ಮಂಗಳೂರು : ಭಾರತಾಂಜಲಿ ಮಂಗಳೂರು ಇವರು ಪ್ರಸ್ತುತ ಪಡಿಸುವ ಗುರು ಪ್ರತಿಮಾ ಶ್ರೀಧರ್, ಗುರು ಶ್ರೀಧರ್ ಹೊಳ್ಳ ಮತ್ತು ವಿದುಷಿ ಪ್ರಕ್ಷಿಲಾ ಜೈನ್ ಬಿ. ಇವರ ಶಿಷ್ಯೆ ಕುಮಾರಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ವು ದಿನಾಂಕ 14 ಜೂನ್ 2025ರಂದು ಸಂಜೆ ಗಂಟೆ 5-15ಕ್ಕೆ ಡಾನ್ ಬೋಸ್ಕೋ ಹಾಲ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾಶ್ರೀ ಗುರು ಉಳ್ಳಾಲ ಮೋಹನ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಕೃಷ್ಣ ಹೆಗ್ಡೆ ಮಿಯಾರ್, ವಿದುಷಿ ನಯನ ವಿ. ರೈ ಮತ್ತು ಶ್ರೀಮತಿ ಉಷಾ ವರದರಾಜನ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಭರತನಾಟ್ಯ ಕಾರ್ಯಕ್ರಮಕ್ಕೆ ನಟುವಾಂಗಂನಲ್ಲಿ ಗುರು ಪ್ರತಿಮಾ ಶ್ರೀಧರ್, ಹಾಡುಗಾರಿಕೆಯಲ್ಲಿ ವಿದ್ವಾನ್ ಸ್ವರಾಗ್ ಮಾಹೆ, ಮೃದಂಗದಲ್ಲಿ ಕಣ್ಣೂರಿನ ವಿದ್ವಾನ್ ಸುರೇಶ್ ಬಾಬು, ವಯೋಲಿನ್ ನಲ್ಲಿ ಉಡುಪಿಯ ವಿದ್ವಾನ್ ಶ್ರೀಧರ್ ಆಚಾರ್ ಪಡಿಗಾರ ಮತ್ತು ಮೊರಸಿಂಗ್ ನಲ್ಲಿ ವಿಟ್ಲದ ವಿದ್ವಾನ್ ಬಾಲಕೃಷ್ಣ ಹೊಸಮಣೆ ಇವರುಗಳು ಸಹಕರಿಸಲಿದ್ದಾರೆ.