Subscribe to Updates

    Get the latest creative news from FooBar about art, design and business.

    What's Hot

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾದ ನೃತ್ಯ ಸ್ಕೂಲ್ ಆಫ್ ಆರ್ಟ್ಸ್ ಎಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ‘ನೃತ್ಯಾಂಜಲಿ’ ನೃತ್ಯ ಕಲಿಕಾ ಕಾರ್ಯಾಗಾರ
    Bharathanatya

    ನಾದ ನೃತ್ಯ ಸ್ಕೂಲ್ ಆಫ್ ಆರ್ಟ್ಸ್ ಎಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ‘ನೃತ್ಯಾಂಜಲಿ’ ನೃತ್ಯ ಕಲಿಕಾ ಕಾರ್ಯಾಗಾರ

    May 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ‘ನಾದ ನೃತ್ಯ’ ಸ್ಕೂಲ್ ಆಫ್ ಆರ್ಟ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಮಂಗಳೂರು ಆಯೋಜಿಸಿದ ‘ನೃತ್ಯಾಂಜಲಿ’ ನೃತ್ಯ ಬಂಧಗಳ ಕಲಿಕಾ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ದಿನಾಂಕ 14-05-2024ರಂದು ಮಂಗಳೂರಿನ ಹಿಂದಿ ಪ್ರಚಾರ ಸಮಿತಿಯಲ್ಲಿ ನಡೆಯಿತು.

    ಕಾರ್ಯಗಾರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಗುರು ವಿದ್ವಾನ್ ಶ್ರೀ ಉಳ್ಳಾಲ ಮೋಹನ್ ಕುಮಾರ್ ಮಾತನಾಡಿ “ಭರತನಾಟ್ಯ ಎಲ್ಲಾ ಶಾಸ್ತ್ರೀಯ ನೃತ್ಯಗಳಿಗೆ ತಾಯಿ ಸಮಾನವಾದ ನೃತ್ಯ ಪ್ರಕಾರ. ಗುರುಗಳ ಸೂಕ್ತ ಮಾರ್ಗದರ್ಶನದಿಂದ ಈ ಕಲೆಯಲ್ಲಿ ದೈವತ್ವವನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ಒಂದೆರಡು ಹಾಡುಗಳಿಗೆ ನೃತ್ಯ ಕಲಿತು ಪ್ರದರ್ಶನ ನೀಡುವ ಪದ್ದತಿ ಆರಂಭವಾಗಿದ್ದು, ಅದರ ಬದಲಿಗೆ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಕಲಾವಿದೆಯಾಗಿ ರೂಪುಗೊಳ್ಳಿ.” ಎಂದು ಕಿವಿಮಾತು ಹೇಳಿದರು.

    ಕಾರ್ಯಾಗಾರದ ಅವಲೋಕನಕಾರರಾಗಿ ಭಾಗವಹಿಸಿದ ವಿದ್ವಾನ್ ಚಂದ್ರಶೇಖರ್ ನಾವಡ ಮಾತನಾಡಿ “ಇಂದು ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶ ವಿಫುಲವಾಗಿದೆ. ತಮ್ಮ ಗುರುಗಳಾದ ಭ್ರಮರಿ ಶಿವಪ್ರಕಾಶ್ ಅವರ ಗುರುಗಳಾದ ವಿದುಷಿ ವಸುಂದರಾ ದೊರೆಸ್ವಾಮಿ ಅವರಿಂದ ಭರತನಾಟ್ಯದ ಚೌಕಟ್ಟಿನ ಒಳಗೆ ಇರುವ ಸೂಕ್ಷ್ಮ ವಿಷಯಗಳನ್ನು ತಿಳಿಸಿಕೊಡುವ ಈ ಕಾರ್ಯಾಗಾರ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.” ಎಂದರು.

    ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿದುಷಿ ವಸುಂಧರಾ ದೊರೆಸ್ವಾಮಿ ನೃತ್ಯ ಮತ್ತು ಅಭಿನಯದ ಪ್ರಾತ್ಯಕ್ಷಿಕೆ ಜೊತೆಗೆ ತರಗತಿ ನಡೆಸಿಕೊಟ್ಟರು. ಈ ಕಾರ್ಯಗಾರವು ಮೇ 19ರ ವರೆಗೆ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕುಶಾಲನಗರ ತಾಲೂಕು ಕ.ಸಾ.ಪ ವತಿಯಿಂದ ‘ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ’ ಸಮಾರಂಭ | 21 ಮೇ
    Next Article ಮೇ ಸಾಹಿತ್ಯ ಮೇಳದ ಕರಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
    roovari

    Add Comment Cancel Reply


    Related Posts

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಶ್ರೀ ಎಡನೀರು ಮಠದಲ್ಲಿ ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನ | ಆಗಸ್ಟ್ 16

    August 14, 2025

    ಶ್ರೀ ಎಡನೀರು ಮಠದಲ್ಲಿ ‘ನೃತ್ಯ ದ್ವಯ’ ಮತ್ತು ‘ನೃತ್ಯ ಸಿರಿ’ ಭರತನಾಟ್ಯ ಪ್ರದರ್ಶನ | ಆಗಸ್ಟ್ 15

    August 13, 2025

    ಮೈಸೂರಿನ ರಾಮ ಗೋವಿಂದ ಸಭಾಂಗಣದಲ್ಲಿ ‘ಅರ್ಪಣಂ’ ನೃತ್ಯ ಕಾರ್ಯಕ್ರಮ | ಆಗಸ್ಟ್ 16 ಮತ್ತು 17

    August 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.