Subscribe to Updates

    Get the latest creative news from FooBar about art, design and business.

    What's Hot

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ
    Beary

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಬ್ಯಾರಿ ಕಲಾರಂಗ ಮಂಗಳೂರು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಪ್ರಥಮ ಕಾರ್ಯಕ್ರಮವಾಗಿ ಸಂಘದ ಅಧ್ಯಕ್ಷ ಅಜೀಜ್ ಬೈಕಂಪಾಡಿ ವಿರಚಿತ ‘ಬ್ಯಾರಿ ಬಾಸೆ ಪಡಿಕೋರು’ ಎಂಬ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 12 ಜೂನ್ 2025ರ ಗುರುವಾರದಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು.

    ಸಮಾರಂಭದಲ್ಲಿ ಪುಸ್ತಕ ಲೋಕಾರ್ಪಣೆಗೊಳಿಸಿದ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ ಮಾತನಾಡಿ “ದ. ಕ. ಜಿಲ್ಲೆ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಅರೆಭಾಷೆ ಹೀಗೆ ವೈವಿಧ್ಯಮಯ ಭಾಷಿಗರ ಪ್ರದೇಶವಾಗಿದೆ. ‘ಬ್ಯಾರಿ ಭಾಷೆ ಪಡಿಕೋರು’ ಪುಸ್ತಕ ಭಾಷೆಯ ಬೆಳವಣಿಗೆಯ ಜತೆಗೆ ಹೊಸಬರಿಗೆ ಬ್ಯಾರಿ ಭಾಷೆಯ ಶಬ್ದಗಳನ್ನು ತಿಳಿಯಲು ಸಹಕಾರಿಯಾಗಿದೆ” ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಮಹಮ್ಮದ್ ಬಡ್ಡೂರು ಮಾತನಾಡಿ “ಭಾಷೆಯಲ್ಲಿ ಮೇಲು, ಕೀಳು ಎಂಬುವುದಿಲ್ಲ. ಮಾತನಾಡುವವರ ಸಂಖ್ಯೆಯಲ್ಲಿ ಮಾತ್ರ ಹೆಚ್ಚು ಕಡಿಮೆ ಇದೆ. ಹೊರ ಜಿಲ್ಲೆಗಳಿಂದ ಬರುವ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ‘ಬ್ಯಾರಿ ಬಾಸೆ ಪಡಿಕೋರು’ ಪುಸ್ತಕ ಉತ್ತಮ ಕೈಪಿಡಿಯಾಗಿದೆ” ಎಂದರು.

    ಬ್ಯಾರಿ ಕಲಾರಂಗದ ಅಧ್ಯಕ್ಷರಾದ ಲೇಖಕ ಅಜೀಜ್ ಬೈಕಂಪಾಡಿ ಮಾತನಾಡಿ “ಬ್ಯಾರಿ ಭಾಷೆಯನ್ನು ಇತರ ಭಾಷಿಗರು ಸುಲಭವಾಗಿ ಕಲಿಯುವಂತಾಗಲಿ ಎನ್ನುವ ಉದ್ದೇಶದಿಂದ ವಿವಿಧ ಇಲಾಖೆ, ವಿದ್ಯಾಸಂಸ್ಥೆ ಹಾಗೂ ಗ್ರಂಥಾಲಯಗಳಿಗೆ ಈ ಪುಸ್ತಕವನ್ನು ಉಚಿತವಾಗಿ ಹಂಚಲಾಗುವುದು” ಎಂದರು.
    ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಪುಸ್ತಕದ ಪ್ರಥಮ ಪ್ರತಿ ನೀಡಲಾಯಿತು. ಬ್ಯಾರಿ ಕಲಾರಂಗದ ಸದಸ್ಯರಾದ ಇಸ್ಮಾಯಿಲ್ ಮೂಡುಶೆಡ್ಡೆ. ಶಾಹುಲ್ ಹಮೀದ್, ಸತೀಶ್ ಸುರತ್ಕಲ್, ಡಾ. ಸಿದ್ದೀಕ್ ಅಡ್ಡೂರು ಉಪಸ್ಥಿತರಿದ್ದರು.

    baikady beary Book release roovari
    Share. Facebook Twitter Pinterest LinkedIn Tumblr WhatsApp Email
    Previous Articleಶಿಲ್ಪಿ ಶೇಶಪ್ಪ ಆಚಾರ್ಯ ಕಲ್ಲೊಟ್ಟೆ ನಿಧನ
    Next Article ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ
    roovari

    Add Comment Cancel Reply


    Related Posts

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ

    July 5, 2025

    ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ದತ್ತಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಮತ್ತು ಕವಿಗೋಷ್ಠಿ | ಜೂನ್ 06

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.