Subscribe to Updates

    Get the latest creative news from FooBar about art, design and business.

    What's Hot

    ಬೋಂದೆಲ್ ಕಲಾಗ್ರಾಮದಲ್ಲಿ ‘ಯಕ್ಷ ನಾಟ್ಯ ತರಬೇತಿ’ | ಜೂನ್ 07

    June 5, 2025

    ಮಂಚಿಯಲ್ಲಿ ಗೃಹ ಪ್ರವೇಶೋತ್ಸವದ ಪ್ರಯುಕ್ತ ತಾಳಮದ್ದಳೆ

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಬೈಯಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಇವರ ಕೃತಿಗಳ ಅನಾವರಣ | ಆಗಸ್ಟ್ 24
    Book Release

    ಮುಂಬೈಯಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಇವರ ಕೃತಿಗಳ ಅನಾವರಣ | ಆಗಸ್ಟ್ 24

    August 23, 2024Updated:August 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮುಂಬಯಿ: ಕರಾವಳಿ ಕರ್ನಾಟಕದ ಹೆಸರಾಂತ ಸಾಹಿತಿ, ಕವಿ-ಲೇಖಕ ಮತ್ತು ಯಕ್ಷಗಾನ ವಿದ್ವಾಂಸರಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರ ನೂತನ ಕೃತಿಗಳಾದ ‘ಸೃಷ್ಟಿಸಿರಿಯಲ್ಲಿ ಪುಷ್ಪವೃಷ್ಟಿ’ ಮತ್ತು ‘ಸೀಯನ’ ಇದರ ಲೋಕಾರ್ಪಣಾ ಸಮಾರಂಭವು 24 ಆಗಸ್ಟ್ 2024ರ ಶನಿವಾರದಂದು ಮುಂಬೈ ವಿದ್ಯಾ ವಿಹಾರ್ ಪೂರ್ವದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ಮಂದಿರದಲ್ಲಿ ಲೋಕಾರ್ಪಣೆಗೊಳ್ಳಲಿದೆ.
    ಅಂದು ಸಂಜೆ ಘಂಟೆ 4.30ಕ್ಕೆ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಪ್ರಸಕ್ತ ವರ್ಷ ನಡೆಯಲಿರುವ ಸರಣಿ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಜೊತೆಗೆ ಈ ಕಾರ್ಯಕ್ರಮ ನೆರವೇರಲಿದೆ.
    ‘ಸೃಷ್ಟಿಸಿರಿಯಲ್ಲಿ ಪುಷ್ಪವೃಷ್ಟಿ’ ಕನ್ನಡ ಕವನ ಸಂಕಲನ:
     ಕವಿ ಕುಕ್ಕುವಳ್ಳಿಯವರು ಬೇರೆ ಬೇರೆ ಸಂದರ್ಭಗಳಲ್ಲಿ ರಚಿಸಿದ ವಿವಿಧ ಕನ್ನಡ ಕವನಗಳು ಕಾವ್ಯ ಸಿರಿ, ಭಾವ ಸಿರಿ, ಭಕ್ತಿ ಸಿರಿ ಎಂಬ ಮೂರು ವಿಭಾಗಗಳಲ್ಲಿ  ಪ್ರಕಟವಾಗಿರುವ  ‘ಸೃಷ್ಟಿ ಸಿರಿಯಲ್ಲಿ ಪುಷ್ಪವೃಷ್ಠಿ’ : ಭಾವ – ಅನುಭಾವ ಗೀತೆಗಳ ಗುಚ್ಛವನ್ನು ಅಂಬಿಕಾ ಮಂದಿರದ ಧರ್ಮದರ್ಶಿ ವೇ. ಮೂ. ಪೆರ್ಣಂಕಿಲ ಹರಿದಾಸ ಭಟ್ ಅನಾವರಣಗೊಳಿಸುವರು.
    ‘ಸೀಯನ’ ತುಳು ಗೊಂಚಿಲ್:
