Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಭಾರತೀಯ ಜ್ಞಾನ ಪರಂಪರೆ’ ಕನ್ನಡ ಆವೃತ್ತಿ ಮುಂಬೈಯಲ್ಲಿ ಬಿಡುಗಡೆ
    Book Release

    ‘ಭಾರತೀಯ ಜ್ಞಾನ ಪರಂಪರೆ’ ಕನ್ನಡ ಆವೃತ್ತಿ ಮುಂಬೈಯಲ್ಲಿ ಬಿಡುಗಡೆ

    April 28, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬೈ : ಮುಂಬೈ ವಿಶ್ವವಿದ್ಯಾನಿಲಯದ ಮಹತ್ವಾಕಾಂಕ್ಷೆಯ ಪ್ರಕಟಣೆಯಾದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್‌ನ ಕನ್ನಡ ಅನುವಾದ ‘ಭಾರತೀಯ ಜ್ಞಾನ ಪರಂಪರೆ’ಯನ್ನು, ಮಾಟುಂಗ ಮುಂಬೈನ ಮೈಸೂರು ಅಸೋಸಿಯೇಷನ್‌ನ ಶತಮಾನೋತ್ಸವ ಸಮಾರಂಭದಲ್ಲಿ ದಿನಾಂಕ 19 ಎಪ್ರಿಲ್ 2026ರಂದು ಬಿಡುಗಡೆ ಮಾಡಲಾಯಿತು.

    ಈ ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ಅಸೋಸಿಯೇಷನ್ ಅಧ್ಯಕ್ಷರಾದ ಕೆ. ಕಮಲಾ ವಹಿಸಿದ್ದರು. ಈ ಪುಸ್ತಕವನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮುಂಬೈ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ರವೀಂದ್ರ ಕುಲಕರ್ಣಿಯವರು, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಜಿ.ಎನ್. ಉಪಾಧ್ಯ ಇವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು. ಈ ಮಹತ್ವದ ಯೋಜನೆಯನ್ನು ಮೈಸೂರು ಅಸೋಸಿಯೇಷನ್ ಮುಂಬೈ ಪ್ರಾಯೋಜಿಸಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ. ಕುಲಕರ್ಣಿ “ಮೂಲತಃ ಪ್ರಾಚೀನ ಜ್ಞಾನ ಪರಂಪರೆಯ ವಿಷಯವು ಸಂಸ್ಕೃತ, ಪಾಲಿ ಮತ್ತು ಪ್ರಾಕೃತ ಭಾಷೆಗಳಲ್ಲಿ ಲಭ್ಯವಿದ್ದು, ಅನಂತರ ಇಂಗ್ಲೀಷ್‌ಗೆ ಅನುವಾದಿಸಲಾಯಿತು. ಇದನ್ನು ಭಾರತೀಯ ಭಾಷೆಗಳ ಮೂಲಕ ಜನರನ್ನು ತಲುಪಬೇಕು ಎಂಬ ಉದ್ದೇಶದಿಂದ ಈಗ ಕನ್ನಡಕ್ಕೆ ತರಲಾಗಿದೆ. ಈ ಉಪಕ್ರಮದ ಮೂಲಕ ಎಲ್ಲ 22 ಸಾಂವಿಧಾನಿಕವಾಗಿ ಮಾನ್ಯತೆ ಪಡೆದ ಭಾಷೆಗಳಲ್ಲಿ ಪಾರಂಪರಿಕ ಜ್ಞಾನವನ್ನು ತರುವ ಗುರಿಯನ್ನು ಮುಂಬೈ ವಿ.ವಿ. ಹೊಂದಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಅಪೂರ್ವ ಸಾಧನೆಯನ್ನು, ಮುಂಬೈ ಕನ್ನಡ ಸಂಘ ಸಂಸ್ಥೆಗಳ ಕೊಡುಗೆಯನ್ನು ಅವರು ಕೊಂಡಾಡಿದರು. ಆಧುನಿಕತೆಯ ಜೊತೆಗೆ ಯುವ ಪೀಳಿಗೆಗಳು ತಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕದಲ್ಲಿರಬೇಕಾದ ಅಗತ್ಯವನ್ನು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

    ವಿಶೇಷ ಆಹ್ವಾನಿತರಾದ ಐಐಟಿ ಬಾಂಬೆಯ ಉಪನಿರ್ದೇಶಕ ಪ್ರೊ. ರವೀಂದ್ರ ಗುಡಿ, ಭಾರತೀಯ ಜ್ಞಾನ ವ್ಯವಸ್ಥೆಗಳನ್ನು ವಿಶಾಲ ಪ್ರೇಕ್ಷಕರಿಗೆ ಕೊಂಡೊಯ್ಯಲು ಮುಂಬೈ ವಿಶ್ವವಿದ್ಯಾಲಯದ ಪ್ರಯತ್ನಗಳನ್ನು ಶ್ಲಾಘಿಸಿದರು. ಸಥಾಯೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಪುಟದ ಮುಖ್ಯ ಸಂಪಾದಕರಾದ ಪ್ರೊ. ಎಂ.ಆರ್. ರಾಜವಾಡೆ, ಮೈಸೂರು ಅಸೋಸಿಯೇಷನ್ ಕಾರ್ಯದರ್ಶಿ ಪ್ರೊ. ಗಣಪತಿ ಶಂಕರ್ಲಿಂಗ ಅವರೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಇಂಗ್ಲೀಷ್ ಮತ್ತು ಮರಾಠಿ ಸಂಪುಟಗಳು ವಿವಿಧ ಪ್ರಾಧ್ಯಾಪಕರು ಬರೆದ ಭಾರತೀಯ ಜ್ಞಾನ ಪರಂಪರೆ ಕುರಿತಾದ ವಿದ್ವತ್ಪೂರ್ಣ ಲೇಖನಗಳ ಸಂಗ್ರಹವಾಗಿದೆ. ಕನ್ನಡ ಆವೃತ್ತಿಯನ್ನು ಪ್ರೊ. ಜಿ.ಎನ್. ಉಪಾಧ್ಯ ಇವರು ನಾಲ್ವರು ಸಂಶೋಧನ ಸಹವರ್ತಿಗಳೊಂದಿಗೆ ಅನುವಾದಿಸಿ ಸಂಪಾದಿಸಿದ್ದಾರೆ. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಶೆಟ್ಟಿ, ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ. ಉಮಾ ರಾಮರಾವ್, ಕಲಾ ಭಾಗ್ವತ್ ಮತ್ತು ಹಲವಾರು ಸಾಂಸ್ಕೃತಿಕ ಮತ್ತು ಸಮುದಾಯ ಮುಖಂಡರು, ಐತಿಹಾಸಕ್ತರು, ಕನ್ನಡ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಲಾ ಭಾಗ್ವತ್ ಮತ್ತು ನಳಿನಾ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನಾಟ್ಯನಿಕೇತನ ನೃತ್ಯ ಸಂಸ್ಥೆಯಿಂದ ‘ತಾಳ ಪ್ರಕ್ರಿಯೆ’ ಕಾರ್ಯಗಾರ | ಮೇ 02
    Next Article ಬೈಂದೂರು ಶ್ರೀ ಶಾರದಾ ವೇದಿಕೆಯಲ್ಲಿ ‘ಮಿನುಗೆಲೆ ಮಿನುಗೆಲೆ ನಕ್ಷತ್ರ’ ನಾಟಕ | ಮೇ 02
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.