ಮಂಗಳೂರು : ತುಳು ಕೂಟ (ರಿ.) ಕುಡ್ಲ ಇದರ ವತಿಯಿಂದ ‘ಬಿಸು ಪರ್ಬ’ ಕಾರ್ಯಕ್ರಮವನ್ನು ದಿನಾಂಕ 14 ಏಪ್ರಿಲ್ 2026ರಂದು ಸಂಜೆ 4-30 ಗಂಟೆಗೆ ಮಂಗಳಾದೇವಿ ದೇವಸ್ಥಾನದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಮಂಗಳಾದೇವಿ ಆಡಳಿತ ಮೊಕ್ತೇಸರರಾದ ಶ್ರೀ ಅರುಣ್ ಕುಮಾರ್ ಐತಾಳ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ತುಳು ಕೂಟ (ರಿ.) ಕುಡ್ಲ ಇದರ ಅಧ್ಯಕ್ಷರಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪ್ರಾಯೋಜಕತ್ವದಲ್ಲಿ ಅಪ್ರಕಟಿತ ತುಳು ನಾಟಕಕ್ಕಾಗಿ ತುಳುಕೂಟ ಸಂಯೋಜಿಸಿದ ಸ್ಪರ್ಧೆಯ ವಿಜೇತರಿಗೆ ‘ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ 2026’ ಪ್ರದಾನ ಮಾಡಲಾಗುವುದು. ಪ್ರಥಮ ಬಹುಮಾನ ಶ್ರೀ ರಾಜೇಶ್ ಶೆಟ್ಟಿ ದೋಟ ಇವರ ‘ಒಂಜಿ ಗುತ್ತುದ ಕಥೆ’, ದ್ವಿತೀಯ ಬಹುಮಾನವನ್ನು ಶ್ರೀ ವಿಲಾಸ್ ಕುಮಾರ್ ನಿಟ್ಟೆ ಇವರ ‘ಆಯೆ ಆಣ್ ಮಗೆ’ ಹಾಗೂ ತೃತೀಯ ಬಹುಮಾನವನ್ನು ಶ್ರೀಮತಿ ರಮ್ಯಾ ಬಿ.ಸಿ. ರೋಡ್ ಇವರ ‘ಬಾಲೆ ಪ್ರಹ್ಲಾದೆ’ ನಾಟಕ ಕೃತಿಗಳು ಪಡೆದಿರುತ್ತವೆ. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶರಭೇಶ್ವರ ಕಲಾವಿದರು ಕುಡ್ಲ ಇವರಿಂದ ಮೋಹನ್ ಕೆ. ಬೋಳಾರ್ ವಿರಚಿತ, ನಾಗೇಶ್ ದೇವಾಡಿಗ ಕದ್ರಿ ನಿರ್ದೇಶನದಲ್ಲಿ ‘ಮುಗ ಪುಂಚ’ ತುಳು ಜಾನಪದ ನಾಟಕ ಪ್ರದರ್ಶನಗೊಳ್ಳಲಿದೆ.

