Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ವಿಟ್ಲದಲ್ಲಿ ‘ಭಕ್ತಿ ಕುಸುಮಾಂಜಲಿ’ ಭಕ್ತಿಗೀತೆಗಳ ಸಂಕಲನ ಲೋಕಾರ್ಪಣೆ
    Book Release

    ವಿಟ್ಲದಲ್ಲಿ ‘ಭಕ್ತಿ ಕುಸುಮಾಂಜಲಿ’ ಭಕ್ತಿಗೀತೆಗಳ ಸಂಕಲನ ಲೋಕಾರ್ಪಣೆ

    April 27, 2026Updated:April 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಟ್ಲ : ವಿಟ್ಲ ಸಮೀಪದ ಮಂಗಲಪದವು ‘ರವಿಪ್ರಭಾ’ ಇಲ್ಲಿ ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ಪುದುಕೋಳಿ ಇವರು ರಚಿಸಿದ ಭಕ್ತಿಗೀತೆಗಳ ಸಂಕಲನ ‘ಭಕ್ತಿ ಕುಸುಮಾಂಜಲಿ’ ಕೃತಿಯು ದಿನಾಂಕ 23 ಏಪ್ರಿಲ್ 2026ರಂದು ಲೋಕಾರ್ಪಣೆಗೊಂಡಿತು. ಕೃತಿ ಬಿಡುಗಡೆಗೊಳಿಸಿದ ಪುತ್ತೂರಿನ ಅಂಕಣಕಾರ ಮತ್ತು ನಿವೃತ್ತ ಪ್ರೊಫೆಸರ್ ಪ್ರೊ. ವಿ.ಬಿ. ಅರ್ತಿಕಜೆ ಇವರು ಮಾತನಾಡಿ “ಸಾಹಿತ್ಯವು ಓದುಗರ ವಿಚಾರಗಳನ್ನು ಪ್ರಚೋದಿಸಿ ಮನಸ್ಸನ್ನು ಅರಳಿಸುತ್ತದೆ, ವ್ಯಕ್ತಿತ್ವವನ್ನು ಸುಸಂಸ್ಕೃತಗೊಳಿಸುತ್ತದೆ” ಎಂದು ಹೇಳಿದರು.

    ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಜಿ.ಪಿ. ವೆಂಕಟರಾವ್ ವಾದ್ಯಕೋಡಿ, ಕೃಷ್ಣಭಟ್ ಪುದುಕೋಳಿ ಮತ್ತು ರಾಮಚಂದ್ರ ಭಟ್ ಮಂಗಲಪದವು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಮತ್ತು ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ವಸಂತಕುಮಾರ ಪೆರ್ಲ ಇವರು “ಇತ್ತೀಚಿನ ದಿನಗಳಲ್ಲಿ ಭಕ್ತಿ ಸಾಹಿತ್ಯ ಎಂಬುದು ಕಣ್ಮರೆಯಾಗುತ್ತಿದೆ. ಭಾರತದಲ್ಲಿ, ಅದರಲ್ಲೂ ಕನ್ನಡದಲ್ಲಿ ಭಕ್ತಿ ಸಾಹಿತ್ಯಕ್ಕೆ ಬಹು ದೊಡ್ಡ ಪರಂಪರೆ ಇದೆ. ಭಜನಾ ತಂಡಗಳಿಗೆ ಮತ್ತು ನೃತ್ಯಭಜನೆ ಮಾಡುವವರಿಗೆ ಇಂತಹ ಭಕ್ತಿಗೀತೆಗಳ ಅಗತ್ಯ ತುಂಬ ಇದೆ. ಆರುನೂರಕ್ಕಿಂತ ಹೆಚ್ಚು ಭಕ್ತಿಗೀತೆಗಳನ್ನು ರಚಿಸಿರುವ ಶ್ರೀಮತಿ ವೆಂಕಟೇಶ್ವರಿ ಕೃಷ್ಣಭಟ್ ಇವರ ಸಾಧನೆ ದೊಡ್ಡದು. ಎಲೆಮರೆಯ ಕಾಯಿಗಳಂತೆ ಗ್ರಾಮಾಂತರ ಪ್ರದೇಶಗಳಲ್ಲಿ ನೆಲೆಸಿರುವ ಲೇಖಕರನ್ನು ಮತ್ತು ಕವಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯ ಇದೆ. ಇಂದಿನ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಸೊಗಡು ಕಡಿಮೆಯಾಗುತ್ತಿದ್ದು ಅದಕ್ಕೆ ಉತ್ತೇಜನ ನೀಡಬೇಕಾಗಿದೆ” ಎಂದು ಹೇಳಿದರು.

    ಕವಯಿತ್ರಿ ವೆಂಕಟೇಶ್ವರಿ ಕೃಷ್ಣಭಟ್ ತನ್ನ ಸಾಹಿತ್ಯ ರಚನೆಯ ಹಿಂದಿನ ಪ್ರೇರಣೆಗಳ ಕುರಿತು ಮಾತಾಡಿದರು. ಶ್ರೀಮತಿ ಅಶ್ವಿನಿ ಭರತ್ ಕೋಡ್ಲ ಪುಸ್ತಕದಿಂದ ಆಯ್ದ ಗೀತೆಗಳನ್ನು ಹಾಡಿದರು. ಶ್ರೀಮತಿ ಸೀಮಾ ಗಣೇಶಚಂದ್ರ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿಯರಾದ ಸಮೃದ್ಧಿ ಎಸ್. ಭಟ್ ಮತ್ತು ಶ್ರೀಸ್ಮೃತಿ ಎಲ್.ಪಿ. ಪ್ರಾರ್ಥನೆ ಹಾಡಿದರು. ಅಧ್ಯಾಪಕರಾದ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಶ ಪುದುಕೋಳಿ ವಂದಿಸಿದರು.

    ಕೃತಿಗಳಿಗೆ ಲೇಖಕಿ ವೆಂಕಟೇಶ್ವರಿ ಕೃಷ್ಣಭಟ್ ಪುದುಕೋಳಿ ಇವರ ಮೊಬೈಲ್ ಸಂಖ್ಯೆ 9972959671 ಸಂಪರ್ಕಿಸಿರಿ.

    baikady Book release Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮುಂಬೈ ವಿವಿ ಕುಲಪತಿಗಳಿಂದ ಕನ್ನಡ ಶೋಧ ಸಂಪ್ರಬಂಧಗಳ ಪ್ರದರ್ಶನ, ಉದ್ಘಾಟನೆ ಮತ್ತು ಸಂವಾದ ಕಾರ್ಯಕ್ರಮ
    Next Article ಪುಸ್ತಕ ವಿಮರ್ಶೆ | ಸಾಂಸ್ಕೃತಿಕ ಪುನರ್ ನಿರ್ಮಾಣದ ಆಶಯ
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.