Subscribe to Updates

    Get the latest creative news from FooBar about art, design and business.

    What's Hot

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಹದಿನೈದು ಪುಸ್ತಕಗಳ ಲೋಕಾರ್ಪಣೆ
    Book Release

    ಕ್ರಿಯೇಟಿವ್ ಕಾಲೇಜಿನಲ್ಲಿ ಹದಿನೈದು ಪುಸ್ತಕಗಳ ಲೋಕಾರ್ಪಣೆ

    July 4, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಅಜೆಕಾರು : ಹಿರ್ಗಾನದ ಕ್ರಿಯೇಟಿವ್ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ಸಭಾಂಗಣದಲ್ಲಿ ದಿನಾಂಕ 01-07-2024ರಂದು ಪುಸ್ತಕ ಮನೆ ಪ್ರಕಾಶನದ ವತಿಯಿಂದ ನಾಡಿನ ಹೆಸರಾಂತ ಸಾಹಿತಿಗಳ 15 ಪುಸ್ತಕಗಳನ್ನು ಖ್ಯಾತ ಬರಹಗಾರ ಜೋಗಿ ನಾಮಾಂಕಿತ ಗಿರೀಶ್ ರಾವ್ ಹತ್ವಾರ್ ಇವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಾಯಿತು.

    ಈ ಸಂದರ್ಭದಲ್ಲಿ ನರೇಂದ್ರ ಪೈರವರ ಆಯ್ದ ವಿಮರ್ಶೆಗಳನ್ನು ಒಳಗೊಂಡ ‘ಸಾವಿರದೊಂದು ಪುಸ್ತಕ’, ಯಶೋದಾ ಮೋಹನ್ ಇವರ ‘ಇಳಿ ಹಗಲಿನ ತೇವಗಳು’ ಎಂಬ ಕಥಾಸಂಕಲನ, ಸುಧಾ ನಾಗೇಶ್ರಒವರ ‘ಹೊಂಬೆಳಕು’ ಎಂಬ ಚಿಂತನ ಬರಹಗಳು, ವಾಣಿ ರಾಜ್ ರವರ ಕಥಾಸಂಕಲನ ‘ಸವಿನೆನಪುಗಳ ಹಂದರ’, ಡಾ. ಸುಬ್ರಹ್ಮಣ್ಯ ಸಿ. ಕುಂದೂರುರವರ ಮಲೆನಾಡಿನ ಕಥನವಾದ ‘ಜೀವನಯಾನ’, ರಾಜೇಂದ್ರ ಭಟ್ ಇವರ ‘ರಾಜಪಥ’ ಎಂಬ ಲೇಖನಗಳ ಪುಸ್ತಕ, ಕೊಂಡಳ್ಳಿ ಪ್ರಭಾಕರ ಶೆಟ್ಟಿಯವರ ‘ಸಾರ್ಥಕ ಜೀವನಕ್ಕೆ ಕಗ್ಗೋಪದೇಶ’ ಎಂಬ ಲೇಖನಗಳು, ದಿಗಂತ್ ಬಿಂಬೈಲ್ ಇವರ ‘ಕೊಂದ್ ಪಾಪ ತಿಂದ್ ಪರಿಹಾರ’ ಎಂಬ ಕಥಾ ಪ್ರಸಂಗಗಳು, ಡಾ. ರಾಜಶೇಖರ್ ಹಳೆ ಮನೆಯವರ ಕಾದಂಬರಿ ‘ಒಡಲುಗೊಂಡವರು’, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್.ರವರ ‘ಅರಿವಿನ ದಾರಿ’ ಎಂಬ ಲೇಖನಗಳ ಪುಸ್ತಕ, ಅನುಬೆಳ್ಳೆ ನಾಮಾಂಕಿತ ರಾಘವೇಂದ್ರ ಬಿ. ರಾವ್ ಇವರ ‘ನಗುವ ನಯನ ಮಧುರ ಮೌನ’ ಎಂಬ ಕಾದಂಬರಿ, ರಾಮಕೃಷ್ಣ ಹೆಗಡೆಯವರ ‘ಒಲವಧಾರೆ’ ಎಂಬ ಕವನ ಸಂಕಲನ, ಲಲಿತಾ ಮುದ್ರಾಡಿಯವರ ಕವನ ಸಂಕಲನ ‘ಅರ್ಥವಾಗದವರು’, ಲಕ್ಷ್ಮಣ ಬಜಿಲರ ಕವನ ಸಂಕಲನ ‘ನಿರ್ವಾಣ’, ಮಹೇಶ್ ಪುತ್ತೂರುರವರ ಕಾದಂಬರಿ ‘ವರ್ಣ’ ಎಂಬ ಕೃತಿಗಳು ಲೋಕಾರ್ಪಣೆಗೊಂಡವು.

