Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪತ್ರಿಕಾ ಭವನದಲ್ಲಿ ಕೃತಿಗಳ ಲೋಕಾರ್ಪಣೆ
    Book Release

    ಮಂಗಳೂರಿನ ಪತ್ರಿಕಾ ಭವನದಲ್ಲಿ ಕೃತಿಗಳ ಲೋಕಾರ್ಪಣೆ

    January 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬರಹಗಾರ್ತಿ ಅಕ್ಷತಾ ರಾಜ್ ಪೆರ್ಲ ಅವರ ‘ಮಂದಾರ ಮಲಕ’ ಮತ್ತು ಬರಹಗಾರ ಬಾಲಕೃಷ್ಣ ಕೊಡವೂರು ಅವರ ‘ಮಾಯದಪ್ಪೆ ಮಾಯಕಂದಾಲ್’ ತುಳು ನಾಟಕ ಕೃತಿಗಳ ಲೋಕಾರ್ಪಣಾ ಕಾರ್ಯಕ್ರಮವು ದಿನಾಂಕ 05-01-2024ರ ಶುಕ್ರವಾರದಂದು ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

    ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು “ಗಂಭೀರ ನಾಟಕಗಳತ್ತ ಪ್ರೇಕ್ಷಕರು ಒಲವು ತೋರುತ್ತಿರುವ ಸಂದರ್ಭದಲ್ಲಿ ಇವೆರಡು ಕೃತಿಗಳು ಬಿಡುಗಡೆಯಾಗಿರುವುದು ಸಕಾಲಿಕವಾಗಿದೆ. ಕೃತಿಗಳ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಇವು ರಂಗಕ್ಕೆ ಇಳಿಯಲಿ” ಎಂದು ಆಶಿಸಿದರು.

    ‘ಮಂದಾರ ಮಲಕ’ ಕೃತಿ ಪರಿಚಯಿಸಿದ ಪ್ರೊ. ಮೀನಾಕ್ಷಿ ರಾಮಚಂದ್ರ ಅವರು ಮಾತನಾಡಿ “ತುಳುವಿನ ವಾಲ್ಮೀಕಿ ಎಂದೇ ಖ್ಯಾತರಾಗಿರುವ ಮಂದಾರ ಕೇಶವ ಭಟ್ ಅವರ 446 ಪುಟಗಳ ‘ಮಂದಾರ ರಾಮಾಯಣ’ ಕೃತಿಯನ್ನು ಅಕ್ಷತಾ ರಾಜ್ ಅವರು ನಾಟಕ ರೂಪಕ್ಕೆ ಇಳಿಸಿದ್ದಾರೆ. ಮೂಲ ರಾಮಾಯಣಕ್ಕೆ ಕುಂದುಬಾರದಂತೆ ನಾಟಕ ನಿರೂಪಣೆ ಮಾಡಲಾಗಿದೆ. ನಾಟಕದಲ್ಲಿ ಸ್ತ್ರೀ ಪಾತ್ರಗಳು ಹೆಚ್ಚು ಪ್ರಭಾವ ಬೀರಿವೆ. ಮಂಥರೆ, ಶೂರ್ಪನಖಿ, ಶಬರಿಯಂತಹ ಸ್ತ್ರೀ ಪಾತ್ರಗಳ ನಿರೂಪಣೆಯು ಓದುಗನಲ್ಲಿ ಹೊಸ ಹೊಳಹು ಮೂಡಿಸುವ ಮೂಲಕ ಸ್ತ್ರೀ ಸಂವೇದಿ ನಾಟಕಗಳ ಸಾಲಿಗೆ ಸೇರಲಿದೆ” ಎಂದರು.

    ‘ಮಾಯದಪ್ಪೆ ಮಾಯಕಂದಾಲ್’ ಕೃತಿ ಪರಿಚಯಿಸಿದ ವಕೀಲ ಶಶಿರಾಜ್ ಕಾವೂರು ಮಾತನಾಡಿ “ಪಾಡ್ದನ ಶೈಲಿಯ ಜನಪದ ನಾಟಕ ಇದಾಗಿದ್ದು, ಪ್ರತಿ ದೃಶ್ಯವೂ ರೋಚಕವಾಗಿದೆ. ತುಳು ಭಾಷೆಯ ಅಪೂರ್ವ ಪದಗಳು ಗಮನ ಸೆಳೆಯುತ್ತವೆ. ತುಳು ನಾಟಕ ಕೃತಿಗಳನ್ನು ಬರಹಗಾರರು ಸ್ವ ಆಸಕ್ತಿಯಿಂದ ಪ್ರಕಟಿಸುತ್ತಿದ್ದು, ತುಳು ನಾಟಕಗಳ ಪ್ರಕಟಣೆಗೆ ತುಳು ಸಾಹಿತ್ಯ ಅಕಾಡೆಮಿಗಳು, ಸಂಘಸಂಸ್ಥೆಗಳು ಒಲವು ತೋರಬೇಕಾಗಿದೆ” ಎಂದರು.

    ‘ಮಂದಾರ ಮಲಕ’ ನಾಟಕ ಕೃತಿಯ ಗೌರವ ಪ್ರತಿಗಳನ್ನು ಮಂದಾರ ರಾಜೇಶ್ ಭಟ್ಟರ ಸಮ್ಮುಖದಲ್ಲಿ ಮಂದಾರ ಟ್ರಸ್ಟ್ (ರಿ) ಇದರ ಪ್ರಧಾನ ಕಾರ್ಯದರ್ಶಿಗಳಾದ ಸಂಗೀತ‌ ಸಂಯೋಜಕ ಪ್ರಮೋದ್ ಸಪ್ರೆ ಇವರಿಗೆ ಹಿರಿಯ ಸಾಹಿತಿ, ರಂಗಕರ್ಮಿ ಡಾ.ನಾ.ದಾಮೋದರ ಶೆಟ್ಟಿ ಹಸ್ತಾಂತರಿಸಿದರು.
    ಅಕ್ಷತಾ ರಾಜ್‍ ಪೆರ್ಲ ಸ್ವಾಗತಿಸಿ, ವಿ.ಕೆ. ಕಡಬ ನಿರೂಪಿಸಿ, ಬಾಲಕೃಷ್ಣ ಕೊಡವೂರು ಕಾರ್ಯಕ್ರಮವನ್ನು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಸ್ವರಚಿನ್ನಾರಿಯಿಂದ ‘ಕನ್ನಡ ಧ್ವನಿ’ ನಾಡಗೀತೆ -ಭಾವಗೀತೆಗಳ ಕಲಿಕಾ ಶಿಬಿರ
    Next Article ಖಿದ್ಮಾ ಫೌಂಡೇಶನಿಂದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ
    roovari

    Add Comment Cancel Reply


    Related Posts

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.