Subscribe to Updates

    Get the latest creative news from FooBar about art, design and business.

    What's Hot

    ನಿರಂತರ ರಂಗ ತಂಡದ ಕಲಾವಿದರಿಂದ ‘ಪಾರ್ಟಿ’ ನಾಟಕ ಪ್ರದರ್ಶನ

    April 4, 2026

    ನಾದನೃತ್ಯ ಶಾಲೆಯಲ್ಲಿ ‘ನಾದಾಲಯ’ ಗೃಹಸಂಗೀತ ಕಛೇರಿ

    April 4, 2026

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಏಪ್ರಿಲ್ 07

    April 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಆದಿಮ’ ಲೇಖನಗಳ ಸಂಕಲನ ಹಾಗೂ ‘ತಾಳಮೇಳ’ ಕವನ ಸಂಕಲನ ಕೃತಿಗಳ ಲೋಕಾರ್ಪಣೆ
    Book Release

    ‘ಆದಿಮ’ ಲೇಖನಗಳ ಸಂಕಲನ ಹಾಗೂ ‘ತಾಳಮೇಳ’ ಕವನ ಸಂಕಲನ ಕೃತಿಗಳ ಲೋಕಾರ್ಪಣೆ

    March 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉರ್ವಸ್ಟೋರ್ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಕೃತಿ ಆಶಯ ಪಬ್ಲಿಕೇಷನ್ಸ್ ಸಹಯೋಗದೊಂದಿಗೆ ಜಾನಪದ ವಿದ್ವಾಂಸ ಹಾಗೂ ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ವಾಮನ ನಂದಾವರ ಇವರ ವಾರ್ಷಿಕ ಸ್ಮರಣೆಯ ಪ್ರಯುಕ್ತ ಚಂದ್ರಕಲಾ ನಂದಾವರ ಇವರು ಸಂಪಾದಿಸಿರುವ ಡಾ. ವಾಮನ ನಂದಾವರ ಅವರ ‘ಆದಿಮ’ ಲೇಖನಗಳ ಸಂಕಲನ ಹಾಗೂ ‘ತಾಳಮೇಳ’ ಕವನ ಸಂಕಲನ ಕೃತಿಗಳ ಲೋಕಾರ್ಪಣೆ ಹಾಗೂ ‘ವಾಮನ ನಂದಾವರ ಚಾವಡಿ’ ಉದಿಪನ ಕಾರ್ಯಕ್ರಮವು ದಿನಾಂಕ 14 ಮಾರ್ಚ್ 2026ರಂದು ಮಂಗಳೂರು ಉರ್ವಸ್ಟೋರಿನ ತುಳು ಭವನದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ‘ಆದಿಮ’ ಕೃತಿ ಪರಿಚಯ ಮಾಡಿದ ಮೈಸೂರು ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಸಂಶೋಧಕ ಡಾ. ಚಲಪತಿ “ಜಾನಪದ ಸಂಶೋಧಕರಾಗಿದ್ದ ಡಾ. ವಾಮನ ನಂದಾವರ ಇವರು ವೈಯಕ್ತಿಕ ನೆಲೆಯಲ್ಲಿ ನಡೆಸಿದ ಅಧ್ಯಯನ ಕೇವಲ ಕರಾವಳಿಯ ಜನಪದೀಯ ಹಾಗೂ ಜನಾಂಗೀಯ ಅಧ್ಯಯನಕ್ಕೆ ಮಾತ್ರ ಸೀಮಿತವಾಗಿರದೆ ಇಡೀ ಕರ್ನಾಟಕದ ಒಳಗೆ ಜನಪದೀಯವಾಗಿ ಜನಾಂಗೀಯ ಅಧ್ಯಯನವನ್ನು ಹೇಗೆ ಮಾಡಬೇಕೆಂಬ ಮಾದರಿಯನ್ನು ತೋರಿಸಿಕೊಟ್ಟಿದೆ” ಎಂದು ಹೇಳಿದರು.

    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕೃತಿ ಬಿಡುಗಡೆಗೊಳಿಸಿದರು. ಉಚ್ಚಿಲ ಕಲಾ ಗಂಗೋತ್ರಿಯ ನಿರ್ದೇಶಕ, ನಿವೃತ್ತ ಪ್ರಾಂಶುಪಾಲ ಸದಾಶಿವ ಅವರು ‘ವಾಮನ ನಂದಾವರ ಚಾವಡಿ’ಯ ನಾಮ ಫಲಕವನ್ನು ಅನಾವರಣಗೊಳಿಸಿದರು. ಡಾ. ವಾಮನ ನಂದಾವರ ಅವರ ‘ತಾಳಮೇಳ’ ಕೃತಿಯನ್ನು ಕವಯಿತ್ರಿ ಜ್ಯೋತಿ ಮಹಾದೇವ ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದೆ ರತ್ನಾವತಿ ಜೆ. ಬೈಕಾಡಿಯವರನ್ನು ಸಮ್ಮಾನಿಸಲಾಯಿತು. ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕ ಬಾಬು ಪಾಂಗಳ ಉಪಸ್ಥಿತರಿದ್ದರು. ತುಳು ಅಕಾಡೆಮಿಯ ಮಾಜಿ ಸದಸ್ಯ ಬೆನೆಟ್ ಅಮ್ಮಣ್ಣ ಕಾರ್ಯಕ್ರಮ ನಿರೂಪಿಸಿದರು. ಆಕೃತಿ ಆಶಯ ಪ್ರಕಾಶಕ ಕಲ್ಲೂರು ನಾಗೇಶ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಚಂದ್ರಕಲಾ ನಂದಾವರ ವಂದಿಸಿದರು. ಸಭಾ ಕಾರ್ಯಕ್ರಮದ ‘ಪದರಂಗಿತ’ ಪ್ರಸ್ತುತಗೊಂಡಿತು.

    baikady felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತ್ಯ ಜ್ಞಾನ ಹೆಚ್ಚಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
    Next Article ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಇವರು ‘ಯಕ್ಷವಿದ್ಯಾಮಾನ್ಯ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ನಿರಂತರ ರಂಗ ತಂಡದ ಕಲಾವಿದರಿಂದ ‘ಪಾರ್ಟಿ’ ನಾಟಕ ಪ್ರದರ್ಶನ

    April 4, 2026

    ನಾದನೃತ್ಯ ಶಾಲೆಯಲ್ಲಿ ‘ನಾದಾಲಯ’ ಗೃಹಸಂಗೀತ ಕಛೇರಿ

    April 4, 2026

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಏಪ್ರಿಲ್ 07

    April 4, 2026

    ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ‘ರಂಗಾಭಿನಯ ಕಾರ್ಯಾಗಾರ’ | ಏಪ್ರಿಲ್ 25 ಮತ್ತು 26

    April 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.