    ಈ ಸಂದರ್ಭದಲ್ಲಿ ಮಾತನಾಡಿದ ಗಿರೀಶ್ ರಾವ್ ಹತ್ವಾರ್ “ಶಿಕ್ಷಣ ಎನ್ನುವುದು ಸಂಪಾದನೆಗೆ ಸಹಕಾರಿಯಾದರೆ, ಸಾಹಿತ್ಯವು ನಮ್ಮನ್ನು ಪರಿಪೂರ್ಣ ಮನುಷ್ಯನನ್ನಾಗಿ ರೂಪಿಸುತ್ತದೆ. ಪುಸ್ತಕದಿಂದ ಭಾವ ಜಗತ್ತು ವಿಸ್ತಾರಗೊಳ್ಳುತ್ತದೆ” ಎಂದು ತಿಳಿಸಿದರು. ಶಾಸಕ ವಿ. ಸುನಿಲ್ ಕುಮಾರ್ ಇವರು ಮಾತನಾಡಿ “ಹೊಸತನವಿರದ ವ್ಯಕ್ತಿ ಪರಿಪೂರ್ಣನಲ್ಲ. ವ್ಯಕ್ತಿ ಪರಿಪೂರ್ಣವಾಗಬೇಕಾದರೆ ಪುಸ್ತಕಗಳ ಓದು ಅವಶ್ಯಕ. ಪುಸ್ತಕ ಮನೆಯ ಪರಿಕಲ್ಪನೆ ಶಿಕ್ಷಣದೊಂದಿಗೆ ಸಾಹಿತ್ಯ ಬೆಳವಣಿಗೆಗೆ ಪ್ರೇರಣೆಯಾಗಿದ್ದು, ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿಸಲು ಸಹಕಾರಿಯಾಗಿದೆ” ಎಂದು ಹೇಳಿದರು. ಕಾರ್ಕಳ ಕ.ಸಾ.ಪ. ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ “ಹೃದಯ ಶ್ರೀಮಂತಿಕೆ ಹೆಚ್ಚಿಸಲು ಸಾಹಿತ್ಯ ಕೃತಿಗಳು ಸಹಕಾರಿಯಾಗಿವೆ” ಎಂದರು.

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಪ್ತ ಸಂಸ್ಥಾಪಕರು, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವಥ್ ಎಸ್.ಎಲ್. ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕಾ ತೀರ್ಥರಾಮರವರು ಲೇಖಕರ ಸನ್ಮಾನ ಕಾರ್ಯಕ್ರಮವನ್ನು ನಿರೂಪಿಸಿದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್.ಕೆ.ಯವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ‘ಅನಂತ ನಮನ’ ಕಾರ್ಯಕ್ರಮ | ಜುಲೈ 7
    Next Article ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ
    roovari

    Add Comment Cancel Reply


    Related Posts

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಸುಳ್ಯದ ಕನ್ನಡ ಭವನದಲ್ಲಿ ಮಕ್ಕಳ ಕಥಾ ರಚನೆ ಕಾರ್ಯಾಗಾರ | ಮೇ 30

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.