Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲ್ಲಚ್ಚು ಪ್ರಕಾಶನದ ‘ರಜತ ರಂಗು’ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮತ್ತು ಸಾಧಕರಿಗೆ ಸನ್ಮಾನ
    Book Release

    ಕಲ್ಲಚ್ಚು ಪ್ರಕಾಶನದ ‘ರಜತ ರಂಗು’ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮತ್ತು ಸಾಧಕರಿಗೆ ಸನ್ಮಾನ

    January 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಾಹಿತ್ಯ, ಸಂಸ್ಕೃತಿ, ಕಲೆ, ಸಂಘಟನೆ, ಸದ್ವಿಚಾರ ಎಂಬ ನೆಲೆಯಲ್ಲಿ ಕಳೆದ 25 ವರ್ಷಗಳಿಂದ ಪುಸ್ತಕ ಪ್ರಕಟನೆಯಲ್ಲಿ ಸಕ್ರಿಯವಾಗಿರುವ ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ಪ್ರಯುಕ್ತ ‘ರಜತ ರಂಗು’ ಕಾರ್ಯಕ್ರಮಕ್ಕೆ ದಿನಾಂಕ 05 ಜನವರಿ 2025ರಂದು ಮಂಗಳೂರಿನ ಓಶಿಯನ್ ಪರ್ಲ್ ಹೊಟೇಲ್‌ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸಾಹಿತ್ಯ ಅಕಾಡಮಿಯ ನಿವೃತ್ತ ಉಪ ಕಾರ್ಯದರ್ಶಿ ಡಾ. ಮಹಾಲಿಂಗೇಶ್ವರ ಎಸ್.ಪಿ. ಇವರು ಮಾತನಾಡಿ “ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಪರಂಪರೆ ಇದೆ. ಎಲ್ಲವನ್ನೂ ಒಳಗೊಂಡಿರುವ ಕನ್ನಡ ನಾಡು ಬಹುಭಾಷಾ ಸಂಗಮ ಮಾತ್ರವಲ್ಲ ಬಹುತೇಕ ಸಾಹಿತಿಗಳೂ ಕನ್ನಡೇತರ ಭಾಷೆಗಳಲ್ಲಿ ಕೂಡ ಬರೆಯುವ ಶಕ್ತಿ ಹೊಂದಿರುವುದು ನಾಡಿನ ವಿಶೇಷವಾಗಿದೆ” ಎಂದರು.

    ಈ ಸಂದರ್ಭ ಕಲ್ಲಚ್ಚು ಪ್ರಕಾಶನದ ಮುಖ್ಯಸ್ಥ ಮಹೇಶ ಆರ್. ನಾಯಕ್ ರಚಿಸಿದ ‘ಅನೂಗೂಡುನೂ ಬಾ’ ಕಥೆ ಕವನಗಳ ಕಾರುಬಾರಿನೊಳು ಎಂಬ ಕೃತಿಯನ್ನು ಸಾಹಿತಿ ಡಾ. ಪ್ರಭಾಕರ ನೀರುಮಾರ್ಗ ಬಿಡುಗಡೆಗೊಳಿಸಿದರು. ಕಥೆಗಾರ ಡಾ. ಸಂಪೂರ್ಣಾನಂದ ಬಳ್ಕೂರು ಕೃತಿ ಪರಿಚಯ ಮಾಡಿದರು. ಮುಖ್ಯ ಅತಿಥಿಯಾಗಿ ಉದ್ಯಮಿ ಜಯಂತ್ ನಾಯಕ್, ಪೃಥ್ವಿರಾಜ್ ನಾಯಕ್, ಡಾ. ಸ್ಮಿತಾ ನಾಯಕ್ ಭಾಗವಹಿಸಿದ್ದರು. ಕ.ಸಾ.ಪ. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ರಾಜ್ಯ ಮತ್ತು ಹೊರ ರಾಜ್ಯದ ಸಾಧಕರಾದ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಡಿಕೇರಿ, ಡಾ. ಪ್ರಸನ್ನ ಕೆ. ಸಂತೇಕಡೂರು ಮೈಸೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ವಿಕ್ರಂ ಕಾಂತಿಕೆರೆ, ಕನ್ನಡ ಪ್ರಭದ ಮಂಗಳೂರು ಬ್ಯೂರೋ ಮುಖ್ಯಸ್ಥ ರಾಘವೇಂದ್ರ ಅಗ್ನಿಹೋತ್ರಿ, ಸಂಪತ್ ಸಿರಿಮನೆ ಶೃಂಗೇರಿ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ಹಂಝ ಮಲಾರ್, ಎಡ್ವರ್ಡ್ ಲೋಬೊ ತೊಕ್ಕೊಟ್ಟು, ರಾಘವೇಂದ್ರ ಬಿ. ರಾವ್ (ಅನು ಬೆಳ್ಳಿ ಕಾರ್ಕಳ), ಮುಹಮ್ಮದ್ ಆಶೀರುದ್ದೀನ್ ಸಾರ್ತಬೈಲು, ನಾರಾಯಣ ಕುಂಬ್ರ ಪುತ್ತೂರು, ಮಧುರಾ ಕರ್ಣಮ್ ಬೆಂಗಳೂರು, ಡಾ. ಮೋನಾ ಮೆಂಡೋನ್ಸಾ, ಪುಷ್ಪಲತಾ ಪ್ರಭು ಕೊಂಚಾಡಿ, ಪಯ್ಯನ್ನೂರು ರಮೇಶ್ ಪೈ ಕೇರಳ, ಬಿ.ಎನ್. ವಾಸರೆ ದಾಂಡೇಲಿ, ಸುಶೀಲನ್ ಮೋಡಿಯಿಲ್ ಉಡುಪಿ, ಜಗದೀಶ ಭಂಡಾರಿ, ವಿಭಾ ಶ್ರೀನಿವಾಸ್ ನಾಯಕ್, ಕೆ. ಲಕ್ಷ್ಮೀನಾರಾಯಣ, ಕ್ರಿಸ್ಟೋಫರ್ ಜೋನ್ ಡಿಸೋಜ, ಹೊಸದಿಗಂತದ ಸ್ಥಾನೀಯ ಸಂಪಾದಕ ಪ್ರಕಾಶ ಇಳಂತಿಲ, ವಿದ್ಯಾ ಇಡ್ಕಿದು ಅವರನ್ನು ಸನ್ಮಾನಿಸಲಾಯಿತು. ಕಲ್ಲಚ್ಚು ಪ್ರಕಾಶನದ ಮುಖ್ಯಸ್ಥ ಮಹೇಶ್ ಆರ್. ನಾಯಕ್ ಸ್ವಾಗತಿಸಿ, ಕವಿ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಯಕ್ಷ ದಂಪತಿ’ ಶ್ರೀಮತಿ ವಿದ್ಯಾ ಮತ್ತು ಶ್ರೀ ಆನಂದ ಭಟ್ ಕೆಕ್ಕಾರು
    Next Article ಮೂಡಬಿದಿರೆಯಲ್ಲಿ ಉದ್ಘಾಟನೆಗೊಂಡ ಶ್ರೀದೇವಿ ನೃತ್ಯ ಕೇಂದ್ರದ ದ್ವಿತೀಯ ಶಾಖೆ
    roovari

    Add Comment Cancel Reply


    Related Posts

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.