Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ.ದಿಂದ ಎಂ.ಆರ್. ಶ್ರೀನಿವಾಸಮೂರ್ತಿಯವರ 132ನೆಯ ಜಯಂತಿ
    Literature

    ಕ.ಸಾ.ಪ.ದಿಂದ ಎಂ.ಆರ್. ಶ್ರೀನಿವಾಸಮೂರ್ತಿಯವರ 132ನೆಯ ಜಯಂತಿ

    August 3, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 02 ಆಗಸ್ಟ್ 2024ರಂದು ಆಯೋಜಿತವಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಂ.ಆರ್. ಶ್ರೀನಿವಾಸಮೂರ್ತಿಯವರ 132ನೆಯ ಜಯಂತಿಯ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಾಡೋಜ ಡಾ. ಮಹೇಶ ಜೋಶಿಯವರು “ಆಧುನಿಕ ಯುಗದಲ್ಲಿ ಕನ್ನಡಕ್ಕಾಗಿ ದುಡಿದ ಹಾಗೂ ಕನ್ನಡವನ್ನು ಬೆಳೆಸಿದ ಮಹನೀಯರಲ್ಲಿ ಮೂವರು ಶ್ರೀಗಳು ಪ್ರಮುಖರು. ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ (ಬಿ.ಎಂ.ಶ್ರೀ), ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ (ತೀ.ನಂ.ಶ್ರೀ) ಮತ್ತು ಎಂ.ಆರ್. ಶ್ರೀನಿವಾಸಮೂರ್ತಿ (ಎಂ.ಆರ್.ಶ್ರೀ) ಇವರಲ್ಲಿ ಎಂ.ಆರ್. ಶ್ರೀನಿವಾಸಮೂರ್ತಿಯವರು ಕನ್ನಡ ಸಾಹಿತ್ಯವನ್ನು ಅಮೂಲಾಗ್ರವಾಗಿ ಓದಿ ಗ್ರಹಿಸಿದ್ದರು. ಅವರು ವಿಜ್ಞಾನದ ವಿದ್ಯಾರ್ಥಿಯಾದರೂ ಕನ್ನಡದ ಆಕರ್ಷಣೆಗೆ ಒಳಗಾಗಿ ಶ್ರಮಪಟ್ಟು ಕನ್ನಡ ಸಾಹಿತ್ಯದಲ್ಲಿ ಪ್ರಭುತ್ವವನ್ನು ಪಡೆದಿದ್ದರು. ವೀರಶೈವ ಸಾಹಿತ್ಯ, ಅದರಲ್ಲೂ ವಚನ ಸಾಹಿತ್ಯಕ್ಕೆ ಎಂ.ಆರ್.ಶ್ರೀ.ಯವರದು ಬೆಲೆಯುಳ್ಳ ಕಾಣಿಕೆ. ‘ವಚನ ಧರ್ಮಸಾರ’ ಅವರ ಆಳವಾದ ವ್ಯಾಸಂಗಕ್ಕೆ, ವಿದ್ವತ್ತಿಗೆ, ಹೊಸದಾದ ಆಲೋಚನೆಗಳಿಗೆ ಸಂಕೇತವಾಗಿದೆ. ಮೈಸೂರು ವಿಶ್ವವಿದ್ಯಾಲಯದ ಕನ್ನಡ-ಇಂಗ್ಲೀಷ್ ನಿಘಂಟಿಗೆ ಹೊಸ ರೂಪ ನೀಡಿದ ಎಂ.ಆರ್.ಶ್ರೀ ಶಿಕ್ಷಣ ಇಲಾಖೆಯಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿಗಳಾಗಿ ಮಹತ್ವದ ಸೇವೆಯನ್ನು ಸಲ್ಲಿಸಿದರು. ಎಂ.ಆರ್.ಶ್ರೀ.ಯವರು ಶ್ರೇಷ್ಠ ವಾಗ್ಮಿಗಳು. ಕನ್ನಡ ಸಾಹಿತ್ಯದ ಬಗೆಗೆ ಅದರಲ್ಲೂ ವೀರಶೈವ ಸಾಹಿತ್ಯದ ಬಗೆಗೆ ಅಧಿಕಾರವಾಣಿಯಿಂದ ಮಾತನಾಡಬಲ್ಲ ವಿದ್ವಾಂಸರಾಗಿದ್ದರು. ಪರಿಷತ್ತಿನ ಎಲ್ಲಾ ಸಾಹಿತ್ಯಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಗುಪ್ತಗಾಮಿಯಾಗಿ ಎಂ.ಆರ್.ಶ್ರೀ. ಅವರ ಪರಿಶ್ರಮ ಹರಿದಿದೆ. ಕನ್ನಡಕ್ಕೆ ಧಕ್ಕೆ ಬಂದಾಗಲೆಲ್ಲಾ, ಅದರ ಸ್ಥಾನಮಾನಕ್ಕೆ ಚ್ಯುತಿ ಬಂದಾಗಲೆಲ್ಲಾ, ಎಂ.ಆರ್.ಶ್ರೀ. ಹೋರಾಟ ನಡೆಸಿದವರು. ಎಂ.ಆರ್.