     ಮಾತೃಭಾಷೆ ತುಳುವಿನಲ್ಲಿ ‘ಸಬಿ ಸೀಯನ’, ‘ಸೀಪೆ ಸೀಯನ’, ‘ಸುಗಿಪು ಸೀಯನ’ ಎಂಬ ಮೂರು ಗೊಂಚಲುಗಳಾಗಿ ಹೊರಬಂದಿರುವ ‘ಸೀಯನ’ ಚೀಪೆ ಕೋಪೆದ ಪಾಕ ಕಬಿತೆಲು – ಸಂಕಲನವನ್ನು ಮುಂಬೈಯ ಹಿರಿಯ ಸಾಹಿತಿ ಡಾ. ಸುನೀತಾ ಎಂ. ಶೆಟ್ಟಿ ಬಿಡುಗಡೆಗೊಳಿಸುವರು. ಈ ಎರಡೂ ಕವನ ಸಂಕಲನಗಳನ್ನು ಮೈಸೂರಿನ ರಾಜ್ ಪ್ರಕಾಶನ ಸಂಸ್ಥೆ ಪ್ರಕಟಿಸಿದೆ.
    ಮುಂಬೈಯ ಹಿರಿಯ  ಅರ್ಥಧಾರಿ ಕೆ. ಕೆ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಕೃತಿಕರ್ತರಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿರುವರು. ಕಲಾವಿದ ಸದಾಶಿವ ಆಳ್ವ ತಲಪಾಡಿ ಕೃತಿ ಪರಿಚಯಿಸಲಿದ್ದು, ಕಲಾ ಸಂಘಟಕ ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸುವರು.
    ‘ತುಳುನಾಡ ಬಲೀಂದ್ರೆ- ಜಾಬಾಲಿ ನಂದಿನಿ’ ತಾಳಮದ್ದಳೆ:
     ಉದ್ಘಾಟನಾ ಸಮಾರಂಭದ ಬಳಿಕ ತಾಳಮದ್ದಳೆ ಸರಣಿಯ ಮೊದಲ ಕಾರ್ಯಕ್ರಮವಾಗಿ ‘ತುಳುನಾಡ ಬಲೀಂದ್ರೆ’ (ತುಳು) ಹಾಗೂ ‘ಜಾಬಾಲಿ-ನಂದಿನಿ’ (ಕನ್ನಡ) ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು. ಭಾಗವತರಾಗಿ ದೇವಿಪ್ರಸಾದ್ ಆಳ್ವ ತಲಪಾಡಿ, ಹಿಮ್ಮೇಳದಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಮತ್ತು ಪ್ರಶಾಂತ್ ಶೆಟ್ಟಿ ವಗೆನಾಡು ಭಾಗವಹಿಸುವರು. ಭಾಸ್ಕರ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ, ಗುರುತೇಜ ಶೆಟ್ಟಿ ಒಡಿಯೂರು ಅರ್ಥಧಾರಿಗಳಾಗಿ ಭಾಗವಹಿಸಲಿದ್ದಾರೆ. ಎಂದು ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ‘ಬರ್ಬರೀಕ’
    Next Article ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
    roovari

    Comments are closed.

    Related Posts

    ಬೋಂದೆಲ್ ಕಲಾಗ್ರಾಮದಲ್ಲಿ ‘ಯಕ್ಷ ನಾಟ್ಯ ತರಬೇತಿ’ | ಜೂನ್ 07

    June 5, 2025

    ಮಂಚಿಯಲ್ಲಿ ಗೃಹ ಪ್ರವೇಶೋತ್ಸವದ ಪ್ರಯುಕ್ತ ತಾಳಮದ್ದಳೆ

    June 5, 2025

    ಯಕ್ಷಗಾನ ಅಕಾಡೆಮಿಯಿಂದ ಕಲಾವಿದರಿಗಾಗಿ ಕಲಾಪಗಳು

    June 4, 2025

    ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಾದಾವಧಾನ ವಾರ್ಷಿಕೋತ್ಸವ | ಜೂನ್ 07

    June 4, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.