Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಲ್ಲಚ್ಚು ಪ್ರಕಾಶನದಿಂದ ಎರಡು ಕೃತಿಗಳ ಲೋಕಾರ್ಪಣೆ | ಏಪ್ರಿಲ್ 9
    Book Release

    ಕಲ್ಲಚ್ಚು ಪ್ರಕಾಶನದಿಂದ ಎರಡು ಕೃತಿಗಳ ಲೋಕಾರ್ಪಣೆ | ಏಪ್ರಿಲ್ 9

    March 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಳೆದ 24 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ‘ಕಲ್ಲಚ್ಚು ಪ್ರಕಾಶನ’ ಇದರ 99 ಮತ್ತು 100ನೇ ಕೃತಿ ಬಿಡುಗಡೆ, 2024ರ 100ನೇಯ ದಿನವಾದ ದಿನಾಂಕ 09-04-2024ರ ಚಾಂದ್ರಮಾನ ಯುಗಾದಿಯಂದು ಸಂಜೆ 4.00 ಗಂಟೆಗೆ ಮಂಗಳೂರಿನ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ. ಮಹೇಶ ಆರ್. ನಾಯಕ್ ಅವರ ‘ಕೂದಲಿಗೆ ಡೈ ಮಾಡುವಾಗ’ ಕವನ ಸಂಕಲನ ಮತ್ತು ‘ರಾವಣ ವೀಣೆ’ ಕಥಾಸಂಕಲನ ಬಿಡುಗಡೆಗೊಳ್ಳಲಿರುವ ಕೃತಿಗಳು.

    ವಿಜಯ ಕರ್ನಾಟಕ ಪತ್ರಿಕೆಯ ವಿಶ್ರಾಂತ ಸ್ಥಾನೀಯ ಸಂಪಾದಕ ಯು.ಕೆ. ಕುಮಾರನಾಥ್ ಕೃತಿ ಬಿಡುಗಡೆಗೊಳಿಸಲಿದ್ದು, ಅಕ್ಷಯ ಆರ್. ಶೆಟ್ಟಿ ಹಾಗೂ ಅಕ್ಷತಾ ರಾಜ್ ಪೆರ್ಲ ಕೃತಿ ಪರಿಚಯ ಮಾಡಲಿದ್ದಾರೆ. ವಂದನೀಯ ವಿನ್ಸೆಂಟ್ ವಿನೋದ್ ಸಲ್ಡಾನ್ಹಾ ಮತ್ತು ಶ್ರೀನಿವಾಸ ಪೆಜತ್ತಾಯ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವಾರ್ತಭಾರತಿಯ ಪತ್ರಿಕೆ ಸುದ್ದಿ ಸಂಪಾದಕ ಬಿ.ಎಂ. ಬಶೀರ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಪ್ರಕಾಶನದ ಲೇಖಕ ಬಳಗ ಮತ್ತು ಈ ಹಿಂದಿನ ಆವೃತ್ತಿಗಳ ಕಲ್ಲಚ್ಚು ಪ್ರಶಸ್ತಿ ಪುರಸ್ಕೃತರು ಗೌರವ ಆತಿಥಿಗಳಾಗಿ ಉಪಸ್ಥಿತರಿರುವರು.

    ಈ ಸಂದರ್ಭದಲ್ಲಿ ಈ ಹಿಂದಿನ ‘ಕಲ್ಲಚ್ಚು ಪ್ರಶಸ್ತಿ’ ಪುರಸ್ಕೃತರಾಗಿ ಪ್ರಸ್ತುತ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಉಮರ್ ಯು.ಎಚ್. ಮತ್ತು ಪ್ರಕಾಶನದ ಲೇಖಕಿಯಾಗಿ ಇದೀಗ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯೆಯಾಗಿ ಆಯ್ಕೆ ಆದ ವಿಜಯಲಕ್ಷ್ಮಿ ನಾಯಕ್ ಅವರನ್ನು ಅಭಿನಂದಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleರಾಷ್ಟ್ರಕವಿ ಗೋವಿಂದ ಪೈ ಸಂಸ್ಮರಣೆ ಹಾಗೂ ಕನಕ ಚಿಂತನ ವಿಸ್ತರಣೆ ಕೃತಿ ಬಿಡುಗಡೆ
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಪ್ರಕೃತಿ ಮರೂರು ಇವರ ನೃತ್ಯ ಪ್ರದರ್ಶನ | ಏಪ್ರಿಲ್ 1
    roovari

    Add Comment Cancel Reply


    Related Posts

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ‘ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 2026

    July 11, 2026

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.