Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ
    Book Release

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉರ್ವ : ಕೆನರಾ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕಿ ರಾಜೇಶ್ವರಿ ಕುಡುಪು ಇವರು ರಚಿಸಿದ ‘ಕಲಾಸಂಪದ’ ಚಿತ್ರಕಲಾ ಮಾರ್ಗದರ್ಶಿ ಪುಸ್ತಕ ಬಿಡುಗಡೆ ನಗರದ ಪತ್ರಿಕಾಭವನದಲ್ಲಿ ದಿನಾಂಕ 16 ಮೇ 2025ರಂದು ನಡೆಯಿತು.

    ಪುಸ್ತಕ ಬಿಡುಗಡೆಗೊಳಿಸಿದ ಮಂಗಳೂರು ಉತ್ತರ ವಲಯದ ಜೇಮ್ಸ್ ಕುಟಿನ್ಹ ಮಾತನಾಡಿ, “ಕಲಾಶಿಕ್ಷಕಿಯಾಗಿ ರಾಜೇಶ್ವರಿಯವರ ಸೇವೆ ಮೆಚ್ಚುವಂತದ್ದು. ಉತ್ತರ ವಲಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಚಿತ್ರಕಲಾ ಗ್ರೇಡಿಂಗ್ ಪರೀಕ್ಷೆಗೆ ಹಾಜರಾಗಲು ವಿಶೇಷ ಕ್ರಮ ವಹಿಸಲಾಗುವುದು, ‘ಕಲಾಸಂಪದ’ ಪುಸ್ತಕ ಚಿತ್ರಕಲಾ ವಿದ್ಯಾರ್ಥಿಗಳಿಗೆ ಉತ್ತಮ ಕೈಪಿಡಿಯಾಗಿದ್ದು, ಎಲ್ಲರೂ ಕೊಂಡು ಓದಬೇಕು” ಎಂದರು.

    ಲೇಖಕಿ ರಾಜೇಶ್ವರಿ ಕುಡುಪು ಮಾತನಾಡಿ “ರಚನಾ ಕೌಶಲ, ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಈ ರೀತಿಯ ಕಲೆಯನ್ನು ಇನ್ನು ಹೆಚ್ಚು ವಿದ್ಯಾರ್ಥಿಗಳನ್ನು ತಲುಪಬೇಕು. ಈ ಉದ್ದೇಶದಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ಕಲಾಸಂಪಕ’ ಎಂಬ ಪುಸ್ತಕ ರಚನೆ ಮಾಡಿ ಎರಡನೇ ಆವೃತ್ತಿಯನ್ನು ಕನ್ನಡ, ಆಂಗ್ಲ ಮಾಧ್ಯಮದೊಂದಿಗೆ ಪುಸ್ತಕ ರೂಪದಲ್ಲಿ ಹೊರತರಲಾಗಿದೆ. ಈ ಪುಸ್ತಕ ಎಂಟನೇ ತರಗತಿ ಮಕ್ಕಳಿಗೆ ಮಾರ್ಗದರ್ಶನವಾಗಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಗ್ರೇಡ್ ಪರೀಕ್ಷೆಗೆ ಹಾಜರಿರುವ ಮಕ್ಕಳಿಗೂ ಇದು ಉಪಯುಕ್ತವಾಗಿದೆ. ಇದನ್ನು ಶಿಕ್ಷಣ ಇಲಾಖೆಯ ಚಿತ್ರಕಲಾ ಶಿಕ್ಷಕರ ಕೈಪಿಡಿ, ಚಿತ್ರಕಲಾ ಸಿಂಚನ ಇವೆಲ್ಲದರ ಮಾರ್ಗದರ್ಶನದಲ್ಲಿ ಹಾಗೂ ಅದೇ ಮಾದರಿಯಲ್ಲಿ ರಚಿಸಲಾಗಿದೆ” ಎಂದು ತಿಳಿಸಿದರು.

    ಕೆನರಾ ಹೈಸ್ಕೂಲ್ ಸಂಚಾಲಕಿ ಅಶ್ವಿನಿ ಕಾಮತ್, ಡೊಂಗರಕೇರಿ ಕೆನರಾ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಅರುಣಾಕುಮಾರಿ ಸಿ., ಹಿರಿಯ ಕಲಾವಿದರಾದ ಪೆರ್ಮುದೆ ಮೋಹನ್ ಕುಮಾರ್. ವಸಂತ ಕೇದಿಗೆ, ರಾಜೇಂದ್ರ ಕೇದಿಗೆ ಉಪಸ್ಥಿತರಿದ್ದರು.

    baikady Book release drawing roovari
    Share. Facebook Twitter Pinterest LinkedIn Tumblr WhatsApp Email
    Previous Articleಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ
    Next Article ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.