ಶ್ರೀ. ಅಧ್ಯಕ್ಷರಾಗಿದ್ದಾಗಿನ ಅವಧಿಯಲ್ಲಿ ಸೊಲ್ಲಾಪುರ, ಮುಂಬಯಿ ಮತ್ತು ಬೇಲೂರುಗಳಲ್ಲಿ ಮೂರು ಸಾಹಿತ್ಯ ಸಮ್ಮೇಳನಗಳಾದವು. ಅವರ ಕಾರ್ಯದಲ್ಲಿ ಪ್ರಾಮಾಣಿಕತೆ, ಒಂದು ಒಪ್ಪ, ಓರಣ, ಶಿಸ್ತು ಲೆಕ್ಕಾಚಾರವಿರುತ್ತಿತ್ತು. ನಿಘಂಟಿನ ಕಾರ್ಯದ ಪುನರ್ ವ್ಯವಸ್ಥೆ ಕನ್ನಡ ನುಡಿ ಪತ್ರಿಕೆಯ ಪರಿಷ್ಕರಣ, ಗಮಕ ಕಲೆಗೆ ಪ್ರೋತ್ಸಾಹ, ಪ್ರತಿಭಾನ್ವಿತರನ್ನೂ, ಕಲಾವಿದರನ್ನೂ ಸನ್ಮಾನಿಸುವುದು ಇವೆಲ್ಲಾ ಅವರ ಅಧಿಕಾರಾವಧಿಯಲ್ಲಿ ಆದಂತಹ ಕಾರ್ಯಗಳು. ಅಧಿಕಾರದಲ್ಲಿದ್ದಾಗಲೇ ಅವರು ನಮ್ಮನ್ನು ಅಗಲಿದ್ದು ದುರದೃಷ್ಟಕರ ಸಂಗತಿ” ಎಂದು ತಿಳಿಸಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್. ಶ್ರೀಧರ ಮೂರ್ತಿಯವರು ಮಾತನಾಡಿ “ಎಂ.ಆರ್.ಶ್ರೀ.ಯವರ ಸಾಹಿತ್ಯಸೃಷ್ಟಿ ವೈವಿಧ್ಯಮಯವಾದುದು. ‘ಕಂಠೀರವ ವಿಜಯ’, ‘ಧರ್ಮದುರಂತ’, ‘ಯದುವಿಜಯ’ ಮತ್ತು ‘ನಾಗರಿಕ’ ಇವು ನಾಟಕಗಳು. 1933ರಲ್ಲಿ ‘ಕವಿಯ ಸೋಲು’ ಮತ್ತು ಇತರ ಕವಿತೆಗಳು ಪ್ರಕಟವಾದವು. ‘ಕವಿಯ ಸೋಲು’ ಎಂಬುದು ಸರಳರಗಳೆಯ ಪುಟ್ಟ ನಾಟಕ. ‘ರೋಲ್ಸ್ ಮೇಷ್ಟ್ರು’ ಹಾಗೂ ‘ರಂಗಣ್ಣನ ಕನಸಿನ ದಿನಗಳು’ ಎಂ.ಆರ್.ಶ್ರೀ.ಯವರ ವೃತ್ತಿ ಜೀವನದ ಅನುಭವಗಳನ್ನು ಒಳಗೊಂಡಿದೆ. ‘ರಂಗಣ್ಣನ ಕನಸಿನ ದಿನಗಳು’ ಕಥೆಯ ಜಾತಿಗೂ ಸೇರದ, ಕಾದಂಬರಿಯ ಜಾತಿಗೂ ಸೇರದ ಒಂದು ವಿಶಿಷ್ಟವಾದ ಕೃತಿ. ಕುವೆಂಪುರವರು ಇದನ್ನು ‘ಚಿತ್ರಕಾದಂಬರಿ’ ಎಂದು ಕರೆದಿದ್ದಾರೆ. ಕಳೆದ ಶತಮಾನದ ಎರಡನೆಯ ದಶಕದಲ್ಲಿ ಎಂ.ಆರ್.ಶ್ರೀ.ಯವರು ‘ಸಾವಿತ್ರಿ’ ಎನ್ನುವ ಸ್ವತಂತ್ರ ಸಾಮಾಜಿಕ ಕಾದಂಬರಿಯನ್ನು ಬರೆದರು. 1916-17ರಲ್ಲಿ ‘ಕಾದಂಬರಿ ಸಂಗ್ರಹ’ ಎನ್ನುವ ಮಾಸ ಪತ್ರಿಕೆಯಲ್ಲಿ ಇದು ಧಾರಾವಾಹಿಯಾಗಿ ಪ್ರಕಟವಾಯಿತು. ಮುಂದೆ ಇದು ಪುಸ್ತಕರೂಪದಲ್ಲಿ ಪ್ರಕಟಗೊಂಡಿತು. ಎಂ.ಆರ್.ಶ್ರೀ ಅವರ ‘ಮಹಾತ್ಯಾಗ’ ಕಾದಂಬರಿ ಚಲನಚಿತ್ರವಾಗಿಯೂ ಮನ್ನಣೆಯನ್ನು ಪಡೆದಿದೆ” ಎಂದು ವಿವರಗಳನ್ನು ನೀಡಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗಶೆಟ್ಟಿ, ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಆಕ್ಟಿಂಗ್ ಕ್ಲಾಸ್’ ಮೂರು ದಿನಗಳ ಕಾರ್ಯಾಗಾರ | ಆಗಸ್ಟ್ 16, 17 ಮತ್ತು 18
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಸಿಂಚನಾ ಬಾಯರಿ ಇವರ ನೃತ್ಯ ಪ್ರದರ್ಶನ | ಆಗಸ್ಟ್ 5
    roovari

    Comments are closed.

    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.