಪ್ರಕ್ರಿಯೆ’
    roovari

    Add Comment Cancel Reply


    Related Posts

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.