Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    ಶ್ರೀಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ‘ಕರ್ನಾಟಕದ ಶತಾಯುಷಿಗಳು’ ಕೃತಿಯ ಲೋಕಾರ್ಪಣೆ

    June 26, 2025

    ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಬೊಲ್ಕಾಂವ್’ ಸಾಹಿತ್ಯ ಸರಣಿ ಕಾರ್ಯಕ್ರಮಕ್ಕೆ ಚಾಲನೆ | ಸೆಪ್ಟೆಂಬರ್ 7
    Literature

    ‘ಬೊಲ್ಕಾಂವ್’ ಸಾಹಿತ್ಯ ಸರಣಿ ಕಾರ್ಯಕ್ರಮಕ್ಕೆ ಚಾಲನೆ | ಸೆಪ್ಟೆಂಬರ್ 7

    September 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಂಕಣಿ ಭಾಷೆ ಮತ್ತು ಸಾಹಿತ್ಯಕ್ಕೆ ಮೊದಲ ತಲೆಮಾರಿನಿಂದಲೂ ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದಿರುವ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ 44 ವಸಂತಗಳನ್ನು ಪೂರೈಸಿದ ಹಿರಿಯ ಕೊಂಕಣಿ ಸಂಸ್ಥೆಯು ಸಾಹಿತ್ಯ ಸಾದರೀಕರಣಕ್ಕಾಗಿಯೇ ಸಂಸ್ಥೆಯ ಅಂಗಳದಲ್ಲಿ ‘ಬೊಲ್ಕಾಂವ್’ (ಬಾಲ್ಕನಿ) ಎಂಬ ವಿಶಿಷ್ಟ ಕಾರ್ಯಕ್ರಮ ಸರಣಿಯನ್ನು ಆರಂಭಿಸಲಿದೆ. ಈ ಕಾರಣಕ್ಕಾಗಿಯೇ ಪುಟ್ಟ ವೇದಿಕೆ, ದ್ವನಿ, ಬೆಳಕು ಮತ್ತು ಆಸನ ವ್ಯವಸ್ಥೆಯನ್ನು ಮಾಡಲಾಗಿದ್ದು, 40ರಿಂದ 50 ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ. ಸಾಹಿತ್ಯದ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಬರಹಗಾರರಿಗೆ ಆದ್ಯತೆ ನೀಡಲಾಗಿದೆ. ಒಂದು ತಾಸು ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ-ಕಿರಿಯ ಕತೆಗಾರ, ಕವಿ, ಪ್ರಬಂಧಕಾರ ಅಥವಾ ನಾಟಕಕಾರ ತನ್ನ ಕೃತಿಯ ಆಯ್ದ ಭಾಗವನ್ನು ವಾಚಿಸಿ, ಆಹ್ವಾನಿತರೊಂದಿಗೆ ಸಂವಾದ ನಡೆಸಲು ಅವಕಾಶ ಕಲ್ಪಿಸಲಾಗಿದೆ.

    ದಿನಾಂಕ 7 ಸೆಪ್ಟೆಂಬರ್ 2024ರಂದು ಪೂರ್ವಾಹ್ನ 10-00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಇವರು ಸಾಹಿತ್ಯ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕೊಂಕಣಿಯ ಪ್ರಮುಖ ಸಮಕಾಲೀನ ಕತೆಗಾರ ಡಾ. ಮೆಲ್ವಿನ್ ಪಿಂಟೊ ನೀರುಡೆ ಇವರು ಆಯ್ದ ಸಣ್ಣಕತೆಗಳ ಭಾಗಗಳನ್ನು ವಾಚಿಸಿ, ‘ಸಣ್ಣಕತೆ ಮತ್ತು ನಾನು’ ವಿಷಯದ ಮೇಲೆ ವಿಚಾರ ಮಂಡನೆ ಮಾಡಲಿದ್ದಾರೆ. ಪ್ರಸ್ತುತಿಯ ನಂತರ ಶೋತೃಗಳೊಂದಿಗೆ ಸಂವಾದ ನಡೆಯಲಿದೆ.

    ‘ಬೊಲ್ಕಾಂವ್’ ಸಾಹಿತ್ಯ ಸರಣಿ ಕಾರ್ಯಕ್ರಮದಲ್ಲಿ ಕವಿತೆ, ಸಣ್ಣ ಕತೆ, ಕಾದಂಬರಿ, ಪ್ರಬಂಧ, ಅನುವಾದ, ನಾಟಕ – ಹೀಗೆ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ಕೃಷಿ ಮಾಡಿದವರಿಗೆ ತಮ್ಮ ಕೃತಿ ಮತ್ತು ಅನುಭವ ಪ್ರಸ್ತುತ ಪಡಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ. ಉಡುಪಿ ತಾಲೂಕು ‘ಮನೆಯೇ ಗ್ರಂಥಾಲಯ’ದ ನೂರರ ಸಂಭ್ರಮ
    Next Article ಕಟೀಲಿನಲ್ಲಿ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ ಸಮ್ಮೇಳನ | ಸೆಪ್ಟೆಂಬರ್ 5
    roovari

    Comments are closed.

    Related Posts

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    ಶ್ರೀಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ‘ಕರ್ನಾಟಕದ ಶತಾಯುಷಿಗಳು’ ಕೃತಿಯ ಲೋಕಾರ್ಪಣೆ

    June 26, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.