Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಸ್ಕರ ಕೊಗ್ಗ ಕಾಮತ್ ಅವರಿಗೆ ಸುರಭಿ ‘ಬಿಂದುಶ್ರೀ‘ ಪ್ರಶಸ್ತಿ
    Awards

    ಭಾಸ್ಕರ ಕೊಗ್ಗ ಕಾಮತ್ ಅವರಿಗೆ ಸುರಭಿ ‘ಬಿಂದುಶ್ರೀ‘ ಪ್ರಶಸ್ತಿ

    April 10, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    10 ಏಪ್ರಿಲ್ 2023,ಉಡುಪಿ: ದಿನಾಂಕ 9-04-20230 ರಂದು ಬೈಂದೂರಿನ ಶ್ರೀ ಸೇನೇಶ್ವರ ದೇವಳದ ಆವರಣದಲ್ಲಿ ಬೈಂದೂರಿನ ಪ್ರಸಿದ್ಧ ಸಾಂಸ್ಕೃತಿಕ ಸಂಘಟನೆ `ಸುರಭಿ ‘ಯ 23ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಂಡ `ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ‘ ಮೂರು ದಿನಗಳ ಕಾರ್ಯಕ್ರಮದ ಕೊನೆಯ ದಿನದಂದು ಸಂಸ್ಥೆ ಕೊಡ ಮಾಡುವ 9ನೇ ವರ್ಷದ ಪ್ರತಿಷ್ಠಿತ `ಬಿಂದುಶ್ರೀ ‘ ಪ್ರಶಸ್ತಿಯನ್ನು ಖ್ಯಾತ ಯಕ್ಷಗಾನ ಗೊಂಬೆಯಾಟ ಕಲಾವಿದ ಭಾಸ್ಕರ ಕೊಗ್ಗ ಕಾಮತ್ ಅವರಿಗೆ ಪ್ರದಾನ ಮಾಡಲಾಯಿತು
    ಪ್ರಶಸ್ತಿ ಪ್ರಧಾನ ಮಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ ಪ್ರಪಂಚದಾದ್ಯಂತ ಯಕ್ಷಗಾನ ಗೊಂಬೆಯಾಟದ ಸೊಗಡನ್ನು ಪಸರಿಸಿದ ಕೊಗ್ಗ ಕಾಮತ್ ಅವರ ದಾರಿಯಲ್ಲಿಯೇ ಅವರ ಮಗ ಭಾಸ್ಕರ ಕೊಗ್ಗ ಕಾಮತ್ ಅವರು ಹೆಜ್ಜೆ ಹಾಕಿರುವುದು ಕಲೆಯ ಉಳಿವಿನ ದೃಷ್ಟಿಯಿಂದ ಶ್ಲಾಘನೀಯ. ಕಲೆ, ಕಲಾವಿದರಿಗೆ ಪ್ರೋತ್ಸಾಹ ಸಮಾಜದ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದರು.
    ಗೊಂಬೆಯಾಟ ಕಲೆ ಮಾತ್ರವಲ್ಲದೆ, ಅದರಲ್ಲಿ ತೊಡಗಿಸಿಕೊಂಡಿರುವ ಕಲಾವಿದರನ್ನು ಸಾಕುವುದು ದೊಡ್ಡ ಸವಾಲಿನ ಕೆಲಸ. ಸುಮಾರು 6 ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಈ ಕಲೆಯನ್ನು ಉಳಿಸಿ ಬೆಳೆಸುವುದು ಸಮಾಜದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಭಾಸ್ಕರ ಕೊಗ್ಗ ಕಾಮತ್ ಅವರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ಕಾರ್ಯ ನಡೆಸಿರುವ ಸುರಭಿ ಬೈಂದೂರು ಸಂಘಟನೆ ಕಾರ್ಯ ಪ್ರಶಂಸನೀಯ ಎಂದು ಅವರು ತಿಳಿಸಿದರು.
    ಬಹಳಷ್ಟು ಜಾನಪದ ಕಲೆಗಳು ಇಂದು ಅವಸಾನದ ಅಂಚಿನಲ್ಲಿವೆ ಎಂದರೆ ತಪ್ಪಲ್ಲ. ಕಾರಣ ಅವುಗಳಿಗೆ ಸಮಾಜದ, ಸರಕಾರದ ಪ್ರೋತ್ಸಾಹದ ಕೊರತೆಯಿದೆ.ಅವುಗಳನ್ನು ಹೊಸಪೀಳಿಗೆಗೆ ದಾಟಿಸುವ ಕಾರ್ಯ ನಡೆಯದಿರುವುದು ಕೂಡಾ ಕಾರಣವಾಗಿದೆ. ಕರಾವಳಿಯ ಗಂಡುಕಲೆ ಯಕ್ಷಗಾನ ಇದೇ ಹಾದಿಯಲ್ಲಿದ್ದರೂ, ಸಮಾಜದ ನಿರಂತರ ಪ್ರೋತ್ಸಾಹದಿಂದ ಹೊಸತನವನ್ನು ಪಡೆದುಕೊಂಡು ಚೇತರಿಸಿಕೊಂಡು ವಿಜೃಂಭಿಸುತ್ತಿದೆ. ಈ ಯಕ್ಷ ಪ್ರೀತಿಗೆ ಮನಸೋತು ನನ್ನ ೬೦ನೇ ವರ್ಷದಲ್ಲಿ ಯಕ್ಷಗಾನವನ್ನು ಅಭ್ಯಾಸಿಸಿ 400ಕ್ಕೂ ಅಧಿಕ ಬಾರಿ ಪಾತ್ರಗಳನ್ನು ಸೈ ಎನ್ನುವಂತೆ ನಿರ್ವಹಿಸಿದ ಸಂತೃಪ್ತಿ ನನ್ನದು. ಅಂದರೆ ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಅದನ್ನು ಅಬಾಲವೃದ್ಧರಾಗಿ ಅಭ್ಯಾಸಿಸುವ ವಾತಾವರಣ ಸೃಷ್ಟಿಯಾಗಬೇಕು ಎಂದು ಅವರು ಅಭಿಪ್ರಾಯ ಪಟ್ಟರು.
    ಬೈಂದೂರಿನ ಸಾಂಸ್ಕೃತಿಕ ಸಂಘಟನೆ ಸುರಭಿಯ ಸಾಧನೆ ಬೆರಗು ಹುಟ್ಟಿಸುವಂತಿದೆ. ನಾಟಕ, ಯಕ್ಷಗಾನ, ಭರತ ನಾಟ್ಯ, ಜಾದೂ, ಚೆಂಡೆವಾದನ ಹೀಗೆ ಬಹು ರಂಗಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾ ಸಾಂಸ್ಕೃತಿಕ ರಂಗಕ್ಕೆ ದೊಡ್ಡ ಕೊಡುಗೆಯನ್ನು ನೀಡಿದೆ ಎಂದು ಅವರು ತಿಳಿಸಿದರು.
    ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಭಾಸ್ಕರ ಕೊಗ್ಗ ಕಾಮತ್, ಜಾನಪದ ಕಲೆಗಳು ಉಳಿದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಈ ಕಲಾ ಪ್ರಾಕಾರಗಳು ಉಳಿಯಲು ಸರ್ವಜನರ ಸಹಕಾರದ ಅಗತ್ಯವಿದೆಯೇ ಹೊರತು ಕೇವಲ ಅನುದಾನವಲ್ಲ. ಕಲೆ ಶಿಕ್ಷಣದ ಅಂಗವಾದರೆ ಮಾತ್ರ ಅದು ಉಳಿಯುತ್ತದೆ ಎಂದರು.
    ಹಿರಿಯ ಪತ್ರಕರ್ತ ಎಸ್.ಜನಾರ್ದನ ಮರವಂತೆ ಅಭಿನಂದನಾ ನುಡಿಗಳನ್ನಾಡಿ ಸುರಭಿ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತನ್ನಾಡಿದರು.
    ಅಧ್ಯಕ್ಷತೆಯನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ವಸಂತ ಹೆಗ್ಡೆ ವಹಿಸಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಯಾನಂದ ಹೋಬ್ಲಿದಾರ್, ಉದ್ಯಮಿ ಎ.ಸತೀಶ್, ನಿವೃತ್ತ ಶಿಕ್ಷಕಿ ಶಾರದಾ ಕೆ. ನಾರಾಯಣ, ಜೇಸಿ ಜಾನ್ವಿ ಪ್ರಸಾದ್ ಪ್ರಭು, ಗುರು ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಗುರು ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಅವರಿಗೆ ಗುರು ವಂದನಾ ಕಾರ್ಯಕ್ರಮ ನಡೆಯಿತು.ಆನಂದ ಮದ್ದೋಡಿ ಕಾರ್ಯಕ್ರಮ ನಿರೂಪಿಸಿ, ಸುರಭಿ ಅಧ್ಯಕ್ಷ ನಾಗರಾಜ ಪಿ.ಯಡ್ತರೆ ಸ್ವಾಗತಿಸಿದರು. ಗಿರೀಶ್ ಮೇಸ್ತ ವಂದಿಸಿದರು.ಈ ಸಂದರ್ಭದಲ್ಲಿ ಸುರಭಿ ಭರತನಾಟ್ಯ ವಿದ್ಯಾರ್ಥಿಗಳಿಂದ ನೃತ್ಯಾಂಜಲಿ ನಾಟ್ಯ ವೈವಿಧ್ಯ ಹಾಗೂ ನೃತ್ಯ ರೂಪಕ `ಪಾಶುಪತಾಸ್ತ್ರ’, ಸುರಭಿಯ ರಂಗ ಕಲಾವಿದರಿಂದ ರಂಗ ಗೀತೆಗಳ ಪ್ರಸ್ತುತಿ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ನೂರಾರು ಲೇಖಕರ ನೂರಾರು ಕತೆಗಳು’ ಕಥಾ ಸಂಕಲನ ಬಿಡುಗಡೆ
    Next Article ಮಂಗಳೂರಿನ ‘ಯಕ್ಷಯಾನ’ದಲ್ಲಿ ಅಗರಿ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11

    January 5, 2026

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.