ಧರ್ಮಸ್ಥಳ : ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ “ಕಲಾಂತರಂಗ 2023-24″ವನ್ನು ದಿನಾಂಕ 31 ಜುಲೈ 2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆ ನಡೆಸುತ್ತಿರುವ ಕಾರ್ಯಾಚರಣೆಗಳ ಬಗ್ಗೆ ವಿಶೇಷವಾಗಿ ಸುವರ್ಣ ವರ್ಷದ ವಿಶಿಷ್ಟ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಉಡುಪಿಗೆ ಬಂದಾಗ ಸಂಸ್ಥೆಯ ನೂತನ ಕಟ್ಟಡ ಐ.ವೈ.ಸಿ.ಗೆ ಭೇಟಿ ನೀಡುವುದಾಗಿ ಹೆಗಡೆಯವರು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಸದಸ್ಯರಾದ ಬಿ. ಭುವನಪ್ರಸಾದ್ ಹೆಗ್ಡೆ ಹಾಗೂ ವಿನೋದಾ ಉಪಸ್ಥಿತರಿದ್ದರು. ಸಂಚಿಕೆಯು ಸಂಸ್ಥೆಯ ಸದಸ್ಯರಾದ ಪೃಥ್ವಿರಾಜ್ ಕವತ್ತಾರ್ ಇವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿದೆ.
Subscribe to Updates
Get the latest creative news from FooBar about art, design and business.
Previous Articleಶ್ರೀ ಎಡನೀರು ಮಠದಲ್ಲಿ ‘ಯಕ್ಷಗಾನ ತಾಳಮದ್ದಳೆ ನವಾಹ’ | ಆಗಸ್ಟ್ 3ರಿಂದ 11
Related Posts
Comments are closed.
