Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ಗೋವಿಂದ ಪೈ ಸಂಶೋಧನಾ ಸಂಪುಟ -1 
    Book Release

    ಲೋಕಾರ್ಪಣೆಗೊಂಡ ಗೋವಿಂದ ಪೈ ಸಂಶೋಧನಾ ಸಂಪುಟ -1 

    November 19, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಗೋವಿಂದ ಪೈ ಸಂಶೋಧನಾ ಸಂಪುಟ-1 ಇದರ ಲೋಕಾರ್ಪಣಾ ಸಮಾರಂಭವು ದಿನಾಂಕ 16 ನವೆಂಬರ್ 2024ರ ಶನಿವಾರ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಶ್ರಾಂತ ಕುಲಪತಿ ಹಾಗೂ  ಗೋವಿಂದ ಪೈ ಸಂಶೋಧನಾ ಸಂಪುಟದ ಪ್ರಧಾನ ಸಂಪಾದಕರಾದ ಡಾ. ಬಿ. ಎ. ವಿವೇಕ್ ರೈ ಮಾತನಾಡಿ “ಸಂಶೋಧನೆಯೆಂದರೆ ಕೇವಲ ವಿಷಯಾಧಾರಿತ ಸಾಮಗ್ರಿ ಸಂಗ್ರಹವಲ್ಲ. ಒಳಗೊಳ್ಳುವಿಕೆ, ತಾತ್ವಿಕತೆ, ಸಿದ್ದಾಂತ, ವೈಜ್ಞಾನಿಕತೆ ಎಲ್ಲವನ್ನೂ ಹೊಂದಿರಬೇಕು. ಈ ರೀತಿಯ ಸಂಶೋಧನೆಯನ್ನು ರಾಷ್ಟ್ರಕವಿ ಗೋವಿಂದ ಪೈ ಅವರ ಬರಹಗಳಲ್ಲಿ ಕಾಣಲು ಸಾಧ್ಯ. ಅದು ಎಲ್ಲವನ್ನೂ ಒಳಗೊಂಡಿರುವ ಸಮಗ್ರತೆಯ ಹೂರಣ. ಕಾಲ ಯಾರಿಗೂ ಕಾಯುವುದಿಲ್ಲ. ನಾವು ಕಾಲದ ಜತೆಗೆ ಸೆಣಸಾಡಬೇಕು. ಗೋವಿಂದ ಪೈ ಅವರ ಆದರ್ಶ ಸಂಶೋಧನಾ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಪುಸ್ತಕವನ್ನು ಓದಿದರೆ ಸಾಲದು. ಓದಿ ಅರಿಯಬೇಕು. ಅರಿತಾಗ ನಾವು ಸ್ನಾತರಾಗುತ್ತೇವೆ. ಆಗ ಗ್ರಂಥದ ಶುದ್ಧತ್ವ ತಿಳಿಯುತ್ತದೆ. ಪುಸ್ತಕ ಮನೆಯಲ್ಲಿಡುವುದು ಶೋಭೆಗಲ್ಲ, ಜ್ಞಾನಾರ್ಜನೆಗೆ ಎಂಬುದು ಅಷ್ಟೇ ಮುಖ್ಯ.” ಎಂದರು.
    ಕೃತಿಯನ್ನು ಲೋಕಾರ್ಪಣೆಗೊಳಿಸಿದ ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ “ಎರಡನೇ ಸಂಪುಟವೂ ಶೀಘ್ರ ಬರುವಂತಾಗಲಿ.” ಎಂದು ಹಾರೈಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಸಂಪುಟದ ಬಗ್ಗೆ ಮಾತನಾಡಿದರು. ಕೃತಿಯ ಸಂಪಾದಕರಾದ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡಕ, ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಂಪುಟ ರಚನೆಯಾದ ಬಗೆಯನ್ನು ವಿವರಿಸಿದರು. ಇವರಿಬ್ಬರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.
    ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿ, ಸಹಸಂಶೋಧಕ ಡಾ. ಅರುಣ ಕುಮಾರ್ ಎಸ್. ಆರ್. ನಿರೂಪಿಸಿ, ವಂದಿಸಿದರು. ಗೋವಿಂದ ಪೈ ಸಂಶೋಧನ ಸಂಪುಟ ಗ್ರಂಥವನ್ನು ಕಾಲೇಜು ಆವರಣದಲ್ಲಿ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆಯಲ್ಲಿ ಸಭಾಂಗಣಕ್ಕೆ ತರಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದಿಂದ ‘ಸುವರ್ಣ ಪರ್ವ -3’ | ನವೆಂಬರ್ 23
    Next Article ‘ಅರಿವು ತಿಳಿವು’ ಸರಣಿಯಲ್ಲಿ ‘ಬೃಹದಾರಣ್ಯಕ ಉಪನಿಷತ್ತು’ ವಿಷಯದ ಉಪನ್ಯಾಸ 
    roovari

    Add Comment Cancel Reply


    Related Posts

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ಪುಸ್ತಕ ವಿಮರ್ಶೆ | ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರ ವಿಮರ್ಶಾ ಕೃತಿ ‘ಗ್ರಂಥಾಲೋಕ’

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.