ಬಳ್ಳಾರಿ : ಟಿ.ಕೆ. ಗಂಗಾಧರ ಪತ್ತಾರ ಇವರ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 08 ಫೆಬ್ರುವರಿ 2026ರಂದು ಬೆಳಗ್ಗೆ 10-00 ಗಂಟೆಗೆ ಬಳ್ಳಾರಿ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾಧ್ಯಕ್ಷರಾದ ಡಾ. ನಿಷ್ಠಿ ರುದ್ರಪ್ಪ ಇವರು ಉದ್ಘಾಟನೆ ಮಾಡಲಿದ್ದು, ಲೋಹಿಯಾ ಪ್ರಕ್ರಶನದ ಸಿ. ಚೆನ್ನಬಸವಣ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಸಿ.ಬಿ. ಚಿಲ್ಕರಾಗಿ ಕೃತಿ ಲೋಕಾರ್ಪಣೆ ಮಾಡಲಿದ್ದು, ವಿಶ್ರಾಂತ ಕಲಾ ಶಿಕ್ಷಕ ಕೆ.ಬಿ. ಸಿದ್ಧಲಿಂಗಪ್ಪ ಕೃತಿ ಪರಿಚಯ ಮಾಡಲಿದ್ದಾರೆ.

