Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ

    July 11, 2025

    ಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ

    July 11, 2025

    ಡಾ.ವಿವೇಕ್ ರೈಗೆ ಚಿದಾನಂದ ಪ್ರಶಸ್ತಿ

    July 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀನಾಥ್ ಬಸ್ರೂರು ಇವರ ‘ಒಮ್ಮೊಮ್ಮೆ ಅನಿಸಿದ್ದು’ ಅಂಕಣ ಬರಹಗಳ ಪುಸ್ತಕ ಬಿಡುಗಡೆ
    Book Release

    ಶ್ರೀನಾಥ್ ಬಸ್ರೂರು ಇವರ ‘ಒಮ್ಮೊಮ್ಮೆ ಅನಿಸಿದ್ದು’ ಅಂಕಣ ಬರಹಗಳ ಪುಸ್ತಕ ಬಿಡುಗಡೆ

    July 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬಳ್ಕೂರು ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕ ಶ್ರೀನಾಥ್ ಬಸ್ರೂರು ಇವರು ಬರೆದ ‘ಒಮ್ಮೊಮ್ಮೆ ಅನಿಸಿದ್ದು’ ಅಂಕಣ ಬರಹಗಳ ಪುಸ್ತಕವನ್ನು ದಿನಾಂಕ 10 ಜುಲೈ 2025ರಂದು ಮಂಗಳೂರಿನ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.

    ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಪುಟ್ಟಣ ಕುಲಾಲ್ ಪ್ರತಿಸ್ಥಾನದ ಅಧ್ಯಕ್ಷ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಇವರು, “ಹಲವು ವಿಚಾರಗಳಿಗೆ ತನ್ನೊಳಗಿನ ಚಿಂತನೆಯನ್ನು ಸೇರಿಸಿ ಓದುಗರಿಗೆ ಉಣಬಡಿಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಲೇಖಕರು ಮಾಡಿದ್ದಾರೆ. ಇದರಲ್ಲಿ ಕಿವಿಮಾತು, ಸರಿ- ತಪ್ಪು, ನ್ಯಾಯ ಅನ್ಯಾಯಗಳ ಬಗ್ಗೆ ತುಲನಾತ್ಮಕ ಚಿಂತನೆ ಇದೆ. ಯುವ ಜನತೆಗೆ ಒಂದಷ್ಟು ಪ್ರೇರಣ ಸಾಹಿತ್ಯ ನೀಡುವಲ್ಲಿ ಇದು ಯಶಸ್ವಿಯಾಗಲಿ” ಎಂದು ತಿಳಿಸಿದರು.

    ಲೇಖಕ ಶ್ರೀನಾಥ್ ಬಸ್ರೂರು ಮಾತನಾಡಿ, “ಮುಂಜಾವಿನ ನಡಿಗೆ ಸಮಯದಲ್ಲಿ ಒಮ್ಮೊಮ್ಮೆ ಅನಿಸಿದ, ಹಲವೊಮ್ಮೆ ನೆನಪಾದ, ಕೆಲವು ವಿಷಯಗಳನ್ನು ಬರೆದು ಪುಸ್ತಕ ರೂಪದಲ್ಲಿ ಓದುಗರ ಮುಂದೆ ಇಟ್ಟಿದ್ದೇನೆ. ಇದು ಮೊದಲ ಪ್ರಯತ್ನವಾಗಿದ್ದು ಓದುಗರ ಪ್ರೀತಿಯ ಹಾರೈಕೆಯ ಅಗತ್ಯವಿದೆ” ಎಂದು ಹೇಳಿದರು.

    ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಅಂಚೆ ಚೀಟಿ ಸಂಗ್ರಾಹಕಿ ವಿದ್ಯಾ ಆಶೋರಿ ಬಾಗಲೋಡಿ ಮೊದಲಾದವರು ಉಪಸ್ಥಿತರಿದ್ದರು. ಟ್ರಸ್ಟ್ ಅಧ್ಯಕ್ಷ ಕರುಣಾಕರ ಬಳ್ಕೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ‘ಸಾಹಿತ್ಯ ಅಭಿಯಾನ -3’ | ಜುಲೈ 12
    Next Article ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ವಿಶೇಷ ಉಪನ್ಯಾಸ
    roovari

    Add Comment Cancel Reply


    Related Posts

    ಪ್ರಸಿದ್ಧ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಅವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ‘ಯಕ್ಷಸಾಧಕ’ ಪ್ರಶಸ್ತಿ

    July 11, 2025

    ಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ

    July 11, 2025

    ಡಾ.ವಿವೇಕ್ ರೈಗೆ ಚಿದಾನಂದ ಪ್ರಶಸ್ತಿ

    July 11, 2025

    ಭರತಾಂಜಲಿ (ರಿ.) ಕೊಟ್ಟಾರ ಸಂಸ್ಥೆಯಿಂದ ಗಣೇಶಪುರದಲ್ಲಿ ‘ಗುರು ಪೂರ್ಣಿಮ’ ಕಾರ್ಯಕ್ರಮ | ಜುಲೈ 13

    July 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.