ಪುತ್ತೂರು : ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಹಿತಿ ಕೆ. ಆರ್. ತೇಜಕುಮಾರ್ ಬಡ್ಡಡ್ಕ ಇವರ ವ್ಯಕ್ತಿತ್ವ ಹಾಗೂ ಕೃತಿ ಪರಿಚಯದ ‘ತಿಂಗಳ ಸಾಹಿತ್ಯ ಸಂವಾದ ಮಾಲಿಕೆ’ ಕಾರ್ಯಕ್ರಮದಲ್ಲಿ ಸಾಹಿತಿ ಉಲ್ಲಾಸ್ ಕಜೋಡಿ ಬರೆದ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 20 ಜೂನ್ 2025ರಂದು ಕುರುಂಜಿಬಾಗ್ ನಲ್ಲಿರುವ ಸಂದ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು.
ಸಂದ್ಯಾರಶ್ಮಿ ಸಾಹಿತ್ಯ ಸಂಘದ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಸಾಹಿತಿಗಳಾದ ಅರವಿಂದ ಚೊಕ್ಕಾಡಿ ಕೃತಿ ಲೋಕಾರ್ಪಣೆಗೊಳಿಸಿದರು. ನಿವೃತ್ತ ಉಪನ್ಯಾಸಕ ರಾಮಚಂದ್ರ ಪಳಂಗಾಯ ಇವರು ವ್ಯಕ್ತಿತ್ವ ಪರಿಚಯ ಮಾಡಿ, ನಿವೃತ್ತ ಉಪ ಪ್ರಾಂಶುಪಾಲರಾದ ಬಾಬು ಮಾಸ್ತರ್ ಅಚೆಪ್ಪಾಡಿ ಕೃತಿ ಪರಿಚಯಿಸಿದರು.
ಸಮಾರಂಭದಲ್ಲಿ ಸಾಹಿತಿ ಕೆ. ಆರ್. ತೇಜಕುಮಾರ್ ಬಡ್ಡಡ್ಕ, ಬಂಟಮಲೆ ಅಕಾಡೆಮಿಯ ಅಧ್ಯಕ್ಷರಾದ ಸಾಹಿತಿ ಎ. ಕೆ. ಹಿಮಕರ, ಸುಳ್ಯ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷರಾದ ಡಾ. ಎಸ್. ರಂಗಯ್ಯ ಉಪಸ್ಥಿತರಿದ್ದರು. ಗೋಪಾಲಕೃಷ್ಣ ಆಶಯ ಗೀತೆಯ ಜೊತೆಗೆ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮ ನಿರೂಪಿಸಿದರು.
Subscribe to Updates
Get the latest creative news from FooBar about art, design and business.