Subscribe to Updates

    Get the latest creative news from FooBar about art, design and business.

    What's Hot

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ
    Book Release

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಇದರ ಆಶ್ರಯದಲ್ಲಿ 49ನೆಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ದಿನಾಂಕ 10 ಜನವರಿ 2026ರಂದು ನಡೆಯಿತು.

    ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಬಿ. ಸತ್ಯವತಿ ಎಸ್. ಭಟ್ ಕೊಳಚಪ್ಪು ಇವರ ಹನ್ನೆರಡನೆಯ ಕೃತಿ ‘ಹೆಜ್ಜಾಲದ ಬಿಳಲುಗಳು’ ಕೌಟುಂಬಿಕ ಕಥಾ ಹಂದರವನ್ನು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಇಂಜಿನಿಯರ್ ಬಿ. ಮಹಾಬಲ ತಿಲಕ ಮಂಗಳೂರು ಇವರು ಬಿಡುಗಡೆಗೊಳಿಸಿ ಅಮ್ಮನ ಸಾಹಿತ್ಯ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿದರು.

    ಹಿರಿಯ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಕೃತಿಯ ಪರಿಚಯಗೈದು “ಕೃತಿಗಾರ್ತಿ ಸತ್ಯವತಿ ಭಟ್ ಕೊಳಚಪ್ಪು ಇವರಲ್ಲಿ ಕೌಟುಂಬಿಕ ಕಥೆಯನ್ನು ಹೆಣೆಯುವ ಸಾಮರ್ಥ್ಯ ರಕ್ತಗತವಾಗಿದೆ. ಯಾವ ರೀತಿ ಕಥೆಗಳು ಓದುಗರ ಮನಸ್ಸನ್ನು ಸೆಳೆಯಬೇಕು ಎನ್ನುವುದನ್ನು ಚೆನ್ನಾಗಿ ಅರಿತುಕೊಂಡು ವಿವಿಧ ರೀತಿಯ ಕಥೆಗಳನ್ನು ವಿಭಿನ್ನವಾಗಿ ಜೋಡಿಸಿರುವುದು ನಿಜಕ್ಕೂ ವಿಶೇಷವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    “ಎಂಭತ್ತೊಂದರ ಹರೆಯದಲ್ಲಿ ಅತ್ಯಂತ ಹುರುಪಿನಿಂದ, ಎಲ್ಲರಿಗೂ ಸ್ಫೂರ್ತಿಯಂತಿರುವ ಬಿ. ಸತ್ಯವತಿ ಎಸ್. ಭಟ್ ಕೊಳಚಪ್ಪು ಇವರು ವಿವಿಧ ಪ್ರಕಾರಗಳ ಸಾಹಿತ್ಯದಲ್ಲಿ ಕೈಯಾಡಿಸಿರುವ ರೀತಿ ನಿಜಕ್ಕೂ ಶ್ಲಾಘನೀಯ. ‘ಹೆಜ್ಜಾಲದ ಬಿಳಲುಗಳು’ ಇದರಲ್ಲಿರುವ ಒಟ್ಟು 23 ಕಥೆಗಳು ತಾಯಿ ಸರಸ್ವತಿಯ ಕೊರಳನ್ನು ಅಲಂಕರಿಸುವ ‘ಮುತ್ತಿನ ಹಾರ’ಗಳಂತಿವೆ” ಎಂದು ಸಭಾಧ್ಯಕ್ಷತೆ ವಹಿಸಿದ ಡಾ. ಅರುಣಾ ನಾಗರಾಜ್ ಪ್ರಶಂಸೆಗೈದರು.

    ತಾಯಿ ಸರಸ್ವತಿಯ ಅನುಗ್ರಹದಿಂದ ಮತ್ತು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳ ಪ್ರೋತ್ಸಾಹದಿಂದ ಇದುವರೆಗೆ ಒಟ್ಟು ಹನ್ನೆರಡು ಕೃತಿಗಳನ್ನು ಪ್ರಕಟಿಸಲು ಸಾಧ್ಯವಾಯಿತು. ಕೃತಿ ಬಿಡುಗಡೆಯ ಇಂದಿನ ದಿನ ನನ್ನ ಜೀವನದಲ್ಲಿ ಅವಿಸ್ಮರಣೀಯವಾಗಿ ಮೂಡಿಬಂದಿದೆ ಎಂದು ಸಹಕರಿಸಿದ ಸರ್ವರಿಗೆ ಕೃತಿಕಾರರು ಬಿ. ಸತ್ಯವತಿ ಎಸ್. ಭಟ್ ಕೊಳಚಪ್ಪು ಧನ್ಯವಾದ ಸಲ್ಲಿಸಿದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಯುವ ಲೇಖಕ ಲತೀಶ್ ಎಂ. ಸಂಕೋಳಿಗೆ ಉಪಸ್ಥಿತರಿದ್ದರು. ಕವಯಿತ್ರಿ ಶಿಕ್ಷಕಿ ಸುರೇಖಾ ಯಳವಾರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ
    Next Article ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’
    roovari

    Add Comment Cancel Reply


    Related Posts

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.