Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ನೃತ್ಯ ವಿಮರ್ಶೆ | ಕೀರ್ತನಾಳ ಮನಸೆಳೆದ ನೃತ್ಯಾವಳಿ

    January 12, 2026

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದಲ್ಲಿ ‘ಸುನಂದಾ ಬೆಳಗಾಂವಕರ [ವ್ಯಕ್ತಿತ್ವ-ಸಾಹಿತ್ಯ]’ ಪುಸ್ತಕ ಲೋಕಾರ್ಪಣೆ | ಡಿಸೆಂಬರ್ 29
    Book Release

    ಧಾರವಾಡದಲ್ಲಿ ‘ಸುನಂದಾ ಬೆಳಗಾಂವಕರ [ವ್ಯಕ್ತಿತ್ವ-ಸಾಹಿತ್ಯ]’ ಪುಸ್ತಕ ಲೋಕಾರ್ಪಣೆ | ಡಿಸೆಂಬರ್ 29

    December 18, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಆಯೋಜಿಸುವ ‘ಸುನಂದಾ ಬೆಳಗಾಂವಕರ [ವ್ಯಕ್ತಿತ್ವ-ಸಾಹಿತ್ಯ]’ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರ ರವಿವಾರದಂದು ಸಂಜೆ ಐದು ಘಂಟೆಯಿಂದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿರುವ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ನಡೆಯಲಿದೆ.

    ಖ್ಯಾತ ಸಾಹಿತಿಗಳಾದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಪ್ರೊ. ರಾಘವೇಂದ್ರ ಪಾಟೀಲ ಕೃತಿ ಲೋಕಾರ್ಪಣೆಗೊಳಿಸಲಿರುವರು. ಯುವ ಸಾಹಿತಿಗಳಾದ ಶ್ರೀ ವಿಕಾಸ ಹೊಸಮನಿ ಕೃತಿಯ ಕುರಿತು ಮಾತನಾದಲಿದ್ದು, ಕೃತಿಯ ಲೇಖಕರಾದ ಡಾ. ಸುಭಾಷ ಪಟ್ಟಾಜೆ ಉಪಸ್ಥಿತರಿರುವರು. ಅತಿಥಿಗಳಾಗಿ ಪ್ರಕಾಶಕರಾದ ಡಾ. ವೈಜಯಂತಿ ಸೂರ್ಯನಾರಾಯಣ ಹಾಗೂ ಶ್ರೀಮತಿ ಸೀಮಾ ಕುಲಕರ್ಣಿ ಭಾಗವಹಿಸಲಿದ್ದಾರೆ.

    ಡಾ. ಸುಭಾಷ್ ಪಟ್ಟಾಜೆ :

    ಡಾ. ಸುಭಾಷ್ ಪಟ್ಟಾಜೆಯವರು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಡಾ. ಯು. ಮಹೇಶ್ವರಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ಮತ್ತು ಮಲಯಾಳಂ ಸಣ್ಣ ಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ’ ಎಂಬ ಸಂಶೋಧನ ಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಹವ್ಯಾಸಿ ಕತೆಗಾರರಾಗಿರುವ ಇವರ ಕತೆ, ಕವಿತೆ, ಲೇಖನ ಮತ್ತು ಇನ್ನೂರಕ್ಕೂ ಮಿಕ್ಕ ಪುಸ್ತಕ ವಿಮರ್ಶೆಗಳು ಕನ್ನಡ ನಾಡಿನ ಪ್ರಸಿದ್ಧ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆ, ಡಿಜಿಟಲ್ ಪತ್ರಿಕೆ, ಮಂಗಳೂರು ಆಕಾಶವಾಣಿ ಮತ್ತು ಖಾಸಗಿ ಬಾನುಲಿ ಕೇಂದ್ರಗಳ ಮೂಲಕ ಪ್ರಸಾರಗೊಂಡಿವೆ. ಗೋಡೆ ಮೇಲಿನ ಗೆರೆಗಳು (ಕಥಾ ಸಂಕಲನ) ಅನುಪಮ ಅಕ್ಷರೋಪಾಸಕ ಎ. ನರಸಿಂಹ ಭಟ್ (ವ್ಯಕ್ತಿ ಚಿತ್ರಣ) ಕಥನ ಕಾರಣ (ಸಂಶೋಧನ ಕೃತಿ) ಶ್ರುತಿ ಹಿಡಿದು ಜೊತೆ ನಡೆದು (ವಿಮರ್ಶಾ ಲೇಖನಗಳ ಸಂಗ್ರಹ) ನುಡಿದು ಸೂತಕಿಗಳಲ್ಲ, ಇಹಪರದ ಧ್ಯಾನ, ಪ್ಲಾಸಿಬೋ (ಸಂಪಾದಿತ) ಎಂಬ ಕೃತಿಗಳನ್ನು ಹೊರತಂದಿರುವ ಇವರು ಕಾಸರಗೋಡು ಜಿಲ್ಲೆಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆ ಶೇಣಿಯಲ್ಲಿ ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯ ಸಂಚಾಲಕರಾಗಿ, ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸದಸ್ಯರಾಗಿ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುತ್ತಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕುಂದಾಪುರದ ಕುಂದೇಶ್ವರ ದೇಗುಲದಲ್ಲಿ ದಿ. ರಾಮಚಂದ್ರ ತೌಳ ಬೀಜಾಡಿ ಸಂಸ್ಮರಣೆ  
    Next Article ತಿಂಗಳ ನಾಟಕ ಸಂಭ್ರಮದಲ್ಲಿ ‘ನಿತ್ಯಸಚಿವ’ ನಾಟಕ ಪ್ರದರ್ಶನ | ಡಿಸೆಂಬರ್ 21
    roovari

    Add Comment Cancel Reply


    Related Posts

    ‘ನೀ ಮಾಯೆಯೊಳಗೋ ನಿನ್ನೊಳು ಮಾಯೆಯೊ’ ಕಥಾ ಸಂಕಲನ ಲೋಕಾರ್ಪಣೆ

    January 9, 2026

    ಮಂಗಳೂರಿನ ‘ಡಾ. ಟಿ.ಎಂ.ಎ. ಪೈ ಸೆಂಟರ್’ನಲ್ಲಿ ‘ಮಂಗಳೂರು ಲಿಟ್ ಫೆಸ್ಟ್’ | ಜನವರಿ 10 ಮತ್ತು 11

    January 8, 2026

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.