Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಂದಾಪುರದ ಕುಮಾರಿ ಗಾರ್ಗಿದೇವಿ ಇವರ ನೃತ್ಯ ಪ್ರದರ್ಶನ | ಜನವರಿ 13
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಂದಾಪುರದ ಕುಮಾರಿ ಗಾರ್ಗಿದೇವಿ ಇವರ ನೃತ್ಯ ಪ್ರದರ್ಶನ | ಜನವರಿ 13

    January 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ ಕಾರ್ಯಕ್ರಮವು ದಿನಾಂಕ 13 ಜನವರಿ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಂದಾಪುರದ ಕುಮಾರಿ ಗಾರ್ಗಿದೇವಿ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ಕುಮಾರಿ ಗಾರ್ಗಿದೇವಿ ಶ್ರೀಮತಿ ಪ್ರವಿತಾ ಅಶೋಕ್ ಹಾಗೂ ಶ್ರೀ ಅಶೋಕ್ ಕುಮಾರ್ ಇವರ ಸುಪುತ್ರಿ. ತನ್ನ ಆರನೇ ವಯಸ್ಸಿಗೆ ತಾಯಿ ಹಾಗೂ ಗುರು ವಿದುಷಿ ಪ್ರವಿತಾ ಅಶೋಕ್ ಇವರ ಬಳಿ ತನ್ನ ನೃತ್ಯಭ್ಯಾಸವನ್ನು ಪ್ರಾರಂಭಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಭರತನಾಟ್ಯ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪ್ರಸ್ತುತ ಸೀನಿಯರ್ ಪರೀಕ್ಷೆಯ ತಯಾರಿಯಲ್ಲಿರುತ್ತಾಳೆ. ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಮುಗಿಸಿದ್ದು, ಪ್ರಸ್ತುತ ಶ್ರೀಮತಿ ಉಷಾ ರಾಮಕೃಷ್ಣ ಇವರ ಬಳಿ ಸೀನಿಯರ್ ಅಭ್ಯಾಸ ಮಾಡುತ್ತಿದ್ದಾಳೆ.

    ಕುಮಾರಿ ಗಾರ್ಗಿ ದೇವಿ ಇವರು ಹಲವಾರು ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಎನ್.ಸಿ.ಆರ್.ಟಿ. ದೆಹಲಿಯಲ್ಲಿ ಆಯೋಜಿಸಿದ್ದ ಕಲೋತ್ಸವದಲ್ಲಿ ಬಹುಮಾನ ಗಳಿಸುವುದರ ಮುಖೇನ 2024ರ ಗಣರಾಜ್ಯೋತ್ಸವ ಪರೇಡ್ ಹಾಗೂ ಪರೀಕ್ಷಾ ಪಿ ಚರ್ಚೆ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಮಾನ್ಯ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿರುತ್ತಾರೆ. ಇದಲ್ಲದೆ ಸಿ.ಸಿ.ಆರ್.ಟಿ. ಇವರು ಕೊಡ ಮಾಡುವ ಶಿಷ್ಯವೇತನವನ್ನು ಪಡೆದಿರುದ್ದು, ಹಲವಾರು ಹಿರಿಯ ನೃತ್ಯ ಗುರುಗಳ ನೃತ್ಯ ಕಾರ್ಯಾಗಾರದಲ್ಲಿ ಭಾಗವಹಿಸಿರುತ್ತಾಳೆ. ಸಹೋದರಿ ಪೂರ್ವಿಕಳೊಂದಿಗೆ ಹಲವಾರು ವೇದಿಕೆಯಲ್ಲಿ ಇವುಗಳ ನೃತ್ಯ ಪ್ರದರ್ಶನವನ್ನು ನೀಡಿದ್ದು, ಆಳ್ವಾಸ್ ನುಡಿಸಿರಿ, ಭರತಂಜಲಿ ಮಂಗಳೂರು ಇವರು ನಡೆಸಿದ ನೃತ್ಯ ದೀಪದಲ್ಲಿ, ಮೂಕಾಂಬಿಕಾ ಕಲ್ಚರ್ ಅಕಾಡೆಮಿ ಪುತ್ತೂರು, ಸರಿಗಮ ಭಾರತಿ ಪರ್ಕಳ, ಲಾಸ್ಯ ನೃತ್ಯ ಅಕಾಡೆಮಿ ಬೆಂಗಳೂರು ಸೇವಾ ಸದನದ ಬೆಂಗಳೂರು ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿರುತ್ತಾರೆ. ಶಿವಪ್ರಾಣಂ ಕಿನ್ನಿಗೋಳಿ ಇವರು ಆಯೋಜಿಸಿದ್ದ ಶಿವಾಂಜಲಿ ಕಾರ್ಯಕ್ರಮದಲ್ಲಿ ಹಾಗೂ ನೃತ್ಯ ವಸಂತ ನಾಟ್ಯಾಲಯದ ಮುಖೇನ ದೇಶದಾದ್ಯಂತ ಕಾರ್ಯಕ್ರಮವನ್ನು ನೀಡಿರುತ್ತಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯ, ಗಡಿನಾಡು ಕನ್ನಡದ ಮಕ್ಕಳಿಗೆ ಆಹ್ವಾನ | ಜನವರಿ 16
    Next Article ಭಾರತ್ ಫೌಂಡೇಶನ್ ವತಿಯಿಂದ ‘ಮಂಗಳೂರು ಸಾಹಿತ್ಯೋತ್ಸವ’ | ಜನವರಿ 11 ಮತ್ತು 12
    roovari

    Add Comment Cancel Reply


    Related Posts

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.