Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಸೈಯ್ಯದ ನಜೀರೊದ್ದಿನ ಮುತವಲ್ಲಿ ನಾಮ ನಿರ್ದೇಶನ

    August 11, 2025

    ಕಾಸರಗೋಡಿನಲ್ಲಿ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ

    August 11, 2025

    ಕೊಡವೂರು ಶ್ರೀ ದೇವಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    August 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದಲ್ಲಿ ಡಾ. ದ.ರಾ. ಬೇಂದ್ರೆ ಅವರ 128ನೆಯ ಜನ್ಮ ದಿನಾಚರಣೆ ಹಾಗೂ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
    Awards

    ಧಾರವಾಡದಲ್ಲಿ ಡಾ. ದ.ರಾ. ಬೇಂದ್ರೆ ಅವರ 128ನೆಯ ಜನ್ಮ ದಿನಾಚರಣೆ ಹಾಗೂ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    January 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ (ರಿ.) ಧಾರವಾಡ ಇದರ ವತಿಯಿಂದ ಡಾ. ದ.ರಾ. ಬೇಂದ್ರೆ ಅವರ 128ನೆಯ ಜನ್ಮ ದಿನಾಚರಣೆ ಹಾಗೂ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ 2024’ ಪ್ರದಾನ ಸಮಾರಂಭವು ದಿನಾಂಕ 31-01-2024ರಂದು ಸಂಜೆ ಗಂಟೆ 5ಕ್ಕೆ ಧಾರವಾಡದ ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಭವನದಲ್ಲಿ ನಡೆಯಲಿದೆ.

    ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಇವರು ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ಅಧ್ಯಕ್ಷರಾದ ಡಾ. ಡಿ.ಎಮ್. ಹಿರೇಮಠ ಇವರು ಅಧ್ಯಕ್ಷತೆ ವಹಿಸಲಿದ್ದು, ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಅಧ್ಯಯನಾಂಗ ನಿರ್ದೇಶಕರಾದ ಪ್ರೊ. ಬಸವರಾಜ ಡೋಣೂರ ಅಭಿನಂದನಾ ನುಡಿಯನ್ನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಧಾರವಾಡದ ಶ್ರೀಮತಿ ಅರ್ಪಿತಾ ಜಹಗೀರದಾರ ಮತ್ತು ವೃಂದದವರಿಂದ ಡಾ. ದ.ರಾ. ಬೇಂದ್ರೆ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

    ವರಕವಿ ಡಾ. ದ.ರಾ. ಬೇಂದ್ರೆಯವರ 128ನೇ ಜನ್ಮದಿನದ ನಿಮಿತ್ತ ಕೊಡಮಾಡುವ 2024ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ವಿಮರ್ಶಕ ಡಾ. ಬಸವರಾಜ ಕಲ್ಗುಡಿ ಆಯ್ಕೆಯಾಗಿದ್ದು, ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಮಂಡಳಿಯ ಸಭೆಯಲ್ಲಿ ಈ ಕುರಿತು ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಡಾ. ದ.ರಾ.ಬೇಂದ್ರೆ ಸಾಹಿತ್ಯಾಭ್ಯಾಸಿಗರಾದ ಹಿರಿಯ ವಿಮರ್ಶಕ ಹಾಗೂ ಸಂಶೋಧಕ ಪ್ರೊ. ಬಸವರಾಜ ಕಲ್ಲುಡಿಯವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸಮಗ್ರ ಕೊಡುಗೆಯನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಯಿತು. ಪ್ರಶಸ್ತಿಯು ಒಂದು ಲಕ್ಷ ಮೊತ್ತದ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಬಡಗುಪೇಟೆಯಲ್ಲಿ ‘ಜನಪದ’ ದೇಶೀಯ ಕಲೆಯ ಸರಣಿ ಕಾರ್ಯಾಗಾರ | ಜನವರಿ 27, 28 ಮತ್ತು 29ರಂದು
    Next Article ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ’ದಲ್ಲಿ ಕಾಸರಗೋಡು ಚಿನ್ನಾರಿಗೆ ‘ಶಾರದಾ ಕೃಷ್ಣ ಪುರಸ್ಕಾರ’
    roovari

    Add Comment Cancel Reply


    Related Posts

    ಸಾಲಿಗ್ರಾಮದಲ್ಲಿ ಡಾ. ರಾಜ್ ಸವಿನೆನಪಿನ ‘ಸ್ವರಕಂಠೀರವ’ | ಆಗಸ್ಟ್ 15

    August 11, 2025

    ಡಾ. ಸುರೇಶ ನೆಗಳಗುಳಿ ಇವರಿಗೆ ಅಂತಾರಾಷ್ಟ್ರೀಯ ಮಟ್ಟದ ‘ಕವಿ ಕುಲಪತಿ ಪ್ರಶಸ್ತಿ’

    August 11, 2025

    ಕಾರ್ಕಳದಲ್ಲಿ ‘ಕ್ರಿಯೇಟಿವ್ ಪುಸ್ತಕ ಧಾರೆ 2025’ | ಆಗಸ್ಟ್ 13

    August 11, 2025

    ನೃತ್ಯ ವಿಮರ್ಶೆ | ಪುಷ್ಕರ ನೃತ್ಯ ನಿಕೇತನದ ವಿದ್ಯಾರ್ಥಿನಿ ಸಾನ್ವಿ ನವೀನ್ ಇವರ ಭರತನಾಟ್ಯ ರಂಗಪ್ರವೇಶ

    August 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.