ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆಟ್ಸ್ ಮತ್ತು ಸ್ಪೋಟ್ಸ್ ಕ್ಲಬ್ ಕಯ್ಯಾರು, 16ನೇ ವಾರ್ಡ್ ಕಯ್ಯಾರು ಕುಟುಂಬಶ್ರೀ ಘಟಕಗಳು ಇವರ ಸಹಯೋಗದಲ್ಲಿ ನಾಡೋಜ ಕವಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಿನಾಂಕ 18 ಜೂನ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಕಯ್ಯಾರು ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸುವರು. ಕಲ್ಕೂರ ಫೌಂಡೇಶನ್ ಮಂಗಳೂರು ಅಧ್ಯಕ್ಷ, ಗಸಾಸಾ ಅಕಾಡೆಮಿ ಕಾಸರಗೋಡು ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಬಹುಭಾಷಾ ಕವಿ, ಸಾಹಿತಿ ಮೊಹಮ್ಮದ್ ಬಡ್ಡೂರು ಸಂಸ್ಮರಣಾ ಭಾಷಣ ಮಾಡುವರು.
ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಅಧ್ಯಕ್ಷ ಉಮರ್ ಯು.ಎಚ್., ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಂಗಳೂರು ಅಧ್ಯಕ್ಷ ಸ್ಟ್ಯಾನಿ ಆಳ್ವಾರೀಸ್, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಡಾ. ಎಂ.ಎಸ್. ಮಧಭಾವಿ, ಅಶೋಕ್ ಚಂದರಗಿ, ಭಗತ್ ರಾಜ್ ನಿಜಾಮ್ ಕರ್. ಎ.ಆರ್. ಸುಬ್ಬಯ್ಯಕಟ್ಟೆ, ಡಾ. ಸಂಜೀವ ಕುಮಾರ್ ಅತಿವಾಲೆ, ಶಿವರಡ್ಡಿ ಖ್ಯಾಡೇದ್, ಪೈವಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾಲಕ್ಷ್ಮೀ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಫಾತಿಮತ್ ಝೌರ, ಕವಿತಾ ಕುಟೀರ ಪೆರಡಾಲ ಕಾರ್ಯದರ್ಶಿ ಡಾ. ಪ್ರಸನ್ನ ರೈ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟಿತ್ತೋಡಿ, ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಉಪಾಧ್ಯಕ್ಷ ವಿಕಾಸ್ ಶೆಟ್ಟಿ ಟಿ.ಡಿ., ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಧರ ಹೊಳ್ಳ ಅತಿಥಿಗಳಾಗಿ ಭಾಗವಹಿಸುವರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ. ನಾಗೇಶ್ ಕೆ.ಎನ್. ಇವರಿಂದ ನಾಡಗೀತೆ ಮತ್ತು ಕನ್ನಡ ಗೀತೆಗಳ ಗಾಯನ, ಗಂಗಾ ಯಶಸ್ವಿನಿ ತಂಡದ ಸಮೂಹ ಶಾಸ್ತ್ರೀಯ ಭರತನಾಟ್ಯ, ರೇಖಾಶ್ರೀ ಮತ್ತು ತಂಡದ ಸಮೂಹ ಶಾಸ್ತ್ರೀಯ ಕಥಕ್ ನೃತ್ಯ, ಮಾರುತಿ ಮತ್ತು ತಂಡದ ಚೆಂಡೆ ವಾದನ, ಚೇತನ್ ಮತ್ತು ತಂಡದ ಸಮೂಹ ಜಾನಪದ ನೃತ್ಯ, ಪೃಥ್ವಿ ಮತ್ತು ತಂಡದ ಸಮೂಹ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.