Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗ ಲೋಕದಲ್ಲಿ ಲೋಕಾರ್ಪಣೆಗೊಂಡ ‘ಕಪ್ಪು ಹಲ್ಲಿನ ಕಥೆಗಳು’ ಕಾದಂಬರಿ
    Book Release

    ರಂಗ ಲೋಕದಲ್ಲಿ ಲೋಕಾರ್ಪಣೆಗೊಂಡ ‘ಕಪ್ಪು ಹಲ್ಲಿನ ಕಥೆಗಳು’ ಕಾದಂಬರಿ

    August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ : ಕಲಾವಿದ ಉಮೇಶ್ ತೆಂಕನಹಳ್ಳಿ ಅವರ ಚೊಚ್ಚಲ ಕೃತಿ ‘ಕಪ್ಪು ಹಲ್ಲಿನ ಕಥೆಗಳು’ ಕಾದಂಬರಿ ಲೋಕಾರ್ಪಣೆಯು ದಿನಾಂಕ 12 ಆಗಸ್ಟ್ 2024ರಂದು ಚನ್ನರಾಯಪಟ್ಟಣ ರಾಘವೇಂದ್ರ ಸಾಮಿಲ್ ರಸ್ತೆಯ ರಂಗ ಲೋಕದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಜನಪದ ವಿದ್ವಾಂಸ ಡಾ. ಚಂದ್ರು ಕಾಳೇನಹಳ್ಳಿ “ಸಾಹಿತ್ಯ ರಚನೆ ನಮ್ಮನ್ನು ಸಂಸ್ಕಾರವಂತರನ್ನಾಗಿ ಮಾಡುತ್ತದೆ. ಪುಸ್ತಕ ರಚನೆಯಿಂದ ಹಣ ಸಿಗುತ್ತದೆ ಎಂಬುದು ಸುಳ್ಳು. ಇದು ಎಲ್ಲರ ವಿಷಯದಲ್ಲೂ ಒಂದೇ ರೀತಿ ಇರುವುದಿಲ್ಲ. ನಮ್ಮೊಳಗಿನ ತುಡಿತವನ್ನು ಹೊರಹಾಕಲು ಸಾಹಿತ್ಯ ರಚನೆ ನೆರವಾಗುತ್ತದೆ. ಆದ್ದರಿಂದ ನಮ್ಮ ವಿಕಾಸವೂ ಸಾಧ್ಯ, ಆ ಮೂಲಕ ಯಶಸ್ಸು ಗಳಿಸಬಹುದು. ಯಾವುದೇ ಕೃತಿಯು ಪ್ರತಿ ಬಾರಿ ಓದಿದಾಗಲೂ ಹೊಸದೊಂದು ಅನುಭವ ನೀಡಿದರೆ ಅದು ಸಾರ್ಥಕತೆಯಾದಂತೆ. ಉದಯೋನ್ಮುಖ ಲೇಖಕರಿಗೆ ಹಲವು ಸವಾಲುಗಳಿದ್ದು, ಅವುಗಳನ್ನು ಎದುರಿಸಬೇಕಾಗಿದೆ. ಸಾಹಿತ್ಯದ ಓದನ್ನು ಮರೆತಿರುವ ಜನ ಮೊಬೈಲ್ ನೋಡುವುದಕ್ಕೆ ತಮ್ಮ ಸಮಯ ವಿನಿಯೋಗ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ” ಎಂದು ಹೇಳಿದರು.

    ರಂಗಕರ್ಮಿ ಪ್ರಸಾದ್ ರಕ್ಷಿದಿ ಮಾತನಾಡಿ “ಅಧ್ಯಯನ ಮತ್ತು ಅನುಭವದಿಂದ ಸಾಹಿತ್ಯದ ಮಜಲುಗಳನ್ನು ಗುರುತಿಸಬಹುದಾಗಿದ್ದು, ಅಧ್ಯಯನವಿಲ್ಲದಿದ್ದರೆ ಸಾಹಿತ್ಯದ ಸೂಕ್ಷ್ಮತೆ ತಿಳಿಯುವುದಿಲ್ಲ. ಕಲೆಯನ್ನು ಕೇವಲ ಮಾರಾಟದ ಸರಕಾಗಿ ನೋಡಬಾರದು. ನಮ್ಮ ಸಮಾಜ, ಸಾಂಸ್ಕೃತಿಕವಾಗಿ ಹಿಂದೆ ಬೀಳದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದ್ದಾಗಬೇಕು” ಎಂದರು.

    ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ಎನ್. ಲೋಕೇಶ್ ಮಾತನಾಡಿ, “ಮನರಂಜನೆ ನಮ್ಮ ಮನಸ್ಸನ್ನು ವಿಕಾಸಗೊಳಿಸುವಂತಿರಬೇಕು” ಎಂದರು. ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿ ಮಾತನಾಡಿ “ದಿನೇ ದಿನೇ ಲೇಖಕರ ಸಂಖ್ಯೆಯು ಕಡಿಮೆಯಾಗುತ್ತಿದೆ ಹಾಗೂ ಲೇಖನ ಓದುವವರ ಸಂಖ್ಯೆಯೂ ಕೂಡ ಕಡಿಮೆಯಾಗುತ್ತಿದೆ. ಆದ್ದರಿಂದ ಸರ್ಕಾರ ಲೇಖನ ಬರೆಯುವವರಿಗೆ ಹೆಚ್ಚಿನ ನೆರವನ್ನು ನೀಡುವಲ್ಲಿ ಸಹಕಾರಿಯಾಗಬೇಕು. ಜೊತೆಗೆ ಲೇಖನ ಬರೆಯುವವರ ಸಂಖ್ಯೆಯನ್ನು ಹೆಚ್ಚು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು” ಎಂದರು. ಮೈಸೂರು ರಂಗಾಯಣ ರಂಗ ನಿರ್ದೇಶಕ ಆರಸೀಕೆರೆ ಯೋಗಾನಂದ, ಬಿ.ಆರ್. ರವೀಶ್ ಹಾಗೂ ಉಮೇಶ್ ತೆಂಕನಹಳ್ಳಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬಯಿಯಲ್ಲಿ ‘ಯಕ್ಷ ಜ್ಞಾನ ಯಾನ’ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 19ರಿಂದ 22
    Next Article ಹೆಬ್ರಿಯಲ್ಲಿ ಸುವರ್ಣ ಆರಾಧನಾ ಪ್ರಯುಕ್ತ ‘ಹರಿಕಥೆ’ | ಆಗಸ್ಟ್ 21